ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ 500 ಕೋ.ರೂ. ಪರಿಹಾರಕ್ಕೆ ಆಗ್ರಹ


Team Udayavani, Jul 7, 2017, 3:00 AM IST

Tumbe-Dam-1-600.jpg

ಬಂಟ್ವಾಳ: ತುಂಬೆ ಡ್ಯಾಂ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ಮುಂದಿನ ಬಜೆಟ್‌ನಲ್ಲಿ 250 ಕೋ. ರೂ. ಮೀಸಲಿಡುವಂತೆ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಮೊತ್ತ ಏನೇನು ಸಾಲದು. ಕನಿಷ್ಠ 500 ಕೋ.ರೂ.ಗಳನ್ನಾದರೂ ನೀಡಬೇಕು ಎಂದು ತುಂಬೆ ಡ್ಯಾಂ ಸಂತ್ರಸ್ತ ಹೋರಾಟ ಸಮಿತಿ ಹೇಳಿದೆ. 13 ವರ್ಷಗಳ ಈ ಜ್ವಲಂತ ಸಮಸ್ಯೆಗೆ ಈಗಾಗಲೇ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ನೀಡಬೇಕಾಗಿತ್ತು. ನೇತ್ರಾವತಿಗೆ ತುಂಬೆಯಲ್ಲಿ 11 ಮೀಟರ್‌ ಎತ್ತರದ ಡ್ಯಾಂ ನಿರ್ಮಿಸಿದರೆ ಕೃಷಿಭೂಮಿ ಜಲಾವೃತಗೊಳ್ಳಲಿದ್ದು ಅದಕ್ಕೆ ಪ್ರತಿಯಾಗಿ ಕೃಷಿ ಭೂಮಿ, ನ್ಯಾಯೋಚಿತ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಒತ್ತಾಯಿಸಿದೆ.

ಹಿತಾಸಕ್ತಿ ಕಾಪಾಡಲು ವಿಫ‌ಲ
ಮುಳುಗಡೆ ಜಮೀನಿನ ಸ್ಪಷ್ಟ, ಲಿಖೀತ ಮಾಹಿತಿ ನೀಡಬೇಕೆಂದು 2004ರಿಂದ ಒತ್ತಾಯಿಸಿದರೂ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಜಿಲ್ಲಾಡಳಿತ ತನ್ನ ಇಚ್ಚಾಶಕ್ತಿ ತೋರಿಸಿಲ್ಲ. 2004ರಲ್ಲಿ ಅಂದಿನ ಜಿಲ್ಲಾಧಿಕಾರಿ ರೈತರಿಗೆ ಪರಿಹಾರ ನೀಡಲು 3 ಕೋ.ರೂ. ತೆಗೆದಿಡಲಾಗಿದೆ ಎಂದಿದ್ದರು. 2012ರಲ್ಲಿ ಪ್ರಕಾಶ್‌ ಅವರು ಜಿಲ್ಲಾಧಿಕಾರಿಯಾಗಿದ್ದಾಗ ರೈತರ ಸಭೆ ಜರಗಿಸಿ ಪ್ರತಿ ಎಕರೆಗೆ 50 ಲಕ್ಷ  ರೂ. ಪರಿಹಾರ, ಅಂದಾಜು 500 ಕೋ.ರೂ. ಅನುದಾನಕ್ಕೆ ಪ್ರಸ್ತಾವನೆ, 2017ರಲ್ಲಿ ರೈತರಿಗೆ 7 ಕೋ.ರೂ.  ಪರಿಹಾರ ಧನ ವಿತರಿಸಲಾಗುವುದು ಎಂದು ಸ್ಥಳೀಯ ಜಿ.ಪಂ ಸದಸ್ಯರು ತಿಳಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಒಟ್ಟು 488 ಎಕರೆ ಮುಳುಗಡೆಯಾಗಲಿದ್ದು ಎಲ್ಲ ರೈತರಿಗೂ ಪರಿಹಾರ ಒದಗಿಸಲಾಗುವುದು ಎಂದಿದ್ದರು. ಆದರೆ ಸಂತ್ರಸ್ತ ರೈತರಿಗೆ ಈ ತನಕ ಶಾಶ್ವತ ಪರಿಹಾರ ದೊರೆತಿಲ್ಲ ಎಂದಿದೆ.

ಕೇಂದ್ರ ಜಲ ಆಯೋಗ ನಿರ್ದೇಶನದಂತೆ ಒರತೆ ಪ್ರದೇಶ ಸೇರಿ ಸರ್ವೆ ನಡೆಸಿದಲ್ಲಿ ಮುಳುಗಡೆ ಪ್ರದೇಶ ಇನ್ನೂ ಜಾಸ್ತಿಯಾಗಲಿದ್ದು ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರಕಾರ 500 ಕೋಟಿ ರೂ.ಗೂ  ಹೆಚ್ಚು ಅನುದಾನ ಬಿಡುಗಡೆಗೊಳಿಸಬೇಕು ಎಂದು ಕರ್ನಾಟಕ ರೈತಸಂಘ ಹಸಿರುಸೇನೆ ಜಿಲ್ಲಾ ಕಾರ್ಯದರ್ಶಿ ಮನೋಹರ್‌ ಶೆಟ್ಟಿ. ತುಂಬೆ ಡ್ಯಾಂ ಸಂತ್ರಸ್ತ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್‌, ಪದಾಧಿಕಾರಿಗಳಾದ ಎನ್‌.ಕೆ, ಇದಿನಬ್ಬ, ಶರತ್‌ ಕುಮಾರ್‌, ಸುದೇಶ ಮಯ್ಯ, ಅಬ್ದುಲ್‌ ರಹಿಮಾನ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.