41 ಕೆ.ಜಿ. ಗಾಂಜಾ ವಶ: ಕಾಸರಗೋಡು ಮೂಲದ ಇಬ್ಬರ ಬಂಧನ
Team Udayavani, Jul 18, 2019, 8:59 AM IST
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಮಾಫಿಯಾಗಳ ಮೇಲೆ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಪೊಲೀಸರು ಇದೀಗ ಕಾವೂರಿನಲ್ಲಿ ಬರೋಬ್ಬರಿ 41 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಳ್ಳುವ ಮೂಲಕ ಬಹುದೊಡ್ಡ ಮಾದಕ ಜಾಲವೊಂದನ್ನು ಭೇದಿಸಿದ್ದಾರೆ.
ಬಂಧಿತರನ್ನು ಕಾಸರಗೋಡು ನೆಕ್ರಾಜೆ ಲಕ್ಷಂಬೀಡು ಕಾಲನಿ ನಿವಾಸಿ ಮಹಮ್ಮದ್ ಇಕ್ಬಾಲ್ (34) ಮತ್ತು ಕಾಸರಗೋಡು ಎರಿಯಾಲ್ ಲೈಟ್ ಹೌಸ್ ಬೀಚ್ ರೋಡ್ ನಿವಾಸಿ ಫಜಲ್ ಎ.ಎಂ (30) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 41.140 ಕೆ.ಜಿ ಗಾಂಜಾ, ಸಾಗಾಟ ಮಾಡಲು ಬಳಸಿದ 50 ಸಾವಿರ ರೂ. ಮೌಲ್ಯದ ಕಾರು, ಗಾಂಜಾ ತೂಕ ಮಾಡಲು ಬಳಸುವ 250 ರೂ. ಮೌಲ್ಯದ ತೂಕ ಮಾಪಕ, ಸುಮಾರು 5 ಸಾವಿರ ರೂ. ಮೌಲ್ಯದ 2 ಮೊಬೈಲ್ಗಳು, ಗಾಂಜಾ ತುಂಬಿಸಿಡಲು ಉಪಯೋಗಿಸುವ ಗೋಣಿ ಚೀಲಗಳು ಸೇರಿದಂತೆ ಒಟ್ಟು 12,55,260 ರೂ. ಗಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ನೋಂದಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಮಣಿಪಾಲದ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಬೋಂದೆಲ್ಗೆ ಹೋಗುವ ಈಶ್ವರಕಟ್ಟೆ ಬಳಿ ಕಾವೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಹನುಮಂತರಾಯ ಹಾಗೂ ಲಕ್ಷ್ಮೀ ಗಣೇಶ್ ಅವರ ನಿರ್ದೇಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ಅವರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ ಮತ್ತು ಪಿಎಸ್ಐ ಹರೀಶ್ ಎಚ್.ವಿ., ಪ್ರೊಬೆಷನರಿ ಪಿಎಸ್ಐ ಮಲ್ಲಿಕಾರ್ಜುನ್, ಹೆಡ್ ಕಾನ್ಸ್ಟೆಬಲ್ಗಳಾದ ದುರ್ಗಾಪ್ರಸಾದ್ ಶೆಟ್ಟಿ, ಸಂಜೀವ, ಪ್ರಮೋದ್ ಎ.ಎಸ್., ರಾಜಶೇಖರ ಗೌಡ, ಕಾನ್ ಸ್ಟೆಬಲ್ಗಳಾದ ರಶೀದ್ ಶೇಖ್, ಕೇಶವ ಗೌಡ, ವಿನಯ್ ಕುಮಾರ್, ಶ್ರೀಧರ್ ವಿ., ಜೀಪು ಚಾಲಕರಾದ ಇಬ್ರಾಹಿಂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ