ಉದಯವಾಣಿ ಚಿತ್ರಕಲಾ ಸ್ಪರ್ಧೆ 2022: ಚಿಣ್ಣರ ಬಣ್ಣದಲ್ಲಿ ಮೇಳೈಸಿದ ವರ್ಣಗಳ ಚಿತ್ತಾರ

ತಾಲೂಕು ಮಟ್ಟದ ವಿಜೇತರಿಗೆ ಪ್ರಶಸ್ತಿ ಪ್ರದಾನ

Team Udayavani, Nov 6, 2022, 6:54 PM IST

ಉದಯವಾಣಿ ಚಿತ್ರಕಲಾ ಸ್ಪರ್ಧೆ 2022: ಚಿಣ್ಣರ ಬಣ್ಣದಲ್ಲಿ ಮೇಳೈಸಿದ ವರ್ಣಗಳ ಚಿತ್ತಾರ

ಮಹಾನಗರ: ಮಂಗಳೂರಿನ ಕೆನರಾ ಹೈಸ್ಕೂಲ್‌ನ ಭುವನೇಂದ್ರ ಸಭಾಭವನಲ್ಲಿ ರವಿವಾರ ನಡೆದ ಉದಯವಾಣಿ ಚಿತ್ರಕಲಾ ಸ್ಪರ್ಧೆ “ಚಿಣ್ಣರ ಬಣ್ಣ’ ವರ್ಣಗಳ ಕೌತುಕವನ್ನು ಅನಾವರಣಗೊಳಿಸಿತು. ಎಳೆಯ ಮನಸ್ಸುಗಳ ಕಲಾ ಪ್ರತಿಭೆ ಹಾಳೆಗಳಲ್ಲಿ ಅರಳಿ ಸೇರಿದವರ ಮನಸೂರೆಗೊಂಡಿತು.

ಉಡುಪಿಯ “ಆರ್ಟಿಸ್ಟ್‌ ಫೋರಂ’ನ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 16 ತಾಲೂಕುಗಳಲ್ಲಿ ನಡೆದಿದ್ದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಅತಿ ಕಿರಿಯ, ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ವಿಜೇತರಾದ 144 ಮಕ್ಕಳು ಉಭಯ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿಣ್ಣರ ಬಣ್ಣಕ್ಕೆ ಮೆರುಗು ತುಂಬಿದರು. ಸುಮಾರು2 ತಾಸುಗಳ ಕಾಲ ನಡೆದ ಸ್ಪರ್ಧೆಯಲ್ಲಿ ಅತಿಕಿರಿಯ ಹಾಗೂ ಕಿರಿಯ ವಿಭಾಗಗಳ ಮಕ್ಕಳು ಅವರ ಕಲ್ಪನೆಯ ವಸ್ತುಗಳಲ್ಲಿ ಚಿತ್ರ ಬಿಡಿಸುವ ಅವಕಾಶ ಪಡೆದರೆ ಹಿರಿಯ ವಿಭಾಗದ ಮಕ್ಕಳಿಗೆ “ಸಂಗೀತ ಕಚೇರಿ’, “ಖೋಖೋ ಪಂದ್ಯ’ ಮತ್ತು “ವೈಜ್ಞಾನಿಕ ಕೃಷಿ ಪದ್ದತಿ’, “ಸಿಡಿಮದ್ದು ಪ್ರದರ್ಶನ’ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಆರಿಸಿಕೊಂಡು ಚಿತ್ರಬಿಡಿಸುವ ಅವಕಾಶವನ್ನು ನೀಡಲಾಗಿತ್ತು.

ಚಿತ್ರಕಲೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಸಿ.ಎಸ್‌.ಭಂಡಾರಿ
ಚಿಣ್ಣರ ಬಣ್ಣ ಸ್ಪರ್ಧೆಯನ್ನು ಬ್ರಿಟಿಷ್‌ ಬಯೋಲಾಜಿಕಲ್‌ ಸಂಸ್ಥೆಯ ಪ್ರಾದೇಶಿಕ ಪ್ರಬಂಧಕ ಸಿ.ಎಸ್‌. ಭಂಡಾರಿಯವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಬೆಳಗ್ಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಕಲಾಸಕ್ತಿಯನ್ನು ಎಳೆಯ ಪ್ರಾಯದಿಂದಲೇ ಮೂಡಿಸುವುದು ಅವರ ಮುಂದಿನ ಭವಿಷ್ಯದಲ್ಲಿ ಬಹಳಷ್ಟು ನೆರವಾಗುತ್ತದೆ. ಅದರಲ್ಲೂ ಚಿತ್ರಕಲೆ ಅಭ್ಯಾಸ ಮುಂದಕ್ಕೆ ವೃತ್ತಿಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದರು.

ಮಕ್ಕಳಲ್ಲಿ ಚಿತ್ರಕಲೆ ಆಸಕ್ತಿಯನ್ನು ಬೆಳೆಸುವಲ್ಲಿ ಮತ್ತು ಅವರ ಪ್ರತಿಭೆಗಳು ಪ್ರಕಾಶಿಸುವಲ್ಲಿ ಉದಯವಾಣಿ ಚಿಣ್ಣರ ಬಣ್ಣ ಉದಾತ್ತ ವೇದಿಕೆಯಾಗಿದೆ.ಈ ಸ್ಪರ್ಧೆಯನ್ನು ಉದಯವಾಣಿ ಕಳೆದ ಹಲವಾರು ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಅವರು ಅಭಿನಂದಿಸಿದರು.

ಉದಯವಾಣಿ ಉಪಾಧ್ಯಕ್ಷ ರಾಮಚಂದ್ರ ಮಿಜಾರ್‌ ಅವರು ಸ್ವಾಗತಿಸಿ ಉದಯವಾಣಿ ಚಿಣ್ಣರ ಬಣ್ಣರ ಸ್ಪರ್ಧೆ ಉಭಯ ಜಿಲ್ಲೆಗಳಲ್ಲಿ ಮಕ್ಕಳಿಗೆ ಅತ್ಯಂತ ಪ್ರಿಯವಾದ ಸ್ಪರ್ಧೆಯಾಗಿ ಮೂಡಿಬಂದಿದೆ ಎಂದು ವಿವರಿಸಿದರು.

ಉಡುಪಿ ಆರ್ಟಿಸ್ಟ್‌ ಫೋರಂ ಅಧ್ಯಕ್ಷ ರಮೇಶ್‌ ರಾವ್‌, ಹಿರಿಯ ಸದಸ್ಯ ಶಕು ಪಾಂಗಾಳ, ಉದಯವಾಣಿ ಮಂಗಳೂರು ವಲಯ ಪ್ರಬಂಧಕ ಸತೀಶ್‌ ಮಂಜೇಶ್ವರ ಉಪಸ್ಥಿತರಿದ್ದರು.

ತಾಲೂಕುಮಟ್ಟದ ವಿಜೇತರಿಗೆ ಪ್ರಶಸ್ತಿ ಪ್ರದಾನ
ಉಭಯ ಜಿಲ್ಲಾಮಟ್ಟದ ಸ್ಪರ್ಧೆಗೆ ಮುಂಚಿತವಾಗಿ ತಾಲೂಕುಮಟ್ಟದಲ್ಲಿ ಸಬ್‌ಜೂನಿಯರ್‌, ಜೂನಿಯರ್‌ ಹಾಗೂ ಸೀನಿಯರ್‌ ವಿಭಾಗಗಳಲ್ಲಿ ನಡೆದಿದ್ದ ಸ್ಪರ್ಧೆಗಳಲ್ಲಿ ಪ್ರಥಮ,ದ್ವಿತೀಯ ಹಾಗೂ ತೃತೀಯ ವಿಭಾಗಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಒಟ್ಟು 144 ವಿಜೇತ ವಿದ್ಯಾರ್ಥಿಗಳಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉದಯವಾಣಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ಗೌರವ ಕಾರ್ಯದರ್ಶಿ ರಂಗನಾಥ ಭಟ್‌, ಮೊಡರ್ನ್ಕಿಚನ್‌ ಸಂಸ್ಥೆಯ ಮಹಾಪ್ರಬಂಧಕ ಸುಧೀಂದ್ರ ಕಾಮತ್‌, ಹ್ಯಾಂಗೋ ಸಂಸ್ಥೆಯ ಮೆನೇಜರ್‌ (ಅಪರೇಶನ್‌) ರಾಕೇಶ್‌ ಕಾಮತ್‌ ಹಾಗೂ ಆರ್ಟಿಸ್ಟ್‌ ಫೋರಂ ಉಡುಪಿ ಅಧ್ಯಕ್ಷ ರಮೇಶ್‌ ರಾವ್‌ ಅವರು ಬಹುಮಾನ ನೀಡಿ ಅಭಿನಂದಿಸಿದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.