ತುಳುನಾಡೋಚ್ಚಯ- 2017 ಉದ್ಘಾಟನೆ 


Team Udayavani, Dec 24, 2017, 9:41 AM IST

24-Dec-1.jpg

ಮಹಾನಗರ: ತುಳು ಸಂಸ್ಕೃತಿ ಆಚಾರ, ವಿಚಾರಗಳನ್ನು ಬಿಂಬಿಸುವ ನೃತ್ಯ, ವಿವಿಧ ಸಮುದಾಯಗಳ ಸಂಸ್ಕೃತಿ, ಉಡುಗೆ ತೊಡುಗೆಗಳ ಪ್ರದರ್ಶನ, ಜನಪದ ಕುಣಿತ, ತುಳುನಾಡಿನ ವಾದ್ಯೋಪಕರಣಗಳ ವಾದನ, ಗೊಂಬೆಯಾಟ, ಸ್ತಬ್ಧಚಿತ್ರ, ಸಿಂಗಾರ ಮೇಳ ಇವೆಲ್ಲಾ ಕಂಡಿದ್ದು ‘ತುಳುನಾಡೋಚ್ಚಯ 2017’ರ ಸಾಂಸ್ಕೃತಿಕ ಮೆರವಣಿಗೆಯಲ್ಲಿ.

ವಿಶ್ವ ತುಳುವೆರೆ ಆಯನೊ ಕೂಟ, ಡಾ| ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಎರಡು ದಿನ ಕಾಲ ನಡೆಯುವ ‘ತುಳುನಾಡೋಚ್ಚಯ 2017′-ತುಳುನಾಡ್‌ದ ಜಾತಿ, ಮತೊ, ಬಾಸೆ ಒತ್ತೂರ್ಮೆ’ ಸಮ್ಮೇಳನ ಪಿಲಿಕುಳ ಸಂಸ್ಕೃತಿ ಗ್ರಾಮದಲ್ಲಿ ಶನಿವಾರ ಉದ್ಘಾಟನೆಗೊಂಡಿತು. ವಾಮಂಜೂರಿನಿಂದ ಪಿಲಿಕುಳದವರೆಗೆ ಸಮ್ಮೇಳನದ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ತುಳುನಾಡಿನ ಗಂಡು ಕಲೆ ಯಕ್ಷಗಾನ, ಕೇರಳದ ಕಳರಿಫೈಟ್‌, ಲಂಬಣಿ ನೃತ್ಯ ಸೇರಿದಂತೆ ಮೆರವಣಿಗೆಯಲ್ಲಿ 28ಕ್ಕೂ ಹೆಚ್ಚು ಕಲಾಪ್ರಕಾರಗಳು ಕೈ ಜೋಡಿಸಿದವು. ಮೆರವಣಿಗೆಯೊಂದಿಗೆ ನೂರಾರು ಜನ ಸಂಭ್ರಮದಿಂದ ಹೆಜ್ಜೆ ಹಾಕಿದರು.

ಸಭಾ ಕಾರ್ಯಕ್ರಮ
ಸಾಂಸ್ಕೃತಿಕ ಮೆರವಣಿಗೆ, ವಿವಿಧ ಪ್ರದರ್ಶನಗಳ ಉದ್ಘಾಟನೆ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಪ್ರಸನ್ನ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ್‌ ಕೋಟ್ಯಾನ್‌, ತುಳುನಾಡೋಚ್ಚಯ 2017ರ ಅಧ್ಯಕ್ಷ ಡೇವಿಡ್‌ ಫ್ರಾಂಕ್‌ ಫೆರ್ನಾಂಡಿಸ್‌ , ತುಳುನಾಡೋಚ್ಚಯ 2017 ಯು.ಎ.ಇ. ಕಾರ್ಯಾದ್ಯಕ್ಷ ಎಂ.ಇ. ಮುಳೂರು, ಮುದ್ರಾಡಿ ಸ್ವಾಮಿ, ವಾಮಂಜೂರು ಚರ್ಚ್ ನ ಧರ್ಮಗುರು ಫಾ| ಸಿಪ್ರಿಯರ್‌ ಪಿಂಟೋ, ಮಂಜುನಾಥ್‌ ಭಂಡಾರಿ, ಡಾ| ಚೆನ್ನಪ್ಪ ಗೌಡ, ಮೂಡುಶೆಡ್ಡೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಹರಿ ಪ್ರಸಾದ್‌ ಶೆಟ್ಟಿ, ಹೇಮಲತಾ, ತುಳುನಾಡೋಚ್ಚಯದ ಪ್ರಧಾನ ಕಾರ್ಯದರ್ಶಿಗಳಾದ ಶಮೀನಾ ಆಳ್ವ, ಡಾ| ರಾಜೇಶ್‌ ಆಳ್ವ, ಪ್ರ.ಸಂಚಾಲಕ ಯೋಗೀಶ್‌ ಶೆಟ್ಟಿ ಜೆಪ್ಪು, ಪದಾಧಿಕಾರಿಗಳಾದ ರಾಜೀವ್‌ ಅಂಚನ್‌ ಅಪ್ಪಣಬೆಟ್ಟು, ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಪ್ರದರ್ಶನಗಳ ಉದ್ಘಾಟನೆ 
ಸಮ್ಮೇಳನ ನಗರಿಯಲ್ಲಿ ತುಳುನಾಡಿನ ಎಲ್ಲಾ ರೀತಿಯ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿತ್ತು. ವಸ್ತು ಪ್ರದರ್ಶನ, ತುಳುನಾಡಿನ ಖಾದ್ಯ ಸಂಸ್ಕೃತಿ ಬಿಂಬಿಸುವ ಆಹಾರೋತ್ಸವ, ಕೃಷಿ ವಸ್ತು ಪ್ರದರ್ಶನ, ಕುಲಕಸುಬು, ಪುಸ್ತಕ, ಸಂಸ್ಕೃತಿ, ವ್ಯಾಪಾರ ಮಳಿಗೆ, ಚಿತ್ರ ಹಾಗೂ ಛಾಯಾಚಿತ್ರ, ನಾಡಮದ್ದು, ಯಂತ್ರೋಪಕರಣ, ಪುಷ್ಪೋದ್ಯಾನಗಳ ಪ್ರದರ್ಶನಗಳನ್ನು ಆಗಮಿಸಿದ್ದ ಗಣ್ಯರು ಉದ್ಘಾಟಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.