ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ: ಖಾದರ್ ಭೇಟಿ
Team Udayavani, Jul 29, 2019, 5:16 AM IST
ಉಳ್ಳಾಲ: ಗ್ರಾಮಮಟ್ಟದಲ್ಲಿ ವಿಶೇಷ ಅನುಮತಿಯಿಂದ ನಗರದಿಂದ ಕೇವಲ ಆರು ಕಿ.ಮೀ. ದೂರದ ಉಳ್ಳಾಲದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಗೊಂಡಿರುವ ಉಳ್ಳಾಲ ನಗರ ಸಮುದಾಯ ಆರೋಗ್ಯಕೇಂದ್ರ ಜನರ ಸೇವೆಗೆ ಸಿದ್ಧಗೊಂಡಿದ್ದು ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ನೂತನವಾಗಿ ನಿರ್ಮಾಣಗೊಂಡಿ ರುವ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಸವಲತ್ತು, ಉಪಕರಣಗಳನ್ನು ವೀಕ್ಷಿಸಿ ಬಳಿಕ ಅವರು ಮಾತನಾಡಿದರು.
ಸುಸಜ್ಜಿತ ವ್ಯವಸ್ಥೆ
ಹಿಂದೆ ಉಳ್ಳಾಲ ಗ್ರಾಮವಾಗಿದ್ದ ಸಂದರ್ಭ ವಿಶೇಷ ಅನುಮತಿ ಪಡೆಯಲಾಗಿತ್ತು. ಈಗ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿ ಶವಾಗಾರ, ಪೋಸ್ಟ್ ಮಾರ್ಟಂ ವ್ಯವಸ್ಥೆ, ವೈದ್ಯರ ಕ್ವಾಟ್ರರ್ಸ್, ಅತ್ಯಾಧುನಿಕ ಉಪಕರಣಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಿಬಂದಿ, ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದಾಗಿ ಉದ್ಘಾಟನೆ ವಿಳಂಬವಾಗಿದೆ. ಸದ್ಯ ಕಿರು ಆಸ್ಪತ್ರೆಯಲ್ಲಿರುವ ಎಲ್ಲ ರೀತಿಯ ಉಪಕರಣಗಳು ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ , ಈಶ್ವರ್ ಉಳ್ಳಾಲ್, ನಗರಸಭೆ ಮಾಜಿ ಅಧ್ಯಕ್ಷ ಹುಸೈನ್ ಕುಂಞಿಮೋನು, ಉಳ್ಳಾಲ ನಗರಸಭೆ ಸದಸ್ಯರು, ಮಾಜಿ ಸದಸ್ಯರು, ಉಳ್ಳಾಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ