ಉಜಿರಂಡಿಪಲ್ಕೆ : ಪಾಳು ಬಿದ್ದಿದೆ ಹಾಸ್ಟೆಲ್‌

ಇತರ ಇಲಾಖೆಗೆ ನೀಡಲು ಹಿಂದುಳಿದ ವರ್ಗಗಳ ಇಲಾಖೆ ಸಿದ್ಧ

Team Udayavani, Mar 19, 2022, 5:31 PM IST

school

ಬಂಟ್ವಾಳ: ಮಣಿ ನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದ ಬಾಲಕರ ವಸತಿ ನಿಲಯ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುವ ಪರಿಣಾಮ ಕಟ್ಟಡ ಪಾಳು ಬಿದ್ದಿದ್ದು, ಅದನ್ನು ಉಳಿಸುವ ದೃಷ್ಟಿಯಿಂದ ಯಾವುದೇ ಸರಕಾರಿ ಇಲಾಖೆಯು ಬಳಸುವುದಾದರೆ ಇಲಾಖೆ ನೀಡುವುದಕ್ಕೆ ಸಿದ್ಧವಿದೆ.

28 ವರ್ಷಗಳ ಇತಿಹಾಸ ಹೊಂದಿರುವ ಈ ಹಾಸ್ಟೆಲ್‌ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟು ಪಾಳು ಬಿದ್ದ ಸ್ಥಿತಿಯಲ್ಲಿದೆ. ಹೀಗೆ ಖಾಲಿ ಇರುವ ಹಾಸ್ಟೆಲ್‌ ಕಟ್ಟಡವನ್ನು ಬಳಸುವ ದೃಷ್ಟಿಯಿಂದ ಕಿಯೋನಿಕ್ಸ್‌ ಸಂಸ್ಥೆ ಹಿಂದುಳಿದ ವರ್ಗಗಳ ಇಲಾಖೆಯ ಬಳಿ ಕೇಳಿದರೂ, ಅದು ಪ್ರಗತಿ ಕಾಣದೆ ಹಾಗೇ ಉಳಿದುಕೊಂಡಿದೆ. ಹೀಗೆ ಪಾಳುಬಿದ್ದ ಕಟ್ಟಡವು ಶಿಥಿಲಾವಸ್ಥೆಗೆ ತಲುಪುತ್ತಿದ್ದು, ಹಿಂದೆ ಅಲ್ಲಿನ ಸೊತ್ತುಗಳನ್ನು ಕಳವು ಮಾಡಿದ ಘಟನೆಯೂ ನಡೆದಿತ್ತು. ಮುಂದೆಯೂ ಇದೇ ಸ್ಥಿತಿಯಲ್ಲಿದ್ದರೆ ಕಟ್ಟಡ ಪರರ ಪಾಲಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಇಲಾಖೆ ನಿರ್ಧರಿಸಿದಂತೆ ಇತರ ಇಲಾಖೆಗಾದರೂ ಅಗತ್ಯ ಕಾರ್ಯಾಚರಣೆ ನೀಡಬೇಕಿದೆ.

ಬಂಟ್ವಾಳದ ಹಾಸ್ಟೆಲ್‌ ಕಾರ್ಯಾಚರಣೆ ಹಲವು ವರ್ಷಗಳಿಂದ ಅದು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್‌ ಆಗಿತ್ತು. ಅಲ್ಲಿನ ವಿದ್ಯಾರ್ಥಿಗಳು ಪಕ್ಕದಲ್ಲೇ ಇರುವ ಮಣಿ ನಾಲ್ಕೂರು ಸ.ಪ್ರೌಢಶಾಲೆಗೆ ತೆರಳುತ್ತಿದ್ದರು. ಮುಂದೆ ಹಲವೆಡೆ ಹೊಸ ಪ್ರೌಢಶಾಲೆಗಳು ಮಂಜೂರಾದ ಪರಿಣಾಮ ಈ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕುಸಿದು ಹಾಸ್ಟೆಲನ್ನು ಅನಿವಾರ್ಯವಾಗಿ ಮುಚ್ಚಬೇಕಾದ ಸ್ಥಿತಿ ಉಂಟಾಗಿತ್ತು. 5 ವರ್ಷಗಳ ಹಿಂದೆ ಬಂಟ್ವಾಳಕ್ಕೆ ಮಂಜೂರಾದ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯವನ್ನು ನಡೆಸುವುದಕ್ಕೆ ಕಟ್ಟಡ ಸಿಗದ ಹಿನ್ನೆಲೆಯಲ್ಲಿ ಅದನ್ನು ಉಜಿರಂಡಿಪಲ್ಕೆಯ ಈ ಹಾಸ್ಟೆಲ್‌ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಆದರೆ ಇಲ್ಲಿಂದ ವಿದ್ಯಾರ್ಥಿಗಳು ಸುಮಾರು 20 ಕಿ.ಮೀ. ದೂರದಲ್ಲಿರುವ ಬಂಟ್ವಾಳ ಸ. ಪಾಲಿಟೆಕ್ನಿಕ್‌ಗೆ ಆಗಮಿಸಬೇಕಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ ಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಕಾರಣದಿಂದ ಕೆಲವು ವರ್ಷಗಳ ಹಿಂದೆ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ತಲಪಾಡಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

ತಹಶೀಲ್ದಾರ್‌ ಗೆ ಮಾಹಿತಿ

ಕಿಯೋನಿಕ್ಸ್‌ ಸಂಸ್ಥೆ ಕಾಲೇಜಿಗೆ ಕಂಪ್ಯೂಟರ್‌ ಕೇಂದ್ರ ನಡೆಸಲು ಕಟ್ಟಡ ಕೇಳಿದ್ದು, ಅನುಮತಿ ಕೊಡಿಸುವ ಭರವಸೆ ನೀಡಿದರೂ ಬಳಿಕ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆ ಕಟ್ಟಡವು ಹಾಳಾಗುತ್ತಿರುವುದು ಬೇಸರದ ಸಂಗತಿ. ಇತರ ಸರಕಾರಿ ಇಲಾಖೆಗೆ ಅಗತ್ಯ ಇರುವುದಾದರೆ ನಮ್ಮ ಇಲಾಖೆ ನೀಡುವುದಕ್ಕೆ ಸಿದ್ಧವಿದೆ. ಈ ಕುರಿತು ತಹಶೀಲ್ದಾರ್‌ ಅವರಲ್ಲಿ ಕೂಡ ತಿಳಿಸಲಾಗಿದೆ. –ಬಿಂದಿಯಾ ನಾಯಕ್‌, ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಟ್ವಾಳ

ಒ ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.