ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು
Team Udayavani, Mar 29, 2023, 10:45 AM IST
ಮಂಗಳೂರು: ಕಳ್ಳತನ ಮಾಡಿದ ಬೈಕ್ ನಲ್ಲಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ಫಾರಿಶ್ ಶರ್ಮಾ(19), ಧನುಷ್ (20) ಬಂಧಿತ ಆರೋಪಿಗಳು. ಯಮಹಾ ಅರ್ ಎಕ್ಸ್ ,ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿತಗಳಿಂದ ಸ್ವಾಧೀನಪಡಿಸಕೊಳ್ಳಲಾಗಿದೆ.
ಮಂಗಳವಾರ ( 28-03-2023 ರಂದು) ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್ ಸವಾರಿಯಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಶಯಸ್ಪದವಾಗಿ ಕಂಡು ಬಂದ ಬಗ್ಗೆ ಅವರನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಈ ಎರಡು ಬೈಕ್ ಗಳು ಈ ಹಿಂದೆ ಮಂಗಳೂರು ನಗರದ ಪಂಪವಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಅರ್ ಎಕ್ಸ್ ಬೈಕ್ ನ್ನು ಹಾಗೂ ವಲೇನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳೆಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳಲ್ಲಿ ಫಾರಿಶ್ ಶರ್ಮಾ ವಿರುದ್ದ 2022 ರಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಠಾಣೇಯಲ್ಲಿ ಬೈಕ್ ಕಳವು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್ ಕೋಚ್
ಆರೋಪಿಯ ಪತ್ತೆ ಕಾರ್ಯದಲ್ಲಿ ಭಾಗವಹಿಸಿದವರು:
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ರವರ ಮಾರ್ಗದರ್ಶನದಂತೆ ಅಂಶುಕುಮಾರ್, ಉಪ ಪೊಲೀಸ್ ಆಯುಕ್ತರು, ಕಾನೂನು, ಸುವ್ಯವಸ್ಥೆ ಮತ್ತು ದಿನೇಶ್ ಕುಮಾರ್ ಬಿ.ಪಿ., ಉಪ ಪೊಲೀಸ್ ಆಯುಕ್ತರು, ಅಪರಾಧ ಮತ್ತು ಸಂಚಾರ ರವರ ನಿರ್ದೇಶನದಂತೆ ಹಾಗೂ ಮಹೇಶ್ ಕುಮಾರ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು