ಉಳ್ಳಾಲ: ಹಾಡುಹಗಲೇ ಮನೆಗೆ ಕನ್ನ ಕೊರೆದು ಚಿನ್ನಾಭರಣ ದೋಚಿದ ಕಳ್ಳರು
Team Udayavani, Nov 29, 2019, 5:22 PM IST
ಉಳ್ಳಾಲ: ಇಲ್ಲಿನ ಮನೆಯೊಂದಕ್ಕೆ ಶುಕ್ರವಾರ ಹಾಡು ಹಗಲಿನಲ್ಲೇ ನುಗ್ಗಿದ ಕಳ್ಳರು ಮನೆಯ ಒಳಗಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ತೊಕ್ಕೊಟ್ಟು ಒಳಪೇಟೆ ನಿವಾಸಿ ಭಾರತಿ ಕೊಟ್ಟಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು 2.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಭಾರತಿ ಅವರು ಉಳ್ಳಾಲ ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಇಂದು ಮಧ್ಯಾಹ್ನ ಉಳ್ಳಾಲ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗಿದಾಗ ತಮ್ಮ ಮನೆಯಲ್ಲಿ ಕಳವು ನಡೆದಿರುವುದು ತಿಳಿದು ಬಂದಿದೆ.
ಕಳ್ಳರು ಮನೆಯಲ್ಲಿದ್ದ ಚಿನ್ನದ ಉಂಗುರ, ಬ್ರಾಸ್ಲೇಟ್ ಸೇರಿದಂತೆ ಎಟಿಎಂ ಕಾರ್ಡ್ ಕಳವು ಮಾಡಿದ್ದಾರೆ. ವಿಚಿತ್ರವೆಂದರೆ ಇದು ಭಾರತಿ ಅವರ ಮನೆಯಲ್ಲಿ ನಡೆಯುತ್ತಿರುವ ಮೂರನೇ ಕಳ್ಳತನ ಪ್ರಕರಣವಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್