ಉಜಿರೆ: ರಸ್ತೆಗೆ ಉರುಳಿದ ಮರ
Team Udayavani, Sep 9, 2019, 5:39 AM IST
ಬೆಳ್ತಂಗಡಿ : ಉಜಿರೆ- ಚಾರ್ಮಾಡಿ ರಸ್ತೆಯ ಉಜಿರೆ ಪೆಟ್ರೋಲ್ ಬಂಕ್ ಸಮೀಪ ಬೃಹದಾಕಾರದ ಮರವೊಂದು ರವಿವಾರ ರಸ್ತೆಗೆ ಉರುಳಿ ಬಿದ್ದು ಕೆಲವು ಕಾಲ ರಸ್ತೆ ತಡೆ ಉಂಟಾಯಿತು.
ರವಿವಾರ ರಜೆಯಾದ್ದರಿಂದ ವಾಹನ ಓಡಾಟ ವಿರಳವಾಗಿತ್ತು. ಇದರಿಂದ ಸಂಭವಿಸಬಹುದಾಗಿದ್ದ ಅಪಾಯ ತಪ್ಪಿದೆ. ಸಂಚಾರಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬಂದಿ, ಸ್ಥಳೀಯರು ಮರ ತೆರವುಗೊಳಿಸಲು ಸಹಕರಿಸಿದರು.
ರಸ್ತೆ ಅಂಚಿನ ಅಪಾಯಕಾರಿ ಮರ ಕೊಂಬೆ ಕಟಾವು ಮಾಡುವ ಕುರಿತು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತಂತೆ ಕಾಣುತ್ತಿಲ್ಲ. ಕಳೆದ ಎರಡು ದಿನಗಳ ಹಿಂದೆ ಆ್ಯಂಬುಲೆನ್ಸ್ ಅಪಾಯದಲ್ಲಿ ಸಿಲುಕಿತ್ತು. ಇನ್ನಾದರೂ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಂಭವಿಸಬಹುದಾದ ಜೀವ ಹಾನಿ ತಪ್ಪಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!