ನೂತನ ತಾಲೂಕು ಆಗಿ ಉಳ್ಳಾಲ
Team Udayavani, Mar 1, 2019, 1:00 AM IST
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಲ್ಕಿ ನೂತನ ತಾಲೂಕು ಘೋಷಣೆಯಾಗಿದ್ದು ಇದೀಗ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನು ಒಳಗೊಂಡಿರುವ ಮಂಗಳೂರು ತಾಲೂಕಿನ ಉಳ್ಳಾಲ ಹೋಬಳಿ ಮತ್ತು ಬಂಟ್ವಾಳ ತಾಲೂಕಿನ ಮುಡಿಪು ಹೋಬಳಿ ಒಟ್ಟು ಸೇರಿ ಉಳ್ಳಾಲ ತಾಲೂಕು ಆಗಿ ಘೋಷಣೆಯಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪ್ರತಿನಿಧಿಸುವ ಮಂಗಳೂರು ವಿಧಾನ ಸಭಾ ಕ್ಷೇತ್ರದ ನಾಲ್ಕು ಗ್ರಾಮಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಗ್ರಾಮಗಳು ನೂತನ ತಾಲೂಕಿನ ವ್ಯಾಪ್ತಿಗೆ ಬರಲಿದ್ದು, ಮಂಗಳೂರಿಗೆ ಪರ್ಯಾಯ ನಗರವಾಗಿ ಬೆಳೆಯುತ್ತಿರುವ ಉಳ್ಳಾಲ ಇನ್ನಷ್ಟು ಅಭಿವೃದ್ಧಿಯಾಗಲಿದೆ.
ಹೊಸ ತಾಲೂಕಿನ ವ್ಯಾಪ್ತಿ
ಉಳ್ಳಾಲ ತಾಲೂಕಿನಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸೇರುವ ಉಳ್ಳಾಲ ನಗರಸಭೆ, ಕೋಟೆಕಾರು ಪಟ್ಟಣ ಪಂಚಾಯತ್, ತಲಪಾಡಿ, ಸೋಮೇಶ್ವರ, ಕಿನ್ಯ, ಬೆಳ್ಮ, ಮುನ್ನೂರು, ಅಂಬ್ಲಿಮೊಗರು, ಹರೇಕಳ, ಪಾವೂರು, ಮಂಜನಾಡಿ, ಕೊಣಾಜೆ, ಬೋಳಿಯಾರು ಗ್ರಾಮಗಳು ಮತ್ತು ಬಂಟ್ವಾ ತಾಲೂಕಿನ ಮುಡಿಪು ಹೋಬಳಿಗೆ ಸೇರಿದ ನರಿಂಗಾನ, ಬಾಳೆಪುಣಿ- ಕೈರಂಗಳ, ಕುರ್ನಾಡು, ಸಜಿಪ ಪಡು, ಸಜಿಪ ನಡು, ಇರಾ, ಪಜೀರು ಗ್ರಾಮಗಳು ಸೇರ್ಪಡೆಯಾಗಲಿದ್ದು, ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ರಾಷ್ಟಿÅàಯ ಹೆದ್ದಾರಿ 75ನ್ನು ಸಂಪರ್ಕಿಸುವ ಮೇರೆಮಜಲು -ಕೊಡಾ¾ಣ್, ಪುದು, ತುಂಬೆ ಗ್ರಾಮಗಳು ಮಾತ್ರ ಬಂಟ್ವಾಳ ತಾಲೂಕಿನಲ್ಲಿ ಉಳಿಯಲಿದ್ದು ಉಳಿದ ಎಲ್ಲ ಗ್ರಾಮಗಳು ಉಳ್ಳಾಲ ತಾಲೂಕಿನ ವ್ಯಾಪ್ತಿಗೆ ಬರಲಿವೆ.
ನೂತನ ತಾಲೂಕು ರಚನೆಯಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯ ಮುಡಿಪು ಹೋಬಳಿಯ ಗ್ರಾಮಗಳ ಜನರಿಗೆ ಸಹಕಾರಿಯಾಗಲಿದ್ದು, ಮುಖ್ಯವಾಗಿ ಉಳ್ಳಾಲದಲ್ಲಿ ಸರಕಾರಿ ಜಾಗದ ಕೊರತೆಯಿಂದ ನಾಟೆಕಲ್ಲು, ದೇರಳಕಟ್ಟೆ ವ್ಯಾಪ್ತಿಯಲ್ಲಿ ಮಂಗಳೂರು ತಾಲೂಕಿನ ಕೇಂದ್ರ ಸ್ಥಾನ ಬರಲಿದೆ. ಹೊಸ ತಾಲೂಕು ರಚನೆಯಿಂದ ಹಲವು ವರ್ಷಗಳ ಬೇಡಿಕೆಯಾಗಿರುವ ಆಟದ ಮೈದಾನ, ಅಗ್ನಿಶಾಮಕ ಠಾಣೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್