ತುಳು ಸಂಪತ್ತನ್ನು ಹಂಚುವ ಕೆಲಸವಾಗಲಿ


Team Udayavani, Nov 4, 2018, 9:41 AM IST

tulu.jpg

ಪುತ್ತೂರು: ಸಮ್ಮೇಳನದ ಮೂಲಕ ತುಳು ಸಂಪತ್ತಿನ ಬೀಗದ ಕೀಯನ್ನು ಹಂಚುವ ಕೆಲಸ ಆಗಿದೆ. ಬೀಗ ತೆರೆದು ಕೃಷಿ ಮಾಡುವ ಕೆಲಸವನ್ನು ಅವರವರೇ ಮಾಡಿಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ಮಂಜಲ್ಪಡು ಸುದಾನ ವಸತಿಯುತ ಶಾಲಾ ಆವರಣದಲ್ಲಿ ನ. 3ರಂದು ಜರಗಿದ ತುಳು ಪರ್ಬ – 2018ರ ಮುಗಿತಲದ ಲೇಸ್‌ನಲ್ಲಿ ಸಮಾರೋಪ ಭಾಷಣ ಮಾಡಿದರು.

ತುಳು ಎನ್ನುವುದು ಸಂಪತ್ತು. ಈ ಸಂಪತ್ತನ್ನು ಅನುಭವಿಸಲು ದಾರಿ ತೋರಿಸುವ ಕೆಲಸವನ್ನು ಸಮ್ಮೇಳನಗಳು ಮಾಡಿಕೊಂಡು ಬಂದಿವೆ. ಇದರ ಕೀಯನ್ನು ಜನರಿಗೆ ತೋರಿಸಿಕೊಡುವ ಮೂಲಕ, ಜಾಗೃತಿ, ಅರಿವು ಮೂಡಿಸುವ ಕೆಲಸ ಇಲ್ಲಿ ಮಾಡಲಾಗಿದೆ ಎಂದರು.  

ಸಮ್ಮೇಳನಾಧ್ಯಕ್ಷ ಡಾ| ಬಿ.ಎ. ವಿವೇಕ್‌ ರೈ ಮಾತನಾಡಿ, ಪಾತೆರಕತೆಯಲ್ಲಿ ಕೇಳಿಬಂದಂತೆ ತುಳು ವಿಶ್ವವಿದ್ಯಾಲಯ ಅಗತ್ಯ. 20 -25 ವರ್ಷಗಳಿಂದ ನಿರ್ಣಯ ಮಾಡುತ್ತಾ ಬಂದ ಪರಿಣಾಮ ಅಕಾಡೆಮಿ ಸ್ಥಾಪನೆಯಾಗಿದೆ. ವಿವಿ ಬೇಕೆಂದು ಪದೇ ಪದೇ ಹೇಳುತ್ತಿದ್ದರೆ, ಕೊನೆಗೊಂದು ದಿನ ಅದು ಸಿಕ್ಕಿಯೇ ಸಿಗುತ್ತದೆ. ಆದ್ದರಿಂದ ಆ ವಿಷಯದ ಬಗ್ಗೆ ಮಾತನಾಡುತ್ತಾ ಇರಬೇಕು ಎಂದರು. 

ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ಮುಂದೆ ಬೆಳ್ತಂಗಡಿಯಲ್ಲಿ ನಡೆಯಲಿರುವ ತುಳು ಸಮ್ಮೇಳನದಲ್ಲಿ ವಿಶ್ವವಿದ್ಯಾಲಯ ಬೇಕೆಂಬ ಬಗ್ಗೆ ನಿರ್ಣಯ ಮಂಡಿಸಲಾಗುವುದು ಎಂದರು. ಇದೇ ಸಂದರ್ಭ ಕುದಾಡಿ ವಿಶ್ವನಾಥ ರೈ, ಡಾ| ಯು.ಪಿ. ಶಿವಾನಂದ, ಎಂ.ಎಸ್‌. ಮುಕುಂದ. ಬಾಬು ಮಾಲಡ್ಕ, ಪಾಚು ನಲಿಕೆ, ಅಜಿತ್‌ ಕುಮಾರ್‌ ಜೈನ್‌, ವೆಂಕಮ್ಮ ಐತ್ತಪ್ಪ ನಾಯ್ಕ, ಎನ್‌. ಕಿಟ್ಟಣ್ಣ ರೈ, ಕೇಶವ ಭಂಡಾರಿ, ಪೂಕಳ ಲಕ್ಷ್ಮಿ ನಾರಾಯಣ ಭಟ್‌, ಕುಂಬ್ರ ರಘುನಾಥ ರೈ, ರಾಜು ಪೂಜಾರಿ ಇಪ್ಪನೊಟ್ಟು, ಉಮೇಶ್‌ ಸಾಯಿರಾಮ್‌, ತಾರಾನಾಥ ಪುತ್ತೂರು ಅವರನ್ನು ಸಮ್ಮಾನಿಸಲಾಯಿತು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌, ಸ್ವಾಗತ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು, ರಿಜಿಸ್ಟ್ರಾರ್‌ ಚಂದ್ರಹಾಸ ರೈ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ…
ಬೆಳಿಗ್ಗೆ 8 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಮಂಜಲ್ಪಡು ಸುದಾನ ವಸತಿಯುತ ಶಾಲಾ ಆವರಣಕ್ಕೆ ಮೆರವಣಿಗೆ ಹೊರಟಿತು. ಅಲ್ಲಿ  ಮಹಿಳೆಯರಿಂದ ಸ್ವಾಗತ ಕೋರಲಾಯಿತು. ಬಳಿಕ ಕೋಟಿ – ಚೆನ್ನಯ ಆನೆಬಾಗಿಲು ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು. ನಂತರ ಕಬಿ ದುನಿಪು – ನಲಿಪು, ಪಾತೆರಕತೆ, ಕಬಿ ಕೂಟ, ಚಾವಡಿ ಚರ್ಚೆ- ದೈವ ನಿಲೆ, ತುಳು – ತುಲಿಪು ನಡೆಯಿತು. ಪಬೊದ ಪೊಲಬು ಮುಗಿತಲದ ಲೇಸ್‌ ಸಮಾರೋಪ ಸಮಾರಂಭ ಜರಗಿತು. ಇದರಲ್ಲಿ 15 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು. ನಂತರ ತುಳು ರಂಗ್‌ ರಂಗಿತೊ: ತೆಲಿಕೆ ನಲಿಕೆ – ಬಾಯಿ ನಿಲಿಕೆ, ಕೃಪನ ಮದಿಪು ಪೊಜೊವುಲೆ ಯಕ್ಷಗಾನ ತಾಳಮದ್ದಳೆ ಜರಗಿತು. 3 ಸಾವಿರಕ್ಕೂ ಅಧಿಕ ಮಂದಿ ಮಧ್ಯಾಹ್ನದ ಊಟದಲ್ಲಿ ಪಾಲ್ಗೊಂಡರು. ಬೆಳಗ್ಗೆ – ಸಂಜೆ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಮಳೆ ಸಿಂಚನದೊಂದಿಗೆ ಕಾರ್ಯಕ್ರಮಕ್ಕೆ ತೆರೆ ಬಿದ್ದಿತು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.