ತುಳು ಸಂಘಟಕ ಎ.ಸಿ. ಭಂಡಾರಿಗೆ ಒಲಿದ ಅಕಾಡೆಮಿ ಅಧ್ಯಕ್ಷ  ಪಟ್ಟ


Team Udayavani, Aug 8, 2017, 6:55 AM IST

ac-bhandary.jpg

ಮಂಗಳೂರು: ಸುಮಾರು 5 ದಶಕಗಳಿಂದ ತುಳು ಭಾಷೆಯ ಅಭಿವೃದ್ಧಿಗೆ ವಿವಿಧ ನೆಲೆಗಳಲ್ಲಿ ಶ್ರಮಿಸುತ್ತಾ ಬಂದಿರುವ ಎ.ಸಿ. ಭಂಡಾರಿ ಅವರಿಗೆ ಈ ಬಾರಿಯ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. 
ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದವರಾದ 74 ವರ್ಷದ ಅಂಬಡೆ ಬೈಲು ಚಂದ್ರಶೇಖರ ಭಂಡಾರಿ ಅವರು 1970ರಲ್ಲಿ ಎಸ್‌.ಆರ್‌. ಹೆಗ್ಡೆ , ರತ್ನ ಕುಮಾರ್‌ ಅವರೊಂದಿಗೆ ಮಂಗಳೂರಿನಲ್ಲಿ ತುಳುಕೂಟವನ್ನು ಸ್ಥಾಪಿಸಿ ತುಳು ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ವೇದಿಕೆಯನ್ನು ಹುಟ್ಟುಹಾಕಿದ್ದರು. ಮುಂದೆ ಈ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ತುಳು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು. ತುಳು ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟನೆ ಯಲ್ಲಿ ಕೈಜೋಡಿಸುತ್ತಾ ಬಂದಿದ್ದ ಇವರು ಉಜಿರೆಯಲ್ಲಿ ಜರಗಿದ ವಿಶ್ವ ತುಳು ಸಮ್ಮೇಳನದ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನಲ್ಲಿ ಸಮ್ಮೇಳನದ ವಲಯ ಸಮಿತಿಯಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಕಳೆದ ಬಾರಿ ಕೂಡ ತುಳು ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಭಂಡಾರಿ ಹೆಸರು ಕೇಳಿಬಂದಿದ್ದರೂ ಕೊನೆಯ ಹಂತದಲ್ಲಿ ಅದು ಕೈತಪ್ಪಿಹೋಗಿತ್ತು.

ಹಿರಿಯ ಕಾಂಗ್ರೆಸಿಗರಾಗಿರುವ ಎ.ಸಿ. ಭಂಡಾರಿಯವರು ದ.ಕ. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಕಾಂಗ್ರೆಸ್‌ ಕಿಸಾನ್‌ ಸೆಲ್‌ ಸಹ ಅಧ್ಯಕ್ಷರಾಗಿ ಅನೇಕ ಪ್ರಮುಖ ಹೊಣೆಗಾರಿಕೆಗಳನ್ನು ನಿರ್ವಹಿಸಿದ್ದಾರೆ. ಜಿಲ್ಲಾ ಪಂಚಾಯತ್‌ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಅವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದ ಆಡಳಿತ ಮೊಕ್ತೇಸರಾಗಿ 27 ವರ್ಷಗಳ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದಾರೆ. 

ತುಳು ಭಾಷೆಯ ಅಭಿವೃದ್ಧಿಗೆ ಒತ್ತು
“ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷತೆ ದೊರಕಿರುವುದು ಸಂತಸ ತಂದಿದೆ. ತುಳು ಭಾಷೆ ಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಸಂಘಟಕನಾಗಿ ಕಳೆದ 50 ವರ್ಷಗಳಿಂದ ಸೇವೆ ಮಾಡುತ್ತಾ ಬಂದಿದ್ದೇನೆ. ತುಳು ಭಾಷೆ ಯಲ್ಲಿ ಹೆಚ್ಚು ಸಾಹಿತ್ಯ ಕೃತಿಗಳು ಸೃಷ್ಟಿಯಾಗ ಬೇಕು. ಈ ನಿಟ್ಟಿನಲ್ಲಿ ಪ್ರೋತ್ಸಾಹ ಸಿಗಬೇಕು. ಇದಲ್ಲದೆ ಪ್ರಸ್ತುತ ಶಾಲೆಗಳಲ್ಲಿ ತುಳು ತೃತೀಯ ಭಾಷೆಯಾಗಿ ಕಲಿಕೆಯಾಗುತ್ತಿದ್ದು ಇದು ಇನ್ನಷ್ಟು ವಿಸ್ತಾರ ಗೊಳ್ಳಬೇಕು. ತುಳು ಭಾಷೆ 8ನೇ ಪರಿಚ್ಛೇದ ದಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಈಗಾಗಲೇ ಬಹಳಷ್ಟು ಪ್ರಯತ್ನಗಳು ನಡೆದಿವೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹೊಸದಿಲ್ಲಿಯಲ್ಲಿ ಪ್ರಧಾನಿ ಹಾಗೂ ಗೃಹಸಚಿವರ ಬಳಿ ತೆರಳಿದ ನಿಯೋಗದಲ್ಲಿ ನಾನು ಹೋಗಿದ್ದೆ. ಈ ಕಾರ್ಯಕ್ಕೆ ಎಲ್ಲರ ಸಹಕಾರ ಪಡೆದುಕೊಂಡು ಇನ್ನಷ್ಟು ಒತ್ತು ನೀಡಲಾಗುವುದು’ ಎಂದು ಎ.ಸಿ. ಭಂಡಾರಿ ಅವರು”ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.