Ullal: ಕಡಲ್ಕೊರೆತ; ಅಪಾಯದಲ್ಲಿ ಮನೆಗಳು
Team Udayavani, Sep 30, 2023, 12:26 AM IST
ಉಳ್ಳಾಲ: ಸೋಮೇಶ್ವರ ಉಚ್ಚಿಲದ ಎಂಡ್ ಪಾಯಿಂಟ್ನಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಒಂದು ಮನೆ ಕುಸಿಯುವ ಭೀತಿಯಲ್ಲಿದ್ದು ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿದೆ.
ತಲಪಾಡಿ ಮತ್ತು ಉಚ್ಚಿಲ ಎಂಡ್ ಪಾಯಿಂಟ್ ಸಂಪರ್ಕಿಸುವ ಅಳಿವೆ ಬಾಗಿಲಿನಲ್ಲಿ ಕಳೆದ ಕೆಲವು ದಿನಗಳಿಂದ ಕಡಲ್ಕೊರೆತ ಹೆಚ್ಚಾಗಿದೆ. ತಲಪಾಡಿಯ ನದಿ ಬದಿಯಲ್ಲಿಯೂ ಕೊರೆತದಿಂದ ತಲಪಾಡಿ ವ್ಯಾಪ್ತಿಯ ಮನೆಗಳೂ ಅಪಾಯದಲ್ಲಿವೆ. ಇಲ್ಲಿನ ದಯಾವತಿ ಅವರ ಮನೆ ಕುಸಿಯುವ ಭೀತಿಯಲ್ಲಿದ್ದು, ಈ ಪ್ರದೇಶದಲ್ಲಿ ಈವರೆಗೂ ಯಾವುದೇ ತಾತ್ಕಾಲಿಕ ಕಾಮಗಾರಿ ನಡೆದಿಲ್ಲ. ಕಳೆದ ಎರಡು ವರ್ಷಗಳಿಂದ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಸಂಭವಿಸಿದ ಕಡಲ್ಕೊರೆತಕ್ಕೆ ರಸ್ತೆ ಸಂಪೂರ್ಣ ಸಮುದ್ರ ಪಾಲಾಗಿತ್ತು. ಇದೀಗ ಎಂಡ್ ಪಾಯಿಂಟ್ ಕಡೆಯೂ ರಸ್ತೆ ಕಡಲ್ಕೊರೆತದಿಂದ ಹಾನಿಯಾಗಿದ್ದು, ಇಲ್ಲಿರುವ ಮನೆಯೂ ಅಪಾಯದಲ್ಲಿದೆ.
ಎಂಡ್ ಪಾಯಿಂಟ್ನಲ್ಲಿ ಒಂದು ಭಾಗದಲ್ಲಿ ಸಮುದ್ರದ ಕೊರೆತ ಇದ್ದರೆ ಇನ್ನೊಂದು ಬದಿಯ ನದಿಯನ್ನು ಸಮುದ್ರ ಕಬಳಿಸುತ್ತಿದ್ದು, ಮನೆಗಳು ಅಪಾಯದಲ್ಲಿವೆ. ನದಿಯಾಚೆ ತಲಪಾಡಿ ಪ್ರದೇಶದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು, ಜನರು ಆತಂಕದಲ್ಲಿದ್ದಾರೆ.
ಸ್ಥಳೀಯರಿಂದ ಶ್ರಮದಾನ
ಕಡಲ್ಕೊರೆತಕ್ಕೆ ಜಿಲ್ಲಾಡಳಿತ ಸ್ಪಂದಿಸದ ಹಿನ್ನೆಲೆಯಲ್ಲಿ ಸ್ಥಳೀಯರು ಸಮುದ್ರ ಕೊರೆತ ಹೆಚ್ಚಾಗದಂತೆ ಜೆಸಿಬಿ ಮೂಲಕ ತಡೆ ಕಾರ್ಯ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಥಳೀಯರು ಶ್ರಮದಾನದ ಮೂಲಕ ಮರಳು ಚೀಲ ಪೇರಿಸುವ ಕಾರ್ಯ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್