ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ
Team Udayavani, Dec 2, 2022, 11:37 PM IST
ಮಂಗಳೂರು: ವಾಹನ ತಪಾಸಣ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಗುರುವಾರ ರಾತ್ರಿ ಪಂಪ್ವೆಲ್ ಚೆಕ್ಪಾಯಿಂಟ್ನಲ್ಲಿ ನಡೆದಿದೆ.
ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸುಗುಮಾರನ್ ಅವರು ಸಿಬಂದಿ ಎಎಚ್ಸಿ ಮಹೇಶ್, ಎಎಸ್ಐ ಸಂತೋಷ್ ಪಡೀಲ್, ಸಿಎಚ್ಸಿ ರಾಜೇಶ್ ಮತ್ತು ಸಿಪಿಸಿ ಸುರೇಶ್ ಮತ್ತು ವೀರೇಶ್ ಅವರೊಂದಿಗೆ ವಾಹನ ತಪಾಸಣೆ ಕರ್ತವ್ಯದಲ್ಲಿದ್ದರು.
ರಾತ್ರಿ ಸುಮಾರು 9.45ರ ವೇಳೆಗೆ ಕಂಕನಾಡಿ ಹಳೇ ರಸ್ತೆ ಕಡೆಯಿಂದ ಪಂಪ್ವೆಲ್ಗೆ ವೇಗವಾಗಿ ಆಟೋ ರಿಕ್ಷಾ ಬರುತ್ತಿರುವುದನ್ನು ಗಮನಿಸಿದ ಪೊಲೀಸ್ ಸಿಬಂದಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಚಾಲಕ ದುಡುಕುತನ ಹಾಗೂ ನಿರ್ಲಕ್ಷತನದಿಂದ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಯದ್ವಾತದ್ವಾ ಚಲಾಯಿಸಿ ಆಟೋವನ್ನು ಒಮ್ಮೆಲೇ ಪೊಲೀಸರತ್ತ ನುಗ್ಗಿಸಿಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಇಲಾಖಾ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿಪಡಿಸುವ ರೀತಿಯಲ್ಲಿ ಚಲಾಯಿಸಿ ಬಿ.ಸಿ. ರೋಡ್ ಕಡೆಗೆ ಪರಾರಿಯಾಗಿದ್ದಾನೆ. ಈ ಕುರಿತಂತೆ ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ