ಉಳ್ಳಾಲ: ಮಗನ ಕಣ್ಣೆದುರೇ ಸಮುದ್ರ ಪಾಲಾದ ತಂದೆ, ಸ್ನಾನಕ್ಕೆ ನೀರಿಗಿಳಿದ ವೇಳೆ ಸಂಭವಿಸಿದ ಘಟನೆ
Team Udayavani, Dec 11, 2022, 11:10 PM IST
ಉಳ್ಳಾಲ: ಸೋಮೇಶ್ವರ ದೇವಸ್ಥಾನ ಬಳಿ ಸಮುದ್ರದ ಬಳಿ ಸಮುದ್ರಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಉಳ್ಳಾಲ ಕಾಪಿಕಾಡ್ ಬಳಿಯ ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್ (47) ಮೃತಪಟ್ಡವರು. ಪ್ರಶಾಂತ್ ಪುತ್ರ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಪುತ್ರ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಎಂಬವರ ಜತೆಗೆ ತೆರಳಿದ್ದ ಸಂದರ್ಭ ಘಟನೆ ನಡೆದಿದೆ. ಪ್ರತಿ ಭಾನುವಾರವೂ ಮಕ್ಕಳನ್ನು ಕರೆದುಕೊಂಡು ಸಮುದ್ರ ತೀರಕ್ಕೆ ಸಹೋದರರು ತೆರಳುತ್ತಿದ್ದರು. ಮೃತ ಪ್ರಶಾಂತ್ ಅವರ ಪುತ್ರ ಚಿರಾಯು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಈಜುಪಟುವಾಗಿದ್ದಾನೆ. ಕಣ್ಣಮುಂದೆಯೇ ತಂದೆ ಸಮುದ್ರಪಾಲಾಗುವುದನ್ನು ಕಂಡು ಹಗ್ಗದ ಸಹಾಯದಿಂದ ಮೇಲಕ್ಕೆ ಎತ್ತಿದರೂ ಪ್ರಯೋಜನಕಾರಿಯಾಗಲಿಲ್ಲ. ರಿಕ್ಷಾ ಚಾಲಕರಾಗಿದ್ದ ಪ್ರಶಾಂತ್ ಪ್ರಸ್ತುತ ಮಂಗಳೂರಿನ ಎಸ್ ಡಿಎಂ ಶಿಕ್ಷಣ ಸಂಸ್ಥೆಯ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಾಮಾರುತದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿಯಿಂದ ಮಳೆಯಿದ್ದು, ಸಮುದ್ರದಲ್ಲಿ ಗಾಳಿಯಿದ್ದ ಹಿನ್ನೆಲೆಯಲ್ಲಿ ಅಲೆಗಳ ಗಾತ್ರ ಹೆಚ್ಚಾಗಿ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ಚಂಡಾಮಾರುತವಾಗಿ ಮಾರ್ಪಟ್ಟು, ಡಿ.೧೨ರವರೆಗೆ ಚಳಿ ಜತೆಗೆ ಮಳೆ ಇರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿತ್ತು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ