ಉಡುಪಿ: ನಗರಕ್ಕೆ 1 ತಿಂಗಳು ನೀರು ಒದಗಿಸುವ ಸವಾಲು!

ಸ್ವರ್ಣಾ ನದಿಯ ಸೂಕ್ತ ನಿರ್ವಹಣೆ ಕೊರತೆ

Team Udayavani, Apr 25, 2019, 6:00 AM IST

230419ASTRO14

ಸ್ವರ್ಣಾ ನದಿಯಲ್ಲಿ ಹೂಳು ತುಂಬಿರುವುದು.(ಚಿತ್ರ: ಆಸ್ಟ್ರೋ ಮೋಹನ್‌)

ಉಡುಪಿ: ನಗರದಲ್ಲಿ ನೀರಿನ ಬವಣೆ ಮತ್ತೆ ಆರಂಭವಾಗಿದ್ದು, ಸ್ವರ್ಣಾ ನದಿಯ ಬಜೆ ಅಣೆಕಟ್ಟಿನಲ್ಲಿ ಹತ್ತರಿಂದ ಹದಿನೈದು ದಿನಗಳಿಗಾಗುವಷ್ಟೇ ನೀರಿನ ಸಂಗ್ರಹವಿದೆ.

ಈಗಾಗಲೇ ನಗರಸಭೆ ಮೂರು ದಿನಕ್ಕೊಮ್ಮೆ ನೀರು ಪೂರೈಸುತ್ತಿದೆ. ಸದ್ಯಕ್ಕೆ ಅಣೆಕಟ್ಟಿನ ಅಚ್ಚುಕಟ್ಟುಪ್ರದೇಶದಲ್ಲಿ ಮಳೆ ಬೀಳದಿದ್ದರೆ ಮೇ ತಿಂಗಳಿಗೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.

ಬಜೆಯಲ್ಲಿ ನೀರು ತಳ ಸೇರಿದ್ದು,ಸುಮಾರು 4 ಮೀ. 90 ಸೆಂ.ಮೀ.ಹೂಳು ತುಂಬಿದೆ. ಇದರ ಮೇಲೆ ಅಪಾರ ಪ್ರಮಾಣದಲ್ಲಿ ಗಿಡಗಂಟಿಗಳೂ ಬೆಳೆದಿವೆ. ಅಲ್ಲಲ್ಲಿ ನೀರಿದ್ದರೂ ಪಂಪಿಂಗ್‌ ಮಾಡಲು ಸಾಧ್ಯವಾಗುತ್ತಿಲ್ಲ. ಹೂಳು ತೆಗೆಯಲು ಸೂಕ್ತ ಕ್ರಮ ತೆಗೆದುಕೊಂಡರೆ ಸಮಸ್ಯೆಗೆ ಒಂದಿಷ್ಟು ಪರಿಹಾರ ಸಿಗುವ ಸಾಧ್ಯತೆ ಇದೆ.

ಹಿನ್ನೀರು ಪ್ರದೇಶದಲ್ಲಿ ದೊಡ್ಡ ಬಂಡೆಗಳಿರು ವುದು ನೀರು ಸಂಗ್ರಹಕ್ಕೆ ಅಡ್ಡಿಯಾಗಿದೆ. ಜತೆಗೆ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ದಿನವೊಂದಕ್ಕೆ 5ಸೆಂ.ಮೀ.ನಷ್ಟು ನೀರಿನ ಪ್ರಮಾಣ ಕಡಿಮೆಯಾ ಗುತ್ತಿದೆ. ನಗರಕ್ಕೆ ಪ್ರತೀದಿನ 24 ಎಂಎಲ್‌ಡಿ ನೀರಿನ ಅಗತ್ಯವಿದೆ. ಪ್ರಸ್ತುತ ಇಷ್ಟೊಂದು ಪ್ರಮಾಣದ ನೀರನ್ನು ಪೂರೈಸುವುದೇ ಸವಾಲಾಗಿದೆ.

ಎತ್ತರದ ಪ್ರದೇಶಗಳಲ್ಲಿ ನೀರಿಲ್ಲ
ನಗರದ ಎತ್ತರ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ. ನೀರಿನ ಸಮಸ್ಯೆ ನಿರ್ವಹಣೆಗೆ ನಗರಸಭೆ ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ ಅಲ್ಲಲ್ಲಿ ಸಮಸ್ಯೆ ಉಲ್ಬಣವಾಗುತ್ತಿದೆ. ಬಜೆ ಅಣೆಕಟ್ಟಿನಲ್ಲಿ ಎರಡು ಮೀ. ವರೆಗೆ ಸಂಗ್ರಹವಿದ್ದರೆ ನೀರು ಎತ್ತಬಹುದು. ಎ. 23ರಂದು ನೀರಿನ ಮಟ್ಟ 2.52 ಮೀ.ನಷ್ಟಿದ್ದು, ಅದಕ್ಕಿಂತ ಕೆಳಗಿಳಿದರೆ ಏನು ಮಾಡುವುದು ಎಂಬ ಚಿಂತೆ ನಗರಸಭೆಯದ್ದು.

ಅನ್ಯ ಸಾಧ್ಯತೆಗಳೇನು?
ಹೂಳೆತ್ತಲು ಮರಳುಗಾರಿಕೆ ನಿಯಮ ಅಡ್ಡಿ ಯಾಗಿದೆ. ಹೂಳೆತ್ತಲು ಅನುಮತಿ ನೀಡಿದರೆ ಅನುಕೂಲವಾಗಬಹುದು. ಜಿಲ್ಲಾಧಿಕಾರಿ, ಸಚಿವ,ಶಾಸಕರು ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳಬೇಕಿದೆ.

ನಗರದಲ್ಲಿ 35 ಸಾವಿರ ನೀರು ನಳ್ಳಿ ಸಂಪರ್ಕ ಇದ್ದರೂ 1970ರ ದಶಕದ ನೀರಿನ ವ್ಯವಸ್ಥೆ ಯನ್ನು ಅವಲಂಬಿಸಲಾಗಿದೆ. ಬಜೆ 2ನೇ ಹಂತದ ಅಣೆಕಟ್ಟು ಹೂಳು ತುಂಬಿ ನಿಷ್ಪ್ರಯೋಜಕವಾಗಿದೆ.

ಕಳೆದ ವರ್ಷವೂ ಇತ್ತು ಸಮಸ್ಯೆ
2018ರಲ್ಲೂ ನೀರಿನ ಸಮಸ್ಯೆ ಭೀತಿ ಎದುರಾ ಗಿತ್ತು. ಆದರೆ ಅಷ್ಟರಲ್ಲಿ ಮಳೆಯಾಗಿದ್ದರಿಂದ ಸಮಸ್ಯೆಯಾಗಲಿಲ್ಲ. ಈ ಬಾರಿಯೂ ಜನರು ಮಳೆ ಬೇಗ ನಿರೀಕ್ಷಿಸಿದ್ದಾರೆ. ಮುಖ್ಯವಾಗಿ ಕಾರ್ಕಳ ಪಶ್ಚಿಮ ಘಟ್ಟ ಪ್ರದೇಶದ ಮುಂಡ್ಲಿ ಆಸುಪಾಸಿನಲ್ಲಿ ಮಳೆ ಸುರಿದರೆ ಮಾತ್ರ ಅನುಕೂಲವಾಗಲಿದೆ.

ಚುನಾವಣೆ ಸಂದರ್ಭ
ನಿರಂತರ ಸರಬರಾಜು!
ಚುನಾವಣೆ ಸಮಯದಲ್ಲಿ ನಿರಂತರ ನೀರು ಸರಬರಾಜಾಗುತ್ತಿತ್ತು. ಎ. 18ರ ಅನಂತರ ಪುನಃ 3 ದಿನಕ್ಕೊಮ್ಮೆ ನೀರು ಬರುತ್ತಿದೆ. ನೀರಿನ ಬವಣೆ ಎತ್ತರ ಪ್ರದೇಶ ಸಹಿತ ತಗ್ಗು ಪ್ರದೇಶಗಳಿಗೂ ವ್ಯಾಪಿಸಿದೆ ಎಂಬುದು ಸಾರ್ವಜನಿಕರ ದೂರು.

ಶೀಘ್ರದಲ್ಲೇ ಕ್ರಮ
ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದೆ. ಸಹಾಯವಾಣಿ ಸಹಿತ ಪರ್ಯಾಯ ಕ್ರಮಗಳ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು.
– ಆನಂದ ಕಲ್ಲೋಳಿಕರ್‌, ಪೌರಾಯುಕ್ತರು, ನಗರಸಭೆ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.