ಮರ ಬಿದ್ದು ಗಾಯಗೊಂಡ ಮಹಿಳೆ 68 ದಿನಗಳಿಂದ ಆಸ್ಪತ್ರೆಯಲ್ಲಿ 


Team Udayavani, Aug 17, 2018, 10:33 AM IST

17-agust-3.jpg

ಮಹಾನಗರ: ಮಂಗಳಾ ದೇವಿಯಲ್ಲಿ ಜೂನ್‌ 8ರಂದು ಮರದ ಗೆಲ್ಲು ಬಿದ್ದು ಗಾಯಗೊಂಡಿದ್ದ ಮಹಿಳೆ ಮಾರ್ನಮಿಕಟ್ಟೆಯ ಸುರೇಖಾ ಕೋಟ್ಯಾನ್‌ (53) ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. 68 ದಿನಗಳಿಂದ ಆಸ್ಪತ್ರೆಯ ಹಾಸಿಗೆಯಲ್ಲಿಯೇ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೂನ್‌ 8ರಂದು ಶ್ರೀ ಮಂಗಳಾ ದೇವಿ ದೇವಸ್ಥಾನದ ಎದುರಿನ ನಾಗನ ಕಟ್ಟೆಯ ಬೃಹತ್‌ ಅಶ್ವತ್ಥ ಮರದ ದೊಡ್ಡ ಗಾತ್ರದ ಗೆಲ್ಲೊಂದು ಬಿರುಗಾಳಿ ಮಳೆಗೆ ದಿಢೀರನೆ ಮುರಿದು ಬಿದ್ದು ನಂದಿಗುಡ್ಡೆಯ ಪ್ರವೀಣ್‌ ಸುವರ್ಣ (49), ಮಾರ್ನಮಿಕಟ್ಟೆಯ ಸುರೇಖಾ ಕೋಟ್ಯಾನ್‌ (53) ಮತ್ತು ತೇಜಸ್ವಿನಿ (20) ಹಾಗೂ ಜೆಪ್ಪು ಕುಡುಪಾಡಿಯ ರಿಕ್ಷಾ ಚಾಲಕ ನವೀನ್‌ ಮಡಿವಾಳ (45) ಅವರು ಗಾಯಗೊಂಡಿದ್ದರು.

ಸುರೇಖಾ ಅವರನ್ನು ಹೊರತುಪಡಿಸಿ ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲವೇ ದಿನಗಳಲ್ಲಿ ಮನೆಗೆ ಮರಳಿದ್ದರು. ಸುರೇಖಾ ಅವರ ತಲೆ, ಕುತ್ತಿಗೆ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅದು ಗುಣವಾಗಿದೆ. ತಲೆಯ ಗಾಯವೂ ಗುಣಮುಖವಾಗಿದೆ. ಆದರೆ ಕುತ್ತಿಗೆಗೆ ಆಗಿರುವ ಪೆಟ್ಟಿನಿಂದ ಚೇತರಿಸಿಲ್ಲ. ಅದನ್ನು ಸರಿಪಡಿಸಲು ಟ್ರಾಕ್ಷನ್‌ ಅಳವಡಿಸಲಾಗಿದ್ದು, ಈಗಾಗಲೇ ಆರು ವಾರ ಕಳೆದಿವೆ.

ಅವರ ಆರೈಕೆಯನ್ನು ಪತಿ ಮಾಜಿ ಸೈನಿಕ ರತ್ನಾಕರ ಕೋಟ್ಯಾನ್‌, ಪುತ್ರರಾದ ರೋಶನ್‌, ಸುಶಾನ್‌ ನೋಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿದ್ದ ಕಿರಿಯ ಪುತ್ರ ಸುಶಾನ್‌ ತಾಯಿಯ ಆರೈಕೆ ಮಾಡಲು ಉದ್ಯೋಗವನ್ನು ತೊರೆದು ಬಂದಿದ್ದಾರೆ. ಚಿಕಿತ್ಸೆಯ ವೆಚ್ಚ ಭರಿಸಲು ರತ್ನಾಕರ ಕೋಟ್ಯಾನ್‌ ಹರಸಾಹಸ ಪಡುತ್ತಿದ್ದಾರೆ. ತಮ್ಮ ವಿಮಾ ಸೌಲಭ್ಯವನ್ನು ಬಳಸಿಯೂ ಸಾಕಾಗದ ಕಾರಣ ಸರಕಾರದ ನೆರವನ್ನು ಯಾಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಶಾಸಕ ವೇದವ್ಯಾಸ ಕಾಮತ್‌, ಮಾಜಿ ಶಾಸಕ ಜೆ.ಆರ್‌. ಲೋಬೋ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಹಾಯ ಒದಗಿಸುವ ಭರವಸೆ ನೀಡಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆಸ್ಪತ್ರೆ ಬಿಲ್‌ನಲ್ಲಿ ಕಡಿತ ಮಾಡುವಂತೆ ಕೆಎಂಸಿ ಆಸ್ಪತ್ರೆಯ ಆಡಳಿತಕ್ಕೆ ಮನವಿ ಮಾಡಿದ್ದು, ‘ಆಸ್ಪತ್ರೆ ಬಿಲ್‌ ಕಡಿಮೆ ಮಾಡುವ ಬಗ್ಗೆ ಅಲ್ಲಿನ ಆಡಳಿತ ಭರವಸೆ ನೀಡಿದೆ. ಅವರಿಗೆ ನೆರವಾಗುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ಮಂಗಳಾ ದೇವಿ ದೇವಸ್ಥಾನದ ವತಿಯಿಂದ 20,000 ರೂ. ನೀಡಲಾಗಿದ್ದು, ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 12,500 ರೂ. ನೆರವು ಲಭಿಸಿದೆ. ಆದರೆ ಆಸ್ಪತ್ರೆ ಬಿಲ್‌ ಈಗಾಗಲೇ 4.5 ಲಕ್ಷ ರೂ. ದಾಟಿದ್ದು, 5 ಲಕ್ಷ ರೂ. ಗಳಾಗುವ ಸಾಧ್ಯತೆ ಇದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಬಳಿಕವೂ ಕೆಲವು ತಿಂಗಳ ಚಿಕಿತ್ಸೆ ಬೇಕಾಗಬಹುದು. ಸರಕಾರದ ವತಿಯಿಂದ ಹೆಚ್ಚುವರಿ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಜನ ಪ್ರತಿನಿಧಿಗಳು ಆಸ್ಪತ್ರೆಗೆ ಭೇಟಿ ನೀಡಿ ಭರವಸೆ ನೀಡಿದ್ದರೂ ಇದುವರೆಗೆ ಹೆಚ್ಚುವರಿ ನೆರವು ಲಭಿಸಿಲ್ಲ ಎಂದು ರತ್ನಾಕರ ಕೋಟ್ಯಾನ್‌ ತಿಳಿಸಿದ್ದಾರೆ. ಸಾರ್ವಜನಿಕರ ನೆರವನ್ನು ಅವರು ಯಾಚಿಸಿದ್ದು, ಸಿಂಡಿಕೇಟ್‌ ಬ್ಯಾಂಕಿನ ಖಾತೆ ಸಂಖ್ಯೆ 01422030001407 ಇದಕ್ಕೆ ಕಳುಹಿಸಬಹುದು ಎಂದವರು ಮನವಿ ಮಾಡಿದ್ದಾರೆ. 

ಟಾಪ್ ನ್ಯೂಸ್

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.