ರಾ.ಹೆ.ಗೆ ಮರ ಬಿದ್ದು 3 ತಾಸು ಟ್ರಾಫಿಕ್‌ ಜಾಮ್‌


Team Udayavani, Jul 21, 2018, 11:25 AM IST

21-july-6.jpg

ಬೆಳ್ತಂಗಡಿ : ಬಿ.ಸಿ. ರೋಡ್‌-ಉಜಿರೆ ರಾ.ಹೆ.ಯ ಬೆಳ್ತಂಗಡಿ ಸಮೀಪದ ಹಳೆಕೋಟೆ ವಾಣಿ ವಿದ್ಯಾಸಂಸ್ಥೆಯ ಬಳಿ ಬೃಹತ್‌ ಗಾತ್ರದ ಮರವೊಂದು ಹೆದ್ದಾರಿಗೆ ಬಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಸುಮಾರು ಮೂರು ತಾಸಿಗೂ ಅಧಿಕ ಸಮಯ ಸಂಚಾರ ಅಸ್ತವ್ಯಸ್ತಗೊಂಡಿತು. ಮರ ತೆರವುಗೊಳ್ಳುವ ತನಕ ವಾಹನಗಳು ಮುಂದಕ್ಕೆ ಚಲಿಸಲಾಗದೆ ಹೆದ್ದಾರಿಯ ಎರಡೂ ಬದಿಗಳಲ್ಲೂ ಸಾಲುಗಟ್ಟಿ ನಿಂತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಡುವಂತಾಯಿತು. ಬೆಳಗ್ಗೆ 7ರ ಸುಮಾರಿಗೆ ಘಟನೆ ಸಂಭವಿಸಿದ್ದು, 10.30ರ ವರೆಗೂ ವಾಹನಗಳು ಬ್ಲಾಕ್‌ನಲ್ಲಿ ಸಿಲುಕಿಕೊಂಡಿದ್ದವು.

ಬೆಳಗ್ಗಯೇ ಘಟನೆ ನಡೆದ ಪರಿಣಾಮ ಶಾಲಾ – ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಹಿತ ಕೆಲಸಕ್ಕೆ ತೆರಳುವವರು ಪರದಾಡುವಂತಾಯಿತು. ಹೆಚ್ಚಿನ ಮಂದಿ ಎರಡು ತಾಸು ಕಾಲ ಬಸ್ಸಿನಲ್ಲಿಯೇ ಬಾಕಿಯಾದರೆ, ಇನ್ನು ಕೆಲವರು ಬಸ್ಸಿಗೆ ಕಾದು ರಸ್ತೆ ಬದಿಯಲ್ಲಿ ನಿಂತಿದ್ದರು.

ಜತೆಗೆ ಶಾಲಾ ವಿದ್ಯಾ ರ್ಥಿಗಳನ್ನು ಹೊತ್ತೂಯ್ಯುವ ಶಾಲಾ ವಾಹನ ಗಳೂ ತಾಸುಗಟ್ಟಲೆ ರಸ್ತೆಯಲ್ಲಿ ನಿಂತಿದ್ದವು. ಹೀಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಶಾಲಾ – ಕಾಲೇಜುಗಳಿಗೆ ತೆರಳುವುದು ವಿಳಂಬವಾಯಿತು. ಜತೆಗೆ ಕೆಲಸಕ್ಕೆ ತೆರಳುವವರೂ ಕಚೇರಿಗೆ ತಲುಪುವುದು ತಡವಾಯಿತು. ಮರ ಬಿದ್ದಿದೆ ಎಂದು ಖಾಸಗಿ ಬಸ್ಸೊಂದು ರಸ್ತೆ ಬದಿಗೆ ತೆರಳಿದ ಪರಿಣಾಮ ಅಲ್ಲೇ ಹೂತು ಹೋದ ಘಟನೆಯೂ ಸಂಭವಿಸಿದೆ.

ಹಳೆಕೋಟೆಯ ಬಳಿ ಮರ ಬಿದ್ದಿದ್ದರೂ ವಾಹನಗಳು ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದವು. ಬೆಳ್ತಂಗಡಿ ನಗರ ಸಹಿತ ಒಂದು ಬದಿ ಕಾಶಿಬೆಟ್ಟುವರೆಗೆ, ಗುರುವಾಯನಕೆರೆಯಲ್ಲಿ ಮಂಗಳೂರು ರಸ್ತೆ, ಉಡುಪಿ ರಸ್ತೆ ಹಾಗೂ ಉಪ್ಪಿನಂಗಡಿ ರಸ್ತೆಯಲ್ಲೂ ವಾಹನಗಳು ಬ್ಲಾಕ್‌ ಆಗಿದ್ದವು. ಕೆಲವೊಂದು ವಾಹನದವರು ವಿರುದ್ಧ ದಿಕ್ಕಿನಲ್ಲೂ ವಾಹನಗಳನ್ನು ಚಲಾಯಿಸಿ, ಎದುರಿನಿಂದ ಬರುವ ವಾಹನಗಳಿಗೆ ಅವಕಾಶ ನೀಡದೆ, ಹೆಚ್ಚಿನ ಟ್ರಾಫಿಕ್‌ ಜಾಮ್‌ಗೆ ಕಾರಣರಾದರು. ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸರು ಅಂತಹ ವಾಹನದವರನ್ನು ತರಾಟೆಗೆ ತೆಗೆದುಕೊಂಡು ಟ್ರಾಫಿಕ್‌ ಜಾಮ್‌ ನಿಯಂತ್ರಿಸಿದರು. ಎಲ್ಲ ರಸ್ತೆಗಳಲ್ಲೂ ವಾಹನಗಳು ಬ್ಲಾಕ್‌ ಆಗಿದ್ದ ಪರಿಣಾಮ ಮರ ತೆರವುಗೊಂಡ ಬಳಿಕವೂ ವಾಹನ ಸಂಚಾರ ಸಹಜ ಸ್ಥಿತಿಗೆ ಬರುವುದಕ್ಕೆ ಕೊಂಚ ವಿಳಂಬವಾಯಿತು. ಒಂದೆರಡು ಆ್ಯಂಬುಲೆನ್ಸ್ ಗಳೂ ಬ್ಲಾಕ್‌ನಲ್ಲಿ ಸಿಲುಕಿ ಪರದಾಡಿದವು.

ಶಾಲೆಗೆ ರಜೆ
ಗುರುವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್‌ ಮದನ್‌ ಮೋಹನ್‌ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ರಜೆ ಘೋಷಿಸಿದರು. ಹೀಗಾಗಿ ತಾಲೂಕಿನ ಹೆಚ್ಚಿನ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ಕೆಲವು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದ ಪರಿಣಾಮ ರಜೆ ನೀಡಿರಲಿಲ್ಲ. ಆದರೆ ಶುಕ್ರವಾರ ದಿನವಿಡೀ ಮಳೆಯ ಪ್ರಮಾಣ ತಗ್ಗಿತ್ತು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.