![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ತುಳು ಭಾಷಾ ಪ್ರೇಮ ಇಮ್ಮಡಿಗೊಳ್ಳಲಿ: ಎ.ಸಿ. ಭಂಡಾರಿ
Team Udayavani, Apr 16, 2018, 11:57 AM IST
![tulu-bhashe.jpg](https://www.udayavani.com/wp-content/uploads/2018/04/16/tulu-bhashe-620x372.jpg)
ಮಂಗಳೂರು, ಎ. 15: ವ್ಯಾವಹಾರಿಕ ಉದ್ದೇಶಕ್ಕಾಗಿ ಅನ್ಯ ಭಾಷಾ ಅಧ್ಯಯನ ಮಾಡಿದರೂ ನೆಲದ ತುಳು ಭಾಷೆಯ ಕುರಿತ ಪ್ರೀತಿ ನಮ್ಮಲ್ಲಿ ಇಮ್ಮಡಿಯಾಗಿರಬೇಕು. ಇದರಿಂದ ತುಳುನಾಡಿನ ಶ್ರೀಮಂತಿಕೆ ಇನ್ನಷ್ಟು ಸಮೃದ್ಧಗೊಳ್ಳಲು ಸಾಧ್ಯ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.
ತುಳು ಕೂಟ ಕುಡ್ಲ ಮಂಗಳೂರು ವತಿಯಿಂದ ಶ್ರೀ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ಸಂಜೆ ನಡೆದ “ಬಿಸು ಪರ್ಬ-2018′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಳುನಾಡು ವಿವಿಧ ಸಂಸ್ಕೃತಿಯ ತವರು. ಇಲ್ಲಿನ ಎಲ್ಲ ವಿಧದ ಆಚರಣೆ, ನಂಬಿಕೆಗಳು ತುಳುನಾಡಿನ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತವೆ. ಆದರೆ ಪ್ರಸ್ತುತ ನಗರೀಕರಣದ ನೆಪದಲ್ಲಿ ತುಳು ಸಂಸ್ಕೃತಿ, ಆಚರಣೆಗಳನ್ನು ಮರೆಯುವ ಕಾಲಘಟ್ಟದಲ್ಲಿದ್ದೇವೆ. ಇಂತಹ ಸಂದರ್ಭ ಎದುರಾಗಬಾರದು. ತುಳು ಭಾಷಾ ಸಂಬಂಧಿ ಹಾಗೂ ಸಂಸ್ಕೃತಿ ಪೂರಕ ಚಟುವಟಿಕೆಗಳು ನಿತ್ಯ ನಿರಂತರ ನಡೆಯಬೇಕು ಎಂದರು.
ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಬೋಳಾರ ಹಳೆಕೋಟೆ ಶ್ರೀ ಮಹಿಷಮರ್ದಿನಿ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಮುಖ್ಯ ಅತಿಥಿಯಾಗಿದ್ದರು. ತುಳು ಕೂಟದ ಅಧ್ಯಕ್ಷ ಬಿ. ದಾಮೋದರ ನಿಸರ್ಗ ಸ್ವಾಗತಿಸಿದರು.
ಪ್ರಶಸ್ತಿ ಪ್ರದಾನ
ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಸಂಸ್ಮರಣೆಯ 42ನೇ ವರ್ಷದ ತುಳು ನಾಟಕ ಕೃತಿ ಪ್ರಶಸ್ತಿಯನ್ನು ಇದೇ ವೇಳೆ ಪ್ರದಾನ ಮಾಡಲಾಯಿತು. “ರಂಗ್ ಮಾಜಿನಗ’ ಕೃತಿಗೆ ರವಿ ಕುಮಾರ್ ಕಡೆಕಾರ್ ಉಡುಪಿ, “ಸತ್ಯ ಗೊತ್ತಾನಗ’ ಕೃತಿಗೆ ಶಶಿಧರ್ ಕೆ. ಬಂಡಿತ್ತಡ್ಕ, ಕನ್ಯಾನ ಹಾಗೂ “ಸ್ವಾಮಿ ಭೂಮಿ’ ಕೃತಿಗೆ ವಿಜಯಾ ಬಿ. ಶೆಟ್ಟಿ ಸಾಲೆತ್ತೂರು
ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.