ದ.ಕ.ದಲ್ಲಿ  ಶೇ.31.93ರಷ್ಟು ಮಂದಿಗೆ ಎರಡೂ ಡೋಸ್‌ ಲಸಿಕೆ ಪೂರ್ಣ


Team Udayavani, Aug 14, 2021, 3:40 AM IST

Untitled-1

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ತಿಂಗಳುಗಳಿಂದ ವಿವಿಧ ಹಂತಗಳಲ್ಲಿ ಕೋವಿಡ್‌ ನಿರೋಧಕ ಲಸಿಕೆ ಅಭಿಯಾನ ನಡೆಯುತ್ತಿದ್ದು, ಶೇ.31.93ರಷ್ಟು ಮಂದಿ ಎರಡೂ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಶೇ.54.15ರಷ್ಟು ಮಂದಿಗೆ ಮೊದಲ ಡೋಸ್‌ ಲಸಿಕೆ ಪೂರ್ಣವಾಗಿದೆ.

ಜಿಲ್ಲೆಯಲ್ಲಿ ಹಿರಿಯ ನಾಗರಿಕರು ಅತೀ ಹೆಚ್ಚು ಮಂದಿ ಲಸಿಕೆ ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟ ಶೇ.96.80 ರಷ್ಟು ಮಂದಿ ಮೊದಲ ಡೋಸ್‌, ಶೇ.56.17ರಷ್ಟು ಮಂದಿ ಎರಡನೇ ಡೋಸ್‌ ಲಸಿಕೆ ಪಡೆದು ಕೊಂಡಿದ್ದಾರೆ. ಅದೇ ರೀತಿ, ಆರೋಗ್ಯ ಕಾರ್ಯಕರ್ತರಲ್ಲಿ ಶೇ.96.48ರಷ್ಟು ಮಂದಿ ಮೊದಲ ಡೋಸ್‌ ಮತ್ತು ಶೇ.68.44ರಷ್ಟು ಮಂದಿ 2ನೇ ಡೋಸ್‌ ಲಸಿಕೆ ಪಡೆದಿದ್ದಾರೆ.

ಮುಂಚೂಣಿ ಕಾರ್ಯಕರ್ತರಲ್ಲಿ ಶೇ.100ರಷ್ಟು ಮಂದಿ ಮೊದಲನೇ ಡೋಸ್‌ ಪಡೆದಿದ್ದು, ಶೇ. 51.68ರಷ್ಟು ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. 18ರಿಂದ 44 ವರ್ಷದೊಳಗಿನ ಶೇ.37.57ರಷ್ಟು ಮಂದಿ ಮೊದಲ ಡೋಸ್‌, ಶೇ.9.20ರಷ್ಟು ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಶೇ.70ರಷ್ಟು ಮಂದಿ ಮೊದಲ ಡೋಸ್‌, 40.38ರಷ್ಟು ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ.

1,77,7574 ಮಂದಿ ಟಾರ್ಗೆಟ್‌ :

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯು ಒಟ್ಟಾರೆ 1,77,7574 ಮಂದಿ ಮೊದಲ ಡೋಸ್‌ ಟಾರ್ಗೆಟ್‌ ಇಟ್ಟುಕೊಂಡಿದ್ದು, 96,2577ಮಂದಿಗೆ ಮೊದಲ ಡೋಸ್‌ ಮತ್ತು 30,7439 ಮಂದಿಗೆ ಎರಡೂ ಡೋಸ್‌ ಲಸಿಕೆ ನೀಡಲಾಗಿದೆ. ಹತ್ತು ದಿನಗಳಲ್ಲಿ ಜಿಲ್ಲೆಯ ಲಸಿಕೆ ಕೇಂದ್ರಗಳಲ್ಲಿ ಕೋವಿಡ್‌ ರೋಗ ನಿರೋಧಕ ಲಸಿಕೆ ಅಭಿಯಾನ ನಡೆದಿದ್ದು, ಒಟ್ಟು 96,415 ಮಂದಿಗೆ ಲಸಿಕೆ ನೀಡಲಾಗಿದೆ.

ಜಿಲ್ಲೆಗೆ ಮತ್ತಷ್ಟು ಲಸಿಕೆ ನಿರೀಕ್ಷೆ  :

ದ.ಕ. ಜಿಲ್ಲೆಗೆ ರಾಜ್ಯ ಸರಕಾರದಿಂದ ಹತ್ತು ದಿನಗಳಲ್ಲಿ 67,000 ಡೋಸ್‌ ಲಸಿಕೆ ಬಂದಿದೆ. ಕೆಲವು ದಿನಗಳ ಹಿಂದೆ ತಿಂಗಳಲ್ಲಿ ಕೇವಲ 2 ಲಕ್ಷ ಡೋಸ್‌ ಲಸಿಕೆ ಬರುತ್ತಿತ್ತು. ಇದೀಗ ಲಸಿಕೆ ಸರಬರಾಜು ತುಸು ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ಆ. 10ರ ವರೆಗಿನ ಮಾಹಿತಿಯಂತೆ ಒಟ್ಟು 38,901 ಮಂದಿ ಎರಡನೇ ಡೋಸ್‌ ಲಸಿಕೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ 23,500 ಮಂದಿ ಕೊವಿಶೀಲ್ಡ್‌ ಮತ್ತು 15,401 ಮಂದಿ ಕೊವ್ಯಾಕ್ಸಿನ್‌ ಎರಡನೇ ಡೋಸ್‌ ಪಡೆಯಲು ಬಾಕಿ ಇದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಆರೋಗ್ಯ ಇಲಾಖೆ ಜತೆ ನಡೆಸಿದ ಸಭೆಯಲ್ಲಿ ಭರವಸೆ ನೀಡಿದ್ದು, ಅದರಂತೆ ದ.ಕ. ಜಿಲ್ಲೆಯು ಗಡಿ ಸಂಪರ್ಕ ಹೊಂದಿರುವುದರಿಂದ ಗಡಿಯ 10 ಕಿ.ಮೀ. ವ್ಯಾಪ್ತಿಯ ಜನರಿಗೆ ಎಷ್ಟು ಪ್ರಮಾಣ ಹೆಚ್ಚು ವರಿ ಲಸಿಕೆ ಬೇಕು ಎಂದು ತಿಳಿಸಿದರೆ ಒದಗಿಸಲಾಗುವುದು ಎಂದಿದ್ದರು. ಜಿಲ್ಲೆಗೆ ಆ. 9ರಂದು 17,550 ಡೋಸ್‌ ಲಸಿಕೆ ಬಂದಿದ್ದು, ಶನಿವಾರ ಕೂಡ 21,100 ಡೋಸ್‌ ಲಸಿಕೆ ಜಿಲ್ಲೆಗೆ ಸರಬರಾಜು ಆಗಲಿದೆ.

ಲಸಿಕೆಯ ಫ‌ಲಾನುಭವಿಗಳು :

ಫಲಾನುಭವಿಗಳು      ಗುರಿ     ಮೊದಲ ಡೋಸ್‌      ಎರಡನೇ ಡೋಸ್‌

ಆರೋಗ್ಯ ಕಾರ್ಯಕರ್ತರು    52,523 50,672 34,682

ಮುಂಚೂಣಿ ಕಾರ್ಯಕರ್ತರು           15,784 15,792 8,162

60 ವರ್ಷ ಮೇಲ್ಪಟ್ಟವರು       2,01,000         1,94,566         1,09,297

45-60 ವರ್ಷದವರು   4,16,123         2,91,279         1,17,613

18ರಿಂದ 44 ವರ್ಷ      10,92,144       4,10,268         37,739

ಒಟ್ಟು 17,77,574       9,62,577         3,07,439

ದ.ಕ. ಜಿಲ್ಲೆಯಲ್ಲಿ ಕೋವಿಡ್‌ ರೋಗ ನಿರೋಧಕ ಲಸಿಕೆ ಮೊದಲ ಡೋಸ್‌ ಶೇ.50ಕ್ಕೂ ಹೆಚ್ಚು ಮಂದಿಗೆ ನೀಡಲಾಗಿದ್ದು, ಶೇ.30ಕ್ಕೂ ಹೆಚ್ಚಿನ ಮಂದಿ ಎರಡೂ ಡೋಸ್‌ ಲಸಿಕೆ ಪಡೆದಿದ್ದಾರೆ. ಕೆಲವು ದಿನಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪೂರೈಕೆಯಾಗುತ್ತಿದ್ದು, ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. -ಡಾ| ರಾಜೇಶ್‌,  ಆರ್‌ಸಿಚ್‌ ಅಧಿಕಾರಿ, ದ.ಕ. ಜಿಲ್ಲಾ ಆರೋಗ್ಯ ಇಲಾಖೆ

 

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.