ಸಹಕಾರಿ ಬ್ಯಾಂಕಿನಿಂದ ಚಿನ್ನಾಭರಣ ದರೋಡೆಗೆ ಯತ್ನ: ಇಬ್ಬರ ಬಂಧನ


Team Udayavani, Jul 5, 2017, 3:45 AM IST

bandana.jpg

ಉಳ್ಳಾಲ: ಕೋಟೆಕಾರು ಸಹಕಾರಿ ಬ್ಯಾಂಕ್‌ನ ತಲಪಾಡಿ ಕೆ.ಸಿರೋಡ್‌ ಶಾಖೆಯಿಂದ ಹಾಡಹಗಲೇ ಸಿಬಂದಿಗೆ ಚೂರಿ ತೋರಿಸಿ ಚಿನ್ನಾಭರಣ ದರೋಡೆಗೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನ ನಿರ್ದೇಶಕಿಯ ಪತಿ ಸಹಿತ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಿಲಾರು ನಿವಾಸಿಗಳಾದ ರಾಮಚಂದ್ರ ಯಾನೆ ಬೋಟ್‌ ರಾಮ (55) ಮತ್ತು ನೆರೆಮನೆಯ ನಿವಾಸಿ ಮೋಹನ್‌ ಚೆಟ್ಟಿಯಾರ್‌(35) ಆರೋಪಿಗಳು. 

ರಾಮಚಂದ್ರ ಬ್ಯಾಂಕ್‌ನ ನಿರ್ದೇಶಕಿಯೊಬ್ಬರ ಪತಿಯಾಗಿದ್ದು ಜೂ. 23ರಂದು ಕೆ.ಸಿ.ರೋಡ್‌ ಶಾಖೆಯಿಂದ ದರೋಡೆಗೆ ಯತ್ನ ನಡೆಸಿದ್ದರು.

ಕೆ.ಸಿ.ರೋಡ್‌ನ‌ಲ್ಲಿರುವ ಕೊಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್‌ನ ಶಾಖೆಗೆ ಕಪ್ಪು ಪಲ್ಸರ್‌ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಚೂರಿ ತೋರಿಸಿ ಸಿಬಂದಿ  ಯನ್ನು  ಶೌಚಾಲಯದಲ್ಲಿ ಕೂಡಿ ಹಾಕಿ ಸುಮಾರು ಐದು ಕೋಟಿ ಮೌಲ್ಯದ 20 ಕೆ.ಜಿ. ಚಿನ್ನಾಭರಣವನ್ನು ಗೋಣಿ ಚೀಲದಲ್ಲಿ ಹಾಕಿ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಚಿನ್ನಾಭರಣದ ಅಪ್ರೈಸರ್‌ ರಾಮಚಂದ್ರ ದೇರಳಕಟ್ಟೆ ಅವರು ಜಲ್ಲಿ ಕಲ್ಲಿನಲ್ಲಿ ಬೈಕ್‌ ಸವಾರನ ಎದೆಗೆ ಕಲ್ಲು ಬಿಸಾಡಿದಾಗ ಸವಾರರು ಬ್ಯಾಲೆನ್ಸ್‌ ತಪ್ಪಿದ್ದಂರಿಂದ ಚಿನ್ನಾಭರಣ ಗೋಣಿ ಬಿಟ್ಟು ಪರಾರಿಯಾಗಿದ್ದರು.

ಪತ್ತೆಗೆ ನೆರವಾದ ಮೊಬೈಲ್‌ ನೆಟ್‌ವರ್ಕ್‌
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ದರೋಡೆಕೋರರ ಅಸ್ಪಸ್ಟ ಚಿತ್ರಣ ಮತ್ತು ರಾಮಚಂದ್ರ ದೇರಳಕಟ್ಟೆ ಅವರ ಮಾಹಿತಿಯಂತೆ ತನಿಖೆ ಪ್ರಾರಂಬಿಸಿದ್ದು, ಘಟನಾ ಸಂದರ್ಭದಲ್ಲಿ ಇರುವ ಮೊಬೈಲ್‌ ನೆಟ್‌ವರ್ಕ್‌ ಆಧಾರದಲ್ಲಿ ತನಿಖೆ ಕೈಗೊಂಡ ಪೊಲೀಸರು ಈ ನೆಟ್‌ವರ್ಕ್‌ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾಗ ರಾಮಚಂದ್ರ ಯಾನೆ ಬೋಟ್‌ ರಾಮ ಮತ್ತು ಮೋಹನ್‌ ಚೆಟ್ಟಿಯಾರ್‌ ಅವರ ಮೊಬೈಲ್‌ ನಂಬರ್‌ ಸಿಕ್ಕಿದ್ದು ತನಿಖೆ ನಡೆಸಿದಾಗ ಪಲ್ಸರ್‌ ಬೈಕ್‌ ಇರುವುದು ಖಾತರಿಯಾಗುತ್ತಿದ್ದಂತೆ ರಾಮಚಂದ್ರ ದೇರಳಕಟ್ಟೆ ಹೇಳಿದ ದಪ್ಪ ಶರೀರ ಎತ್ತರದ ವ್ಯಕ್ತಿ ರಾಮಚಂದ್ರ ಅವರೇ ಹೋಲುತ್ತಿದ್ದರಿಂದ ಅವರ ಹಿನ್ನಲೆಯ ಮಾಹಿತಿ ಪಡೆದು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದಾಗ ದರೋಡೆ ನಡೆಸಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ.

ದರೋಡೆ ಆರೋಪಿಗಳ ಪತ್ತೆ ಕಾರ್ಯದಲ್ಲಿ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಕೆ.ಎಂ. ಶಾಂತಾರಾಜು, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಹನುಮಂತರಾಯ, ಸಿಸಿಆರ್‌ಬಿ ಎಸಿಪಿ ವೆಲೆಂಟೈನ್‌ ಡಿ.ಸೋಜಾ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್‌ ಸುನಿಲ್‌ ವೈ ನಾಯಕ್‌, ಪಿಎಸ್‌ಐ ಶ್ಯಾಮ ಸುಂದರ್‌ ಹಾಗೂ ಸಿಬಂದಿ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶಕ್ಕೆ ತೆಗೆದುಕೊಂಡಿದ್ದಾರೆ.

ಚೀಟಿ ವ್ಯವಹಾರದಲ್ಲಿ ನಷ್ಟ ಕಾರಣ  
ಬೋಟ್‌ ರಾಮ ಯಾನೆ ರಾಮಚಂದ್ರ ಸ್ಥಳೀಯವಾಗಿ ಗಣ್ಯ ವ್ಯಕ್ತಿಯಾಗಿದ್ದು, ಸೋಮೇಶ್ವರ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಆಗಿದ್ದ. ಬಡ್ಡಿ ಸೇರಿದಂತೆ ಚೀಟಿ ವ್ಯವಹಾರ ನಡೆಸುತ್ತಿದ್ದ ರಾಮಚಂದ್ರ ಸ್ಥಳೀಯರಿಗೆ ಬಡ್ಡಿಗೆ ಹಣ ನೀಡಿ ಕೈಸುಟ್ಟುಕೊಂಡಿದ್ದ. ಈ ವಿಚಾರದಲ್ಲಿ ಗ್ರಾಮ ಪಂಚಾಯತ್‌ ಸದಸ್ಯೆಯೊಬ್ಬರು ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಬೋಟ್‌ ರಾಮ ಯಾನೆ ರಾಮಚಂದ್ರ ಸೇರಿದಂತೆ ಹಲವರ ಹೆಸರು ಬರೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿತ್ತು. ಈ ವಿಚಾರದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಡ್ಡಿ ಮತ್ತು ಚಿಇಟಿ ವ್ಯವಹಾರದಲ್ಲಿ ಸಾಲ ಮಾಡಿದ್ದರಿಂದ ಅದನ್ನು ಸರಿದೂಗಿಸಲು ಬೋಟ್‌ ರಾಮ ತನ್ನ ನೆರೆ ಮನೆಯವ ಮೋಹನ್‌ನನ್ನು ಕರೆದುಕೊಂಡು ಹೋಗಿ ದರೋಡೆಗೆ ಯತ್ನಿಸಿ ವಿಫಲನಾಗಿ ಪೊಲೀಸರ ಅತಿಥಿಯಾಗಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.