ಪ್ರವಾಸಿಗರಿಗೆ ತುಳುನಾಡ ವೈಭವ ಪರಿಚಯ
ಬಸ್, ರೈಲು, ವಿಮಾನ ನಿಲ್ದಾಣಗಳಲ್ಲಿ ತುಳು ಸಂಸ್ಕೃತಿ ಅನಾವರಣ
Team Udayavani, Nov 18, 2019, 5:15 AM IST
ಮಂಗಳೂರು: ತುಳು ಸಾಹಿತ್ಯ ಅಕಾಡೆಮಿಯು ಬೆಳ್ಳಿ ಹಬ್ಬದ ಅಂಗವಾಗಿ ಕರಾವಳಿಯ ಪ್ರಮುಖ ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳ ಮುಖ್ಯದ್ವಾರಗಳಲ್ಲಿ ತುಳುನಾಡ ವೈಭವವನ್ನು ಅನಾ ವರಣಗೊಳಿಸುವ ಯೋಜನೆ ರೂಪಿಸಿದ್ದು, ಇಲ್ಲಿನ ಸಂಸ್ಕೃತಿಯನ್ನು ಬಿಂಬಿಸುವ ವಿಶೇಷ ಮಳಿಗೆಗಳನ್ನು ತೆರೆಯಲು ಮುಂದಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅನ್ಯ ರಾಜ್ಯ ಮತ್ತು ವಿದೇಶಗಳಿಂದಲೂ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು, ಅವರಿಗೆ ಈ ನೆಲದ ಭಾಷೆ, ಸಂಸ್ಕೃತಿ, ತಿಂಡಿ-ತಿನಿಸು ಪರಿಚಯಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.
ವಿದೇಶಗಳಿಗೆ ನಾವು ಹೋದಾಗ ಅಲ್ಲಿನವರು ಅವರ ಸಂಸ್ಕೃತಿಯನ್ನು ಪರಿಚಯಿಸುತ್ತಾರೆ. ಅದೇ ರೀತಿ ನಮ್ಮಲ್ಲಿಗೆ ಬರುವ ವಿದೇಶಿಗರಿಗೆ ತುಳು ನಾಡಿನ ಸಂಸ್ಕೃತಿಯ ಪರಿಚಯ ವಾಗಬೇಕು ಎಂಬ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಈ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.
ಮಳಿಗೆಗಳ ವೈಶಿಷ್ಟ್ಯ
ಈ ಮಳಿಗೆಗಳಲ್ಲಿ ತುಳುನಾಡ ಮುಟ್ಟಾಳೆ, ಕಂಬಳದ ಬೆತ್ತ, ಗೆರಟೆ ಸಹಿತ ಕರಕುಶಲ ವಸ್ತುಗಳು ಅಲ್ಲದೆ ತುಳುನಾಡಿನ ಅಧ್ಯಯನದ ಪುಸ್ತಕ ಗಳೂ ಇರಲಿವೆ. ತುಳು ಲಿಪಿಯನ್ನು ಪರಿಚಯಿಸುವ ಉದ್ದೇಶದಿಂದ ಮರದ ಕೀ-ಬಂಚ್ನಲ್ಲಿ ತುಳು ಲಿಪಿಯಲ್ಲಿ ಹೆಸರು ಬರೆದುಕೊಡುವ ಸೌಲಭ್ಯವೂ ಇರುತ್ತದೆ.
ನೀರುದೋಸೆ, ಪತ್ರೊಡೆ
ನೀರುದೋಸೆ, ಬನ್ಸ್, ಪತ್ರೊಡೆ, ಗೋಳಿಬಜೆ ಸಹಿತ ತುಳುನಾಡಿನ ಪ್ರಸಿದ್ಧ ತಿನಿಸುಗಳನ್ನು ಬಸ್, ರೈಲು ಮತ್ತು ವಿಮಾನ ನಿಲ್ದಾಣಗಳಿಗೆ ಹೊಂದಿಕೊಂಡಿರುವ ಹೊಟೇಲ್ಗಳಲ್ಲಿ ಸಿಗುವಂತೆ ಮಾಡಲು ಚಿಂತನೆ ನಡೆಯುತ್ತಿದೆ.
ರೈತನ ಜತೆ ಸೆಲ್ಫಿ
ಬಸ್, ರೈಲು ಮತ್ತು ವಿಮಾನ ನಿಲ್ದಾಣಗಳಲ್ಲಿ ಸೆಲ್ಫಿà ಕಾರ್ನರ್ ನಿರ್ಮಾಣ ವಾಗಲಿದ್ದು ಪ್ರವಾಸಿಗರು ಇಲ್ಲಿ ಸೆಲ್ಫಿ ಕ್ಲಿಕ್ಕಿಸಬಹುದು. ಅಲ್ಲಿ ರೈತನನ್ನು ಹೋಲುವ ಸ್ಟಾ éಂಡ್ ಒಂದನ್ನು ಇಡಲಿದ್ದು, ತಲೆ ಭಾಗದಲ್ಲಿ ಖಾಲಿ ಇರುತ್ತದೆ. ಅಲ್ಲಿ ಪ್ರವಾಸಿಗರು, ಸಾರ್ವ ಜನಿಕರು ಮುಟ್ಟಾಳೆ ಧರಿಸಿ, ನೇಗಿಲು, ಕಂಬಳದ ಬೆತ್ತ ಕೈಯಲ್ಲಿ ಹಿಡಿದು ಸೆಲ್ಫಿà ಕ್ಲಿಕ್ಕಿಸಿ ಸಂಭ್ರಮಿಸಬಹುದು.
ತುಳುನಾಡ ಸಂಸ್ಕೃತಿ ಬೇರೆ ಭಾಗದ ಜನರಿಗೂ ತಿಳಿಯಬೇಕು. ಈ ಉದ್ದೇಶದಿಂದ ಉಭಯ ಜಿಲ್ಲೆಗಳ ಪ್ರಮುಖ ಬಸ್, ರೈಲು ಮತ್ತು ವಿಮಾನ ನಿಲ್ದಾಣಗಳಲ್ಲಿ ತುಳುನಾಡ ಸಂಸ್ಕೃತಿಯ ಅನಾವರಣಗೊಳಿಸಲು ಅಕಾಡೆಮಿ ನಿರ್ಧರಿಸಿದೆ. ಈ ಬಗ್ಗೆ ಸದ್ಯದಲ್ಲೇ ರೂಪರೇಖೆ ಸಿದ್ಧ ಪಡಿಸಲಾಗುವುದು. ಉಪ ಚುನಾ ವಣೆ ಮುಗಿದ ಕೂಡಲೇ ಅಕಾಡೆಮಿ ಪದಾಧಿಕಾರಿಗಳ ಪದಗ್ರಹಣ ನಡೆಯ ಲಿದ್ದು, ಬಳಿಕ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಬೇಕಾದ ಪ್ರಕ್ರಿಯೆಗಳನ್ನು ಆರಂಭಿಸ ಲಾಗುವುದು.
– ದಯಾನಂದ ಕತ್ತಲಸಾರ್,
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ
-ನವೀನ್ ಭಟ್ ಇಳಂತಿಲ