ಉಜಿರೆ ಗಾಂಧಿನಗರ: ಕಸ ಎಸೆದು ಸೌಂದರ್ಯಕ್ಕೆ ಧಕ್ಕೆ
Team Udayavani, Apr 4, 2022, 9:36 AM IST
ಬೆಳ್ತಂಗಡಿ: ಉಜಿರೆ ಗ್ರಾ.ಪಂ. ತನ್ನ ನಗರದ ಎಲ್ಲ ಪ್ರದೇಶಗಳಿಗೆ ಸ್ವತ್ಛತ ವಾಹನ ಕಳುಹಿಸಿ ತ್ಯಾಜ್ಯಗಳನ್ನು ಸಂಗ್ರಹಿಸಿ, ವಿಂಗಡಿಸಿ ಆದಾಯ ಸಂಪನ್ಮೂಲವಾಗಿ ಪರಿವರ್ತಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆದರೆ ಇನ್ನೂ ನಗರದ ಕೆಲವು ಭಾಗಗಳಲ್ಲಿ ಸ್ಥಳೀಯರು ತಮ್ಮ ಮನೆಗಳ ಕಸ-ತ್ಯಾಜ್ಯಗಳನ್ನು ರಸ್ತೆ ಬದಿಗಳಲ್ಲಿ,ಚರಂಡಿ-ಮೋರಿಗಳಲ್ಲಿ ಎಸೆಯುವ ಮೂಲಕ ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಪ್ರದೇಶದ ಮೋರಿಯ ಇಕ್ಕೆಡೆಗಳಲ್ಲಿ ತ್ಯಾಜ್ಯಗಳ ರಾಶಿಯೇ ಕಂಡುಬರುತ್ತಿದೆ. ಬಟ್ಟೆ ಬರೆಗಳ ಮೂಟೆಗಳು, ಹೊಟೇಲಿನ ತ್ಯಾಜ್ಯಗಳು, ಪದಾರ್ಥಗಳನ್ನು ತಂದು ಸುರಿಯುತ್ತಿರುವುದರಿಂದ ಪರಿಸರ ದುರ್ನಾತದಿಂದ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗರಿಕರು ಹಾಗೂ ಹೊರಗಿನವರು ಇಲ್ಲಿ ತ್ಯಾಜ್ಯಗಳನ್ನು ಸುರಿಯುತ್ತಿರುವುದರಿಂದ ದಿನದಿನಕ್ಕೆ ಕಸದ ರಾಶಿ ಬೆಳೆಯುತ್ತಿದೆ.
ಕಸ ಎಸೆಯುವವರ ಮೇಲೆ ಗ್ರಾ.ಪಂ. ದಂಡ ವಿಧಿಸಿ ಎಚ್ಚರಿಕೆಯ ಜಾಗೃತಿ ಮೂಡಿಸಿದರೆ ಎಲ್ಲೆಂದರಲ್ಲಿ ಕಸ ಎಸೆಯುವುದು ನಿಲ್ಲಬಹುದು. ಸ್ವತ್ಛ ಉಜಿರೆ ಗ್ರಾ.ಪಂ. ಕಾರ್ಯದೊಂದಿಗೆ ನಾಗರಿಕರೂ ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.
ಕಸ-ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಈಗಾಗಲೇ ಉಜಿರೆ ಗ್ರಾ.ಪಂ. ಪತ್ತೆ ಹಚ್ಚಿ ಅವರಿಂದಲೇ ಕಸ ತೆಗೆಸಿ ಸ್ವತ್ಛಗೊಳಿಸಿದ ಮತ್ತು ಅಂಥವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ ನಿದರ್ಶನಗಳಿದ್ದರೂ ಸಾರ್ವಜನಿಕರು ಇನ್ನೂ ತ್ಯಾಜ್ಯಗಳನ್ನು ರಸ್ತೆ ಬದಿ ಹಾಗೂ ಮೋರಿ-ತೋಡುಗಳಿಗೆಸೆದು ತಮ್ಮ ಅನಾಗರಿಕತೆಯನ್ನು ಬಿಂಬಿಸುತ್ತಿದ್ದಾರೆ.
ಅದನ್ನು ಪತ್ತೆಹಚ್ಚಿ ಗ್ರಾ.ಪಂ. ಅವರ ಮೇಲೆ ಹೆಚ್ಚಿನ ದಂಡ ವಿಧಿಸಿ ಎಚ್ಚರಿಕೆ ನೀಡಬೇಕಾಗಿದೆ ಎಂದು ಸಾರ್ವಜನಿಕರು, ವರ್ತಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ