Dakshina Kannada ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್; ಒಂದು ಸಾವು
Team Udayavani, Dec 25, 2023, 11:07 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಪ್ರಮಾಣವನ್ನು ಏರಿಕೆ ಮಾಡಲಾಗಿದ್ದು, ಪಾಸಿಟಿವ್ ಕೂಡ ಹೆಚ್ಚಾಗು ತ್ತಿದೆ. ಸೋಮವಾರ 62 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 5 ಮಂದಿಗೆ ಸೋಂಕು ದೃಢಪಟ್ಟಿದೆ.
ಪುತ್ತೂರು ಮೂಲದ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣ 9ಕ್ಕೆ ಏರಿಕೆ ಕಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಕೋವಿಡ್ ರೂಪಾಂ ತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ 331 ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸು ವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಡಿ. 25ರಂದು ಜಿಲ್ಲೆಯಲ್ಲಿ 62 ಮಂದಿಯನ್ನು ತಪಾಸಣೆ ಗೆ ಒಳಪಡಿಸಲಾಗಿದೆ. ತಪಾಸಣೆಗೆ ಸಂಬಂಧಪಟ್ಟ ಕಿಟ್ಗಳು ಈಗಾಗಲೇ ಸರಕಾರದಿಂದ ಪೂರೈಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತಪಾಸಣೆಗೆ ನಡೆಸುವ ಗುರಿ ಆರೋಗ್ಯ ಇಲಾಖೆ ಹೊಂದಿದೆ.
ಮೂವರು ಐಸಿಯುನಲ್ಲಿ
ದ.ಕ.ದಲ್ಲಿ ಕೋವಿಡ್ ದೃಢಪಟ್ಟ ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಖಾಸಗಿ ಮತ್ತು ಒಬ್ಬರು ಸರಕಾರಿ ಆಸ್ಪತ್ರೆ ಯಲ್ಲಿ ಐಸಿಯುನಲ್ಲಿದ್ದಾರೆ. ಇಬ್ಬರು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿ ನಿರೀಕ್ಷೆಯಲ್ಲಿ ಇಲಾಖೆ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಸಾವನ್ನಪ್ಪಿ ರುವ ಜಾರ್ಝಂಡ್ ಮೂಲದ 40 ವರ್ಷದ ವ್ಯಕ್ತಿಯ ಗಂಟಲ ದ್ರವ ಮಾದರಿಯನ್ನು ಪುಣೆಯ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ಗ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕೋವಿಡ್ ರೂಪಾಂತರಿ ಜೆಎನ್.1 ವೈರಸ್ ಇದೆಯೇ ಎಂದು ದೃಢಪಡಲಿದೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಶೂನ್ಯ
ಉಡುಪಿ: ಜಿಲ್ಲೆಯಲ್ಲಿ ಸೋಮ ವಾರ 94 ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸ ಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ಪ್ರಕರಣಗಳಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!