“ಪಠ್ಯ-ಪಠ್ಯೇತರ ಒಂದೇ ನಾಣ್ಯದ ಎರಡು ಮುಖಗಳು’
Team Udayavani, Aug 3, 2017, 7:20 AM IST
ಸುಳ್ಯ : ಅವಕಾಶಗಳು ನಮ್ಮನ್ನು ಅರಸಿ ಬರುವುದಿಲ್ಲ, ನಾವೇ ಅವಕಾಶಗಳ ಬಾಗಿಲು ತಟ್ಟಬೇಕು. ಓದಿನ ಜತೆಗೆ ಮನಸ್ಸಿನ ಭಾವನೆಗಳನ್ನು ಪಠ್ಯೇತರ ಚಟುವಟಿಕೆಗಳ ಮೂಲಕ ಹೊರಹಾಕುವ ಪ್ರಯತ್ನ ಮಾಡಿ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖವಿದ್ದ ಹಾಗೆ ಎಂದು ಮೈಸೂರು ರಂಗಾಯಣದ ಪ್ರಸಿದ್ಧ ಕಲಾವಿದೆ ಗೀತಾ ಮೋಂಟಡ್ಕ ಅವರು ಹೇಳಿದರು.
ಅವರು ಸುಳ್ಯದ ನೆಹರೂ ಮೆಮೋ ರಿಯಲ್ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಹಮ್ಮಿಕೊಂಡ ಸಾಂಸ್ಕೃತಿಕ ಚಟುವಟಿಕೆಗಳ ಕುರಿತ ಮಾಹಿತಿ ಕಾರ್ಯಕ್ರಮ ಸಾಂಸ್ಕೃತಿಕ ಸಂವಹನವನ್ನು ಉದ್ಘಾಟಿಸಿ ಮಾತನಾಡಿದರು.
ಗುರಿ, ಧೈರ್ಯ, ಪ್ರಯತ್ನ, ಆತ್ಮವಿಶ್ವಾಸ ನಮ್ಮಲ್ಲಿದ್ದಾಗ ನಾವು ಉನ್ನತವಾದ ಸಾಧನೆಯನ್ನು ಮಾಡಲು ಸಾಧ್ಯ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಗಿರಿಧರ ಗೌಡ ಕೆ. ಅವರು ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಗೆ ಇಂದಿನ ದಿನಗಳಲ್ಲಿ ಬೇಕಾದಷ್ಟು ಅವಕಾಶಗಳಿವೆ. ಅದನ್ನು ಬಳಸಿಕೊಂಡು ಓರ್ವ ಪ್ರತಿಭಾನ್ವಿತ ವಿದ್ಯಾ ರ್ಥಿಯಾಗಿ ಹೊರಬಂದಾಗ ಸಮಾಜ ನಿಮ್ಮನ್ನು ಗುರುತಿಸುತ್ತದೆ ಎಂದರು.
ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ| ಅನುರಾಧಾ ಕುರುಂಜಿ ಪ್ರಾಸ್ತಾ ವಿಕವಾಗಿ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಎರಡರಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿ ಜೀವನ ಪರಿಪೂರ್ಣ ಎಂದರು.
ಸೌಜನ್ಯಾ ರೈ, ದೇವಿಕಾ ವೈ, ಅಮೃತ ಪ್ರಾರ್ಥಿಸಿ, ಕಾಲೇಜಿನ ಸಾಂಸ್ಕೃತಿಕ ಸಂಘದ ಪ್ರತಿನಿಧಿ ವಿರಾಟ್ ಕೆ .ಆರ್. ಸ್ವಾಗತಿಸಿ, ರೇಷ್ಮಾ ಕೆ. ವಂದಿಸಿದರು. ಸುಶ್ಮಿತಾ ಕೆ. ವೈ ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಸಂಘದ ಸದಸ್ಯರಾದ ಕೃಪಾ ಎ.ಎನ್., ಪ್ರಣೀತಾ ಬಿ. ಪಿ., ವಿಷ್ಣುಪ್ರಶಾಂತ್ ಬಿ., ಶೋಭಾ ಎ., ನಿವೇದಿತಾ ಬಿ. ವಿ., ಪ್ರಜ್ಞಾ ಪಿ. ಕೆ., ಮಾನಸಾ ಭಾರದ್ವಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ