ಉಳ್ಳಾಲ: ಮಸೀದಿಗೆ ನುಗ್ಗಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Team Udayavani, Nov 2, 2022, 8:25 PM IST
ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮ್ಮಾ ಮಸೀದಿಗೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿಗಳನ್ನು ಕಳವುಗೈದಿರುವ ಘಟನೆ ನಡೆದಿದೆ.
ಮಂಗಳವಾರ ನಡುರಾತ್ರಿಯ ವೇಳೆಗೆ ಮಸೀದಿಯ ಪಕ್ಕದ ರೂಮ್ ನೊಳಗಿದ್ದ ಹಾರೆ, ಪಿಕ್ಕಾಸು ಮೂಲಕ ಆವರಣ ಗೋಡೆಯಲ್ಲಿದ್ದ ಕಾಣಿಕೆ ಡಬ್ಬಿ ಸೇರಿದಂತೆ ಒಟ್ಟು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ಕಳವುಗೈಯಲಾಗಿದೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಓರ್ವ ವ್ಯಕ್ತಿಯೇ ಕಳ್ಳತನ ನಡೆಸುವ ದೃಶ್ಯ ಕಂಡು ಬಂದಿದೆ.
ಮಸೀದಿಯ ಪಕ್ಕದ ರೂಮ್ ನಲ್ಲಿದ್ದ ಹಾರೆಯಿಂದ ಬಾಗಿಲು ಒಡೆದು ಕೃತ್ಯ ಎಸಗಿಗಿದೆ. ಸ್ಥಳಕ್ಕೆ ಶಾಸಕರಾದ ಯು.ಟಿ.ಖಾದರ್ ಹಾಗೂ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು