ಉಳ್ಳಾಲ ಶ್ರೀನಿವಾಸ ಮಲ್ಯ ಅಂಚೆ ಲಕೋಟೆ ಬಿಡುಗಡೆ 


Team Udayavani, Jan 25, 2018, 12:27 PM IST

25-Jan-6.jpg

ಸುರತ್ಕಲ್‌ : ದಿವಂಗತ ಉಳ್ಳಾಲ ಶ್ರೀನಿವಾಸ ಮಲ್ಯ ಅವರ 115ನೇ ಜನ್ಮ ದಿನದ ನೆನಪಿಗಾಗಿ ಮಂಗಳೂರಿನ ಕಸ್ತೂರಿ ಬಾಲಕೃಷ್ಣ ಪೈ, ಗೋಪಾಲಕೃಷ್ಣ ಪ್ರಭು ಹಾಗೂ ಗುರುಚರಣ್‌ ಮಲ್ಯ ಅವರ ಸಾರಥ್ಯದಲ್ಲಿ ಅಂಚೆ ಇಲಾಖೆ ಸಹಕಾರದಲ್ಲಿ ಹೊರತಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಸುರತ್ಕಲ್‌ನ ಎನ್‌ ಐಟಿಕೆ ಸಭಾಂಗಣದಲ್ಲಿ ಜರಗಿತು.

ದಕ್ಷಿಣ ಕರ್ನಾಟಕ ವಿಭಾಗ ಪೋಸ್ಟ್‌ ಮಾಸ್ಟರ್‌ ಜನರಲ್‌ ಎಸ್‌. ರಾಜೇಂದ್ರ ಕುಮಾರ್‌ ಬಿಡುಗಡೆಗೊಳಿಸಿದರು. ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿಗೆ ನಿಸ್ವಾರ್ಥಿಯಾಗಿ ಶ್ರಮಿಸಿ ಮೇಲ್ಪಂಕ್ತಿ ಹಾಕಿಕೊಟ್ಟ ದಿ. ಮಲ್ಯರ ಗೌರವಾರ್ಥ ಅಂಚೆ ಲಕೋಟೆಯನ್ನು ಹೊರತಂದಿರುವುದು ಶ್ಲಾಘನೀಯ. ಅವರ ಅಂಚೆ ಚೀಟಿ ದೇಶಾದ್ಯಂತ ಮೌಲ್ಯವ ರ್ಧಿತವಾಗುವಂತೆ ನಾವೆಲ್ಲ ಶ್ರಮ ಪಡಬೇಕಾಗಿದೆ ಇದಕ್ಕೆ ಅಂಚೆ ಇಲಾಖೆಯೂ ಸಹಕಾರ ನೀಡಲಿದೆ ಎಂದರು. ಈಗಾಗಲೇ ಅವಿಭಜಿತ ಜಿಲ್ಲೆಗೆ ಸಂಬಂಧಪಟ್ಟಂತೆ ಟಿ.ಎಂ.ಎ. ಪೈ, ಡಾ| ಶಿವರಾಮ ಕಾರಂತ, ರಮಾಬಾಯಿ, ಸೈಂಟ್‌ ಅಲೋಶಿಯಸ್‌ ಚಾಪೆಲ್‌, ಕವಿ ಮುದ್ದಣ, ಅತ್ತೂರು ಚರ್ಚ್‌ ಹೀಗೆ ಐತಿಹಾಸಿಕ ಸ್ಥಳ ಹಾಗೂ ಸಾಧನೆಗೈದ ಮಹನೀಯರ ಸವಿನೆನಪಿಗಾಗಿ ಅಂಚೆ ಚೀಟಿ ಹೊರತರಲಾಗಿದೆ ಎಂದರು.

ನುಡಿದಂತೆ ನಡೆದರು
ಕೆಎಂಸಿ ಯೂರಾಲಜಿ ವಿಭಾಗದ ಮುಖ್ಯಸ್ಥ ಪ್ರೊ| ಡಾ| ಲಕ್ಷ್ಮಣ ಪ್ರಭು ಅವರು ಮಾತನಾಡಿ, ದಿ| ಮಲ್ಯರು ರಾಜಕಾರಣಿಯಾಗಿ ನುಡಿ ದಂತೆ ನಡೆದು, ಮಾಡಿದ ಸಾಧನೆಯಿಂದ ನಮ್ಮ ಜಿಲ್ಲೆ
ಇಂದು ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದರು.

ಎನ್‌ಐಟಿಕೆ ನಿರ್ದೇಶಕ ಪ್ರೊ| ಕರಣಂ ಉಮಾಮಹೇಶ್ವರ ರಾವ್‌ ಅಧ್ಯಕ್ಷತೆ ವಹಿಸಿ ಎನ್‌ಐಟಿಕೆ, ಬಂದರು ಸಹಿತ ಅವಿಭಜಿತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ ದಿ| ಮಲ್ಯರನ್ನು ಈ ಮೂಲಕ ದೇಶಾದ್ಯಂತ ನೆನಪಿಸಿಕೊಳ್ಳುವಂತೆ ಮಾಡುವ ಕಾರ್ಯಕ್ರಮ ನಿಜಕ್ಕೂ ಮಾದರಿ ಎಂದರು.

ದೂರದೃಷ್ಟಿ
ಕಸ್ತೂರಿ ಬಾಲಕೃಷ್ಣ ಪೈ ಮಾತನಾಡಿ ಬಂದರು, ಎಂಜಿನಿಯರಿಂಗ್‌ ಕಾಲೇಜು, ಸೇತುವೆಗಳು, ವಿಮಾನ ನಿಲ್ದಾಣ ಮತ್ತಿತರ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಗಳಿಂದ ಜನರು ಇಂದಿಗೂ ಅವರನ್ನು ನೆನೆಯುತ್ತಿದ್ದಾರೆ. ಇದೀಗ ಅವರ 115ನೇ ಜನ್ಮದಿನ ಹಾಗೂ ಅವರ ಐತಿಹಾಸಿಕ ಅಭಿವೃದ್ಧಿ ಸಾಧನೆಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಸಲುವಾಗಿ ಅಂಚೆ ಇಲಾಖೆಯ ಸಹಕಾರದಲ್ಲಿ ವಿಶೇಷ ಲಕೋಟೆ ಹೊರ ತಂದಿದ್ದೇವೆ ಎಂದರು.

ಕಾಲೇಜಿನ ನಿವೃತ್ತ ಡೀನ್‌ ಪ್ರೊ| ಬಿ.ಆರ್‌. ಸಾಮಗ, ಶ್ರೀನಿವಾಸ ರೈ, ಗೋಪಾಲಕೃಷ್ಣ ಪ್ರಭು, ಗುರುಚರಣ್‌ ಮಲ್ಯ ಉಪಸ್ಥಿತರಿದ್ದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

ಸಾಧನೆಯ ಪ್ರತೀಕ
 ಮಲ್ಯರ ವಿಶೇಷ ಲಕೋಟೆಯಲ್ಲಿ ಮಲ್ಯ ಭಾವಚಿತ್ರದೊಂದಿಗೆ ಅವರ ಸಾಧನೆಯ ಪ್ರತೀಕವಾದ ಎನ್‌ ಐಟಿಕೆ, ಹೆದ್ದಾರಿ, ಸೇತುವೆ, ಬಂದರು, ಪಾರ್ಕ್‌ ಮತ್ತಿತರ ಚಿತ್ರಗಳನ್ನು ಮುದ್ರಿಸಲಾಗಿದೆ. ಪ್ರಸ್ತುತ ಮಲ್ಯರ ಈ ವಿಶೇಷ ಲಕೋಟೆಗಳು ಹಂಪನಕಟ್ಟ ಅಂಚೆ ಕಚೇರಿಯಲ್ಲಿ ಲಭ್ಯವಿದ್ದು, ಸ್ಪೀಡ್‌ ಪೋಸ್ಟ್‌ ಮತ್ತಿತರ ಸೇವೆಗಳಿಗೆ ಬಳಸಬಹುದಾಗಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.