ಉದನೆ ತೂಗು ಸೇತುವೆ: ಕಾಂಕ್ರೀಟ್‌ ಹಲಗೆ ಅಲ್ಲಲ್ಲಿ ಬಿರುಕು


Team Udayavani, Aug 29, 2021, 6:15 AM IST

ಉದನೆ ತೂಗು ಸೇತುವೆ: ಕಾಂಕ್ರೀಟ್‌ ಹಲಗೆ ಅಲ್ಲಲ್ಲಿ ಬಿರುಕು

ಸುಬ್ರಹ್ಮಣ್ಯ: ಉದನೆಯಲ್ಲಿ ಸುಮಾರು 24 ವರ್ಷಗಳ ಹಿಂದೆ ಗುಂಡ್ಯ ಹೊಳೆಗೆ ನಿರ್ಮಾಣ ಗೊಂಡಿ ರುವ ತೂಗುಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಕಾಂಕ್ರೀಟ್‌ ಹಲಗೆ ನಾಲ್ಕೈದು ಕಡೆಗಳಲ್ಲಿ ಬಿರುಕು ಬಿಟ್ಟಿದ್ದು ಜನರ ಓಡಾಟಕ್ಕೆ ಅಪಾಯಕಾರಿಯಾಗಿದೆ. ದುರಸ್ತಿಗೆ ಆಗ್ರಹ ವ್ಯಕ್ತವಾಗಿದೆ.

ಶಿರಾಡಿ ಹಾಗೂ ಕೊಣಾಜೆ ಗ್ರಾಮ ಸಂಪರ್ಕಕ್ಕೆ ಈ ಭಾಗದ ಜನರು ಸುತ್ತು ಬಳಸಿ ಬರಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಬೇಡಿಕೆಯಂತೆ 1997ರಲ್ಲಿ ತೂಗು ಸೇತುವೆ ನಿರ್ಮಾಣಗೊಂಡಿತ್ತು. ತೂಗು ಸೇತುವೆ ಸರದಾರ ಸುಳ್ಯದ ಗಿರೀಶ್‌ ಭಾರದ್ವಾಜ್‌ ಅವರು ಈ ತೂಗು ಸೇತುವೆ ನಿರ್ಮಾಣ ಮಾಡಿದ್ದಾರೆ. ಅವರ 2ನೇ ತೂಗು ಸೇತುವೆ ಇದಾಗಿದೆ. ಈಗ ತೂಗು ಸೇತುವೆ ನಿರ್ಮಾಣಗೊಂಡು ಬರೋಬ್ಬರಿ 24 ವರ್ಷಗಳಾಗುತ್ತಿದೆ.

ಬಿರುಕು ಬಿಟ್ಟ ಹಲಗೆ
ಬಹುಪಯೋಗಿ ಆಗಿರುವ ಉದನೆ ತೂಗು ಸೇತುವೆಯ ನಾಲ್ಕೈದು ಕಡೆಗಳಲ್ಲಿ ಕಾಂಕ್ರಿಟ್‌ ಹಲಗೆ ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಹಲಗೆ ಮೂಲಕ ನದಿ ನೀರು ಕಾಣಿಸುತ್ತಿದೆ. ಜನರು ಓಡಾಟ ನಡೆಸುವ ವೇಳೆ ತಪ್ಪಿ ಹಲಗೆಯಲ್ಲಿ ಕಾಲು ಸಿಲುಕಿಕೊಂಡಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಭಯದಲ್ಲೇ ಸಂಚರಿಸಬೇಕಾಗಿದೆ. ತೂಗು ಸೇತುವೆಯ ಎರಡೂ ಬದಿಗೆ ಹಾಕಲಾಗಿರುವ ಬಲೆಗೂ ಅಲ್ಲಲ್ಲಿ ತುಕ್ಕು ಹಿಡಿದಿದೆ. ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ಬಿರುಕು ಬಿಟ್ಟ ಕಾಂಕ್ರೀಟ್‌ ಹಲಗೆ ಬದಲಾಯಿಸಿ ಹೊಸ ಹಲಗೆ ಅಳವಡಿಸಬೇಕಾಗಿದೆ. ನಾಲ್ಕು ವರ್ಷಗಳ ಹಿಂದೆ ತೂಗುಸೇತುವೆಯ ಕೆಲವು ಕಡೆಗಳ ಕಾಂಕ್ರೀಟ್‌ ಹಲಗೆ ಬಿರುಕು ಬಿಟ್ಟಿತ್ತು. ಇದನ್ನು ಕೊಣಾಜೆ ಗ್ರಾಮ ಪಂಚಾಯತ್‌ ವತಿಯಿಂದ ಸರಿಪಡಿಸಲಾಗಿತ್ತು. ಕಳೆದ ವರ್ಷವೂ ಈ ತೂಗುಸೇತುವೆಯ ಹಲಗೆ ಮುರಿದು ಹೋಗಿತ್ತು. ಈ ವೇಳೆ ಯಾವುದೇ ಇಲಾಖೆಯಿಂದ ಸ್ಪಂದನೆ ಸಿಗದೆ ಇದ್ದಾಗ ಊರಿನವರೇ ಸೇರಿಕೊಂಡು ಧನ ಸಂಗ್ರಹಿಸಿ ಹಲಗೆ ಅಳವಡಿಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಗೃಹ ಸಚಿವರು ಹೆಣ್ಣುಮಕ್ಕಳು ಸುರಕ್ಷಿತವಾಗಿ ಓಡಾಡಬಹುದಾದ ಸಮಯ ತಿಳಿಸಲಿ:ಅಮ್ರಪಾಲಿ ಸುರೇಶ್

ಹೊಳೆಗೆ ಇಳಿದು ಮೀನು ಹಿಡಿಯದಂತೆ ತೂಗುಸೇತುವೆ ಪಕ್ಕದ ಉದನೆ ಭಾಗದಲ್ಲಿ ಹಾಕಲಾಗಿರುವ ಎಚ್ಚರಿಕೆ ಫ‌ಲಕದಲ್ಲಿನ ಅಕ್ಷರಗಳೆಲ್ಲವೂ ಅಳಿಸಿಹೋಗಿದ್ದು ಫ‌ಲಕವೂ ತುಕ್ಕು ಹಿಡಿದಿದೆ. ಇಲ್ಲಿ ಹೊಸತಾಗಿ ಎಚ್ಚರಿಕೆ ಫ‌ಲಕ ಅಳವಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಂತಿಮ ಹಂತದಲ್ಲಿ
ತೂಗುಸೇತುವೆ ಪಕ್ಕದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಸರ್ವ ಋತು ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅದು ಪೂರ್ಣಗೊಂಡು ಸಂಚಾರಕ್ಕೆ ಮುಕ್ತಗೊಂಡಲ್ಲಿ, ಎಲ್ಲ ವಾಹನಗಳು ಇಲ್ಲಿಂದಲೇ ಕಡಬ ಕಡೆಗೆ ಸಂಚರಿಸಬಹುದಾಗಿದೆ.

ಗ್ರಾ.ಪಂ.ಗೆ ತಿಳಿಸಿದ್ದೇವೆ
ಈ ತೂಗುಸೇತುವೆಯಲ್ಲಿ ದಿನಂಪ್ರತಿ ನೂರಾರು ಜನರು ಸೇರಿದಂತೆ ಬೈಕ್‌ ಸವಾರರು ಓಡಾಟ ನಡೆಸುತ್ತಾರೆ. ಲಾಕ್‌ಡೌನ್‌ಗೆ ಮುಂಚೆಯೇ ತೂಗು ಸೇತುವೆಯ ನಾಲ್ಕೈದು ಕಡೆಗಳಲ್ಲಿ ಕಾಂಕ್ರೀಟ್‌ ಹಲಗೆ ಬಿರುಕು ಬಿಟ್ಟಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ ಗಮನಕ್ಕೆ ತಂದಿದ್ದೇವೆ
-ಜಯಂತ ಹೂವಿನಮಜಲು, ಗ್ರಾಮಸ್ಥರು.

ಗಮನಕ್ಕೆ ಬಂದಿದೆ
ಕಾಂಕ್ರೀಟ್‌ ಹಲಗೆ ಬಿರುಕು ಬಿಟ್ಟಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ 10 ಕಾಂಕ್ರೀಟ್‌ ಹಲಗೆಗೆ ಪುತ್ತೂರಿನ ಮಾಸ್ಟರ್‌ ಪ್ಲಾನರಿಯಲ್ಲಿ ಆರ್ಡರ್‌ ಮಾಡಲಾಗಿದೆ. ಶೀಘ್ರ ಅಳವಡಿಸುತ್ತೇವೆ. ಗ್ರಾಮ ಪಂಚಾಯತ್‌ನಲ್ಲಿ ಇದಕ್ಕೆ ಅನುದಾನವಿಲ್ಲ. 15ನೇ ಹಣಕಾಸು ಯೋಜನೆಯಡಿ ಅನುದಾನ ಭರಿಸಲಾಗುವುದು
-ಪದ್ಮನಾಭ ಪಿ., ಪಿಡಿಒ ಗ್ರಾ.ಪಂ. ಕಡ್ಯ ಕೊಣಾಜೆ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.