ಟ್ವೀಟರ್ ಅಭಿಯಾನಕ್ಕೆ ದ.ಕ. ಜಿಲ್ಲೆ ಆರು ಶಾಸಕರ ಬೆಂಬಲ
Team Udayavani, Aug 11, 2018, 9:52 AM IST
ಮಂಗಳೂರು: ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆ ಸೇರ್ಪಡೆಗೆ ಒತ್ತಾಯಿಸಿ ಜೈ ತುಳುನಾಡು ಸಂಘಟನೆ TuluOfficialin KA_KL ಹ್ಯಾಶ್ಟ್ಯಾಗ್ ಅಡಿ ಶುಕ್ರವಾರ ಹಮ್ಮಿಕೊಂಡ ಟ್ವೀಟರ್ ಅಭಿಯಾನಕ್ಕೆ ಕರಾವಳಿಯ ಶಾಸಕರೂ ಕೈಜೋಡಿಸಿದ್ದಾರೆ.
ಕರ್ನಾಟಕ ಮತ್ತು ಕೇರಳ ರಾಜ್ಯಗಳು ತುಳು ಭಾಷೆಗೆ ರಾಜ್ಯ ಮಾನ್ಯತೆ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಅಭಿಯಾನ ನಡೆದಿದೆ. ಶಾಸಕರಾದ ಎಸ್. ಅಂಗಾರ, ಡಿ. ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಯು. ರಾಜೇಶ್ ನಾೖಕ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ ಅವರು ಟ್ವೀಟಿಸಿದ್ದಾರೆ. ಅಲ್ಲದೆ ತುಳು ಲಿಪಿಯನ್ನು ಟ್ವೀಟರ್ನಲ್ಲಿ ಪ್ರಕಟಿಸಿದ್ದಾರೆ.
ತುಳುವಿಗೆ ಮಾನ್ಯತೆ ನೀಡಲು ರಾಜ್ಯ ಸರಕಾರ ಮಾತ್ರವಲ್ಲದೆ ಕೇರಳ ರಾಜ್ಯ ಸರಕಾರವನ್ನೂ ಈ ಅಭಿಯಾನದ ಮೂಲಕ ಒತ್ತಾಯಿಸಲಾಗಿದೆ. ರಾತ್ರಿಯ ಹೊತ್ತಿಗೆ ಸುಮಾರು 34 ಸಾವಿರ ಟ್ವೀಟ್ಗಳಾಗಿವೆ. ಟ್ವೀಟ್ ಅಭಿಯಾನಕ್ಕೆ ತುಳು ಭಾಷಿಗರು, ತುಳು ಭಾಷಾ ಪ್ರೇಮಿಗಳಲ್ಲದೆ ಅನಿವಾಸಿ ಭಾರತೀಯರೂ ಕೈಜೋಡಿಸಿದ್ದಾರೆ. ಟ್ವೀಟ್ಗಳಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ಮತ್ತು ಇತರ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು