ಒಂದೇ ಸ್ಥಳದಲ್ಲಿ ಎರಡು ಬಸ್ಸುಗಳು ಚರಂಡಿಗೆ, ಪ್ರಯಾಣಿಕರು ಪಾರು
ವಿಟ್ಲ ಸಮೀಪದ ಮಿತ್ತೂರಿನಲ್ಲಿ ಘಟನೆ
Team Udayavani, Jul 2, 2019, 11:53 AM IST
ವಿಟ್ಲ : ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳು ಸ್ಪಲ್ಪ ಅಂತರದಲ್ಲಿ ಒಂದೇ ಸ್ಥಳದಲ್ಲಿ ಚರಂಡಿಗೆ ಉರುಳಿದ ಘಟನೆ ವಿಟ್ಲ ಸಮೀಪದ ಮಿತ್ತೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಆದರೆ ಹಲವು ಪ್ರಯಾಣಿಕರು ಪಾರಾಗಿದ್ದಾರೆ.
ಬೆಂಗಳೂರಿನಿಂದ ನಿನ್ನೆ ರಾತ್ರಿ ಮಂಗಳೂರಿಗೆ ಹೊರಟ ಖಾಸಗಿ ಬಸ್ ಮಿತ್ತೂರು ತಿರುವಿನಲ್ಲಿ ಹಾಲಿನ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ವಾಲಿ ನಿಂತಿದೆ. ಈ ಘಟನೆ ನಡೆದು ಸ್ಪಲ್ಪ ಹೊತ್ತಿನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೊಂದು ಕೆಎಸ್ ಆರ್ ಟಿಸಿ ಐರಾವತ ಬಸ್ ಅದೇ ಸ್ಥಳದಲ್ಲಿ ಚರಂಡಿಗಿಳಿದು ವಾಲಿ ನಿಂತಿದೆ. ಬಸ್ ಚರಂಡಿಗಿಳಿರುವುದನ್ನು ನೋಡುತ್ತ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ್ದಾರೆ. ಇದರಿಂದ ಬಸ್ ಚರಂಡಿಗಿಳಿದಿದೆಯೆನ್ನಲಾಗಿದೆ.
ಘಟನೆಯಲ್ಲಿ ಎರಡು ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಎರಡು ಬಸ್ ಗಳು ಅಕ್ಕಪಕ್ಕದಲ್ಲಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಎರಡು ಬಸ್ಸಿನ ಮುಂಭಾಗ ಜಖಂಗೊಂಡಿದೆ. ಟೆಲಿಫೋನ್ ಕೇಬಲ್ ಗೆ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ