ಜೇಸಿಐಯಿಂದ ಸೌಹಾರ್ದಯುತ ವಾತಾವರಣ ಬೆಳೆಯಲು ಸಾಧ್ಯ: ಅರವಿಂದ ಬೋಳಾರ್‌


Team Udayavani, Jan 2, 2020, 4:49 PM IST

Bolar-2-1

ಉಪ್ಪಿನಂಗಡಿ: ಜೇಸಿಐ ಶಿಸ್ತು, ಸಮಯಪ್ರಜ್ಞೆಯನ್ನು ಕಲಿಸುವುದರೊಂದಿಗೆ ಸಮಾಜದಲ್ಲಿ ಒಗ್ಗಟ್ಟು ಹಾಗೂ ಸೌಹಾರ್ದತೆಯ ವಾತಾವರಣವನ್ನು ಬೆಳೆಸುತ್ತದೆ ಎಂದು ರಂಗಭೂಮಿ ಕಲಾವಿದ, ಚಲನಚಿತ್ರ ನಟ ಅರವಿಂದ ಬೋಳಾರ್‌ ತಿಳಿಸಿದರು. ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆದ ಜೇಸಿಐ ನೆಕ್ಕಿಲಾಡಿ ಘಟಕದ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಜೇಸಿಐಯಂತಹ ಸಂಘಟನೆಗಳಿಂದ ಉತ್ತಮ ಸಮಾಜಮುಖೀ ಕಾರ್ಯಗಳು ನಡೆಯುತ್ತಿದ್ದು, ಇದು ಪರಿಸರದಲ್ಲಿ ಸೌಹಾರ್ದಯುತ ವಾತಾವರಣವನ್ನು ಬೆಳೆಸುತ್ತದೆ. ಸಮಾಜ ಸೇವೆ ಮಾಡಲು ರಾಜಕೀಯಕ್ಕೆ ಸೇರಬೇಕೆಂದೇನಿಲ್ಲ. ಜೇಸಿಐಯಂತಹ ಸಂಘಟನೆ ಸೇರಿದಂತೆ ಉತ್ತಮ ಸಮಾಜಮುಖಿ ಕೆಲಸಗಳನ್ನು ಮಾಡುವ ಮನೋಭಾವ ನಮ್ಮಲ್ಲಿ ಬೆಳೆಯಲು ಸಾಧ್ಯ ಎಂದರು.

ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದ ಜೇಸಿಐಯ ನಿಕಟಪೂರ್ವ ಇವಿಪಿ ಮುರಳೀ ಶ್ಯಾಂ ಮಾತನಾಡಿ, ಜೇಸಿಐ ನಾಯಕತ್ವ ಗುಣವನ್ನು ಬೆಳೆಸುವುದಲ್ಲದೇ, ವ್ಯಕ್ತಿಯೋರ್ವನನ್ನು ಸಮಾಜದಲ್ಲಿ ಉತ್ತಮ ನಾಗರಿಕನನ್ನಾಗಿ ರೂಪಿಸುತ್ತದೆ. ನೆಕ್ಕಿಲಾಡಿ ಜೇಸಿಐಯ ಸಮಾಜಮುಖೀ ಕಾರ್ಯಗಳು ನಿರಂತರ ಮುಂದುವರಿಯಲಿ ಎಂದರು.

ಜೇಸಿಐ ವಲಯ 15ರ ಅಧ್ಯಕ್ಷ ಮುರಳೀ ಶ್ಯಾಂ ಮಾತನಾಡಿ, ಜೇಸಿಐಗೆ ಸೇರುವುದರಿಂದ ನಮ್ಮಲ್ಲಿ ಗುಣಾತ್ಮಕ ಬದಲಾವಣೆ ಸಾಧ್ಯ. ಸಂಸ್ಥೆಯ ಸ್ಥಾಪಕಾಧ್ಯಕ್ಷ ಶಿವಕುಮಾರ್‌ ಬಾರಿತ್ತಾಯ ಹಾಗೂ 2019ರ ಅಧ್ಯಕ್ಷ ವಿನೀತ್‌ ಶಗ್ರಿತ್ತಾಯ ಜೋಡೆತ್ತುಗಳಂತಿದ್ದು, ಎಲ್ಲರ ಪರಿಶ್ರಮದಿಂದಾಗಿ ನೆಕ್ಕಿಲಾಡಿ ಜೇಸಿಐಯು ಪುಟ್ಟ ಮಗುವಾಗಿದ್ದರೂ ನಿರೀಕ್ಷೆಗೂ ಮೀರಿದ ಸಮಾಜಮುಖಿ ಕೆಲಸಗಳು ಅದರಿಂದಾಗಿವೆ. ಹಾಗಾಗಿ ಈ ಸಂಸ್ಥೆಯಿಂದ ಇಬ್ಬರು ವಲಯಾಧಿಕಾರಿಗಳು ಆಯ್ಕೆಯಾಗುವಂತಾಗಿದೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದರು.

ನೂತನ ಅಧ್ಯಕ್ಷ ರಮೇಶ್‌ ಸುಭಾಶ್‌ನಗರ ಮಾತನಾಡಿ, ನನ್ನ ಅವಧಿಯಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಮಾಡುವ ಕನಸಿದ್ದು, ಇದಕ್ಕೆ ಎಲ್ಲರ ಸಹಕಾರ ಕೋರಿದರು. ಈ ಸಂದರ್ಭ ರಂಗಭೂಮಿ ಕಲಾವಿದ ಅರವಿಂದ ಬೋಳಾರ್‌ ಹಾಗೂ ಸಾಮಾಜಿಕ ಕಾರ್ಯಕರ್ತ ದಿವಾಕರ ಕೊಳಂಜಿಲಡ್ಡ ಅವರನ್ನು ಸನ್ಮಾನಿಸಲಾಯಿತು. ಸಹಕಾರ ನೀಡಿದವರನ್ನು ಗೌರವಿಸಲಾಯಿತು.

ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್‌ ಶೆಣೈ, ವಲಯ 15ರ ರೀಜನ್‌ ಜಿಯ ಝೆಡ್‌ವಿಪಿ ಪ್ರದೀಪ್‌ ಬಾಕಿಲ, ನಿಕಟಪೂರ್ವ ವಲಯಾಧ್ಯಕ್ಷ ಅಶೋಕ್‌ ಚೂಂತಾರು, ನೆಕ್ಕಿಲಾಡಿ ಜೇಸಿಐಯ ಸ್ಥಾಪಕಾಧ್ಯಕ್ಷ ಶಿವಕುಮಾರ್‌ ಬಾರಿತ್ತಾಯ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಐಪಿಪಿ ಅಮೀತಾ ಹರೀಶ್‌, ಜೇಸಿರೇಟ್‌ ನಾಗವೇಣಿ ಉಪಸ್ಥಿತರಿದ್ದರು.
ಜೇಸಿಐ ನೆಕ್ಕಿಲಾಡಿಯ ನಿಕಟ ಪೂರ್ವಾಧ್ಯಕ್ಷ ವಿನೀತ್‌ ಶಗ್ರಿತ್ತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜೇಸಿಐ ನೂತನ ಕಾರ್ಯದರ್ಶಿ ಅನಿ ಮಿನೇಜಸ್‌ ವಂದಿಸಿದರು.

ನೆಕ್ಕಿಲಾಡಿ ಜೇಸಿಐ ಸಂಸ್ಥೆಯು ಮೂರನೇ ವರ್ಷವನ್ನು ಪೂರೈಸಿದ್ದರೂ ಉತ್ತಮ ಸಮಾಜಮುಖಿ ಕೆಲಸ ಕಾರ್ಯಗಳ ಮೂಲಕ ಎಲ್ಲೆಡೆ ಉತ್ತಮ ಕ್ರಿಯಾಶೀಲ ಸಂಸ್ಥೆಯೆಂದು ಗುರುತಿಸಿಕೊಂಡಿದೆ. 2019ರ ಅವಧಿಯಲ್ಲಿ ಹಲವು ಸಮಾಜಮುಖಿ ಕಾರ್ಯಗಳು ನಡೆದಿದ್ದು, ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ತನ್ನದಾಗಿಸಿಕೊಂಡಿದೆ. ಇದರಿಂದಾಗಿ ಈ ಸಂಸ್ಥೆಯಿಂದ ಇಬ್ಬರನ್ನು ಈ ಬಾರಿ ವಲಯಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಇದರ ಕ್ರಿಯಾಶೀಲತೆಗೆ, ಉತ್ತಮ ಸಮಾಜಮುಖಿ ಕೆಲಸಗಳಿಗೆ ಕಾರ್ಯಕ್ರಮದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂತು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.