ಕಡಲಿಗಿಳಿಯುವ ನಾಡದೋಣಿಗಳಿಗೆ ಇನ್ನೆರಡು ತಿಂಗಳು ಸುಗ್ಗಿ!

ದಡ ಸೇರಿದ ಯಾಂತೀಕೃತ ಮೀನುಗಾರಿಕೆ ಬೋಟ್‌

Team Udayavani, Jun 2, 2023, 2:59 PM IST

ಕಡಲಿಗಿಳಿಯುವ ನಾಡದೋಣಿಗಳಿಗೆ ಇನ್ನೆರಡು ತಿಂಗಳು ಸುಗ್ಗಿ!

ಮಹಾನಗರ: ಮುಂಗಾರು ಆಗಮನಕ್ಕೆ ಕಾಲ ಕೂಡಿಬರುತ್ತಿದ್ದಂತೆ ಯಾಂತ್ರೀಕೃತ ಮೀನುಗಾರಿಕೆಯ ಋತು ಪೂರ್ಣಗೊಳಿಸಿದ ಮೀನುಗಾರರು ದಡ ಸೇರಿದ್ದಾರೆ. ಇನ್ನೆರಡು ತಿಂಗಳು ನಾಡದೋಣಿಯ ಕಾರುಬಾರು!

ಬಹು ಸವಾಲಿನ ಮಧ್ಯೆ ಮೀನುಗಾರಿಕೆ ಪೂರ್ಣಗೊಳಿಸಿ ದಡಕ್ಕೆ ಬಂದ ಮೀನುಗಾರರಿಗೆ 2 ತಿಂಗಳು ರಜೆ. ಈ ವೇಳೆ ಮೀನುಗಾರರು ಬೋಟ್‌ ರಿಪೇರಿ, ಬಲೆ ನೇಯುವುದು ಮತ್ತಿತರ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತಾರೆ.

ಯಾಂತ್ರೀಕೃತ ಮೀನುಗಾರಿಕೆಗೆ ರಜೆ ಸಂದರ್ಭ ನಾಡದೋಣಿಗಳು ಮೀನು ಬೇಟೆಗೆ ಇಳಿಯುತ್ತವೆ. ದೋಣಿ-ಬಲೆಯೊಂದಿಗೆ ಕಡಲಿಗೆ ಇಳಿಯುವ ಇವರು 10 ಅಶ್ವಶಕ್ತಿಯ ಎಂಜಿನ್‌ ಅಳವಡಿಸಿದ ದೋಣಿಗಳಲ್ಲಿ ಸಮುದ್ರದ ಬದಿ, ನದಿಗಳಲ್ಲಿ ಜೂ. 1ರಿಂದ ಮೀನುಗಾರಿಕೆ ನಡೆಸಲು ಅವಕಾಶವಿದೆ.

ಸಾಮಾನ್ಯವಾಗಿ ಜೂನ್‌ ಮೊದಲನೇ ದಿನವೇ ನಾಡದೋಣಿಗಳು ಕಡಲಿಗಿಳಿ ಯುತ್ತವೆ. ಆದರೆ ಈ ಬಾರಿ ಕಡಲಿನಲ್ಲಿ “ತೂಫಾನ್‌’ ಇಲ್ಲದ ಕಾರಣದಿಂದ ಸಂಚಾರ ತಡವಾಗಿದೆ. ಆದರೂ ಬೆರಳೆಣಿಕೆ ನಾಡದೋಣಿಗಳು ಮಂಗಳೂರಿನ ಹಳೆಬಂದರಿನ ಮೂಲಕ/ಬೀಚ್‌ ಸಮೀಪದಿಂದ ಮೀನು ಗಾರಿಕೆಗೆ ತೆರಳುತ್ತಾರೆ. ಕಡಲು ಪ್ರಕ್ಷುಬ್ಧವಾದ ಬಳಿಕ ಎನ್‌ಎಂಪಿಎ (ನವಮಂಗಳೂರು ಬಂದರು)ವ್ಯಾಪ್ತಿಗೆ ಬಂದು ನಿಗದಿತ ಪಾಸ್‌ ಪಡೆದು ಅಲ್ಲಿಂದಲೇ ಮೀನುಗಾರಿಕೆ ನಡೆಸಬೇಕಾಗುತ್ತದೆ.

ಸಮುದ್ರದಲ್ಲಿ ಸುಮಾರು 20 ಕಿ.ಮೀ.ನ ಒಳಗಡೆಯಲ್ಲಿ ನಾಡದೋಣಿ ಮೀನುಗಾರಿಕೆ ನಡೆಯುತ್ತದೆ. ಆದರೆ ಸಮುದ್ರ ಪ್ರಕ್ಷುಬ್ಧವಾಗಿರುವ ಸಮಯದಲ್ಲಿ 10 ಕಿ.ಮೀ.ನ ಒಳಗಡೆಯೇ ಮೀನುಗಾರಿಕೆ ನಡೆಯುತ್ತದೆ. ಒಂದು ಹಂತದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡರೆ ಉತ್ತಮ ಮೀನುಗಾರಿಕೆ ನಡೆಸಬಹುದು. ಆದರೆ ಸಾಮಾನ್ಯಕ್ಕಿಂತ ಜಾಸ್ತಿಯಾಗಿ ಸಮುದ್ರ ಅಬ್ಬರಿಸಿದರೆ ನಾಡದೋಣಿಗಳ ಸಂಚಾರಕ್ಕೆ ಅಪಾಯ ಉಂಟಾಗುತ್ತದೆ. ಹೀಗಾಗಿ ನಾಡದೋಣಿ ಮೀನುಗಾರರಿಗೆ ಮಾನ್ಸೂನ್‌ ಅಗ್ನಿಪರೀಕ್ಷೆಯ ಸಮಯ.

ಅಂದಾಜಿನ ಪ್ರಕಾರ ದ.ಕ. ಜಿಲ್ಲೆಯಲ್ಲಿ ಸುಮಾರು 70 ಜೋಡಿ ನಾಡದೋಣಿಗಳಿವೆ. ಒಂದೊಂದು ಜೋಡಿಯಲ್ಲಿ ಸರಿಸುಮಾರು 4ರಿಂದ 5 ದೋಣಿಗಳಿರುತ್ತವೆ. ಒಂದು ಜೋಡಿಯಲ್ಲಿ ಸುಮಾರು 50ರಿಂದ 60 ಮೀನುಗಾರರಿರುತ್ತಾರೆ. ಒಂದೊಂದು ಜೋಡಿ 6ರಿಂದ 8 ಲಕ್ಷ ರೂ.ವರೆಗೆ ಸರಾಸರಿ ಮೀನುಗಾರಿಕೆ ನಡೆಸಿದ್ದೂ ಇದೆ.

ದಡಕ್ಕೆ ಬಂದ ಬೋಟ್‌ಗೆ ಜಾಗವಿಲ್ಲ!
ಮೀನುಗಾರಿಕೆಗೆ ತೆರಳಿ ವಾಪಸಾದ ಬೋಟ್‌ಗಳಿಗೆ ಮಂಗಳೂರಿನ ದಕ್ಕೆಯಲ್ಲಿ ನಿಲುಗಡೆಗೆ ಜಾಗವಿಲ್ಲದ ದೂರು ಈ ಬಾರಿಯೂ ಕೇಳಿಬಂದಿದೆ. ಇಲ್ಲಿ ಮೋಟರೀಕೃತ ನಾಡದೋಣಿ, ಯಾಂತ್ರೀಕೃತ ದೋಣಿ ಸೇರಿದಂತೆ ಸುಮಾರು 2000ಕ್ಕೂ ಅಧಿಕ ಇವೆ. ಈಗ ಇರುವ ಮಂಗಳೂರು ದಕ್ಕೆ 600 ಮೀಟರ್‌ ಉದ್ದವಿದೆ. ಇದರಲ್ಲಿ ಒಂದು ಸಾಲಿನಲ್ಲಿ ಕ್ರಮಪ್ರಕಾರವಾಗಿ ಹೆಚ್ಚಾ ಕಡಿಮೆ 350 ಬೋಟುಗಳಿಗೆ ನಿಲ್ಲಲು ಮಾತ್ರ ಅವಕಾಶ. ಉಳಿದಂತೆ ಎಲ್ಲ ಬೋಟುಗಳು ಇತರ ಪ್ರದೇಶಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಒಂದೊಂದು ಬೋಟುಗಳನ್ನು ತಾಗಿಸಿ ಇಟ್ಟಿರುವ ಪರಿಣಾಮ ಬೋಟ್‌ಗಳಿಗೆ ಹಾನಿಯಾಗುತ್ತಿವೆ. ಲಕ್ಷಾಂತರ ರೂ. ನಷ್ಟವಾಗುತ್ತಿವೆ.

61 ದಿನಗಳ ನಿಷೇಧ ಆರಂಭ
ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ, ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ ಜುಲೈ 31ರ ವರೆಗೆ ಸೇರಿ ಒಟ್ಟು 61 ದಿನಗಳು ನಿಷೇಧಿಸಲಾಗಿದೆ. ಆದರೆ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಎಂಜಿನ್‌ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
– ಹರೀಶ್‌ ಕುಮಾರ್‌, ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ ದ.ಕ.

-ದಿನೇಶ್‌ ಇರಾ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.