Ullal; ಜೂಜಾಟಗಾರರ ಜತೆ ಶಾಮೀಲು ಆರೋಪ:ಕಾನ್ಸ್ ಟೇಬಲ್ ಅಮಾನತು
Team Udayavani, May 22, 2023, 10:21 PM IST
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ