ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ
Team Udayavani, Jan 14, 2023, 6:03 PM IST
ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95,000 ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲದ ಆಝಾದ್ ನಗರ ಒಂದನೇ ಕ್ರಾಸ್ ನ ಮೊಹಮ್ಮದ್ ಖಾಲಿದ್ (39), ಹಾಗೂ ಮಂಜೇಶ್ವರದ ಲಿಖಿತ್ (21) ಬಂಧಿತರು. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇವರನ್ನು ಸೋಮೇಶ್ವರ ಗ್ರಾಮದ ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ಬಳಿ ಬಂಧಿಸಿದ್ದಾರೆ.
ಇಬ್ಬರು ಯುವಕರು ಡಿಯೊ ಸ್ಕೂಟರ್ ನಲ್ಲಿ ತಲಪಾಡಿಯಿಂದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ್ ಕಡೆಗೆ ಎಂಡಿಎಂಎ ಹೊಂದಿರುವ ಪ್ಯಾಕೆಟ್ ಸಹಿತ ಸಟರನಲ್ಲಿ ಹೊಗುತ್ತಿದ್ದ ಸಮಯದಲ್ಲಿ ಉಳ್ಳಾಲ ಪೊಲೀಸರು ಸ್ಕೂಟರನ್ನು ಅಡ್ಡಗಟ್ಟಿ ಬಂಧಿಸಿದ್ದಾರೆ. ಇವರಿಂದ ರೂ.20,000 ಮೌಲ್ಯದ 10 ಗ್ರಾಂ ರೂ. 50,000 ಬೆಲೆಬಾಳುವ ಸ್ಕೂಟರ್ ಹಾಗೂ ರೂ. 25,000 ಬೆಲೆಬಾಳುವ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಗಾಂಜಾ ಮಾರಾಟದ ಪ್ರಕರಣಗಳಿವೆ.
ಇದನ್ನೂ ಓದಿ:ತಿರುವನಂತಪುರದ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತೀಯ ಕ್ರಿಕೆಟಿಗರು
ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ರವರ ಮಾರ್ಗದರ್ಶನದಲ್ಲಿ ಪಿಎಸ್ ಐಗಳಾದ ರೇವಣ್ ಸಿದ್ದಪ್ಪ, ಪ್ರದೀಪ್ ಟಿ.ಆರ್, ಶಿವಕುಮಾರ್ ಹಾಗು ಸಿಬ್ಬಂದಿಗಳಾದ ರಂಜಿತ್, ಅಶೋಕ, ಅಕ್ಬರ್, ಸಾಗರ, ವಾಸುದೇವ, ಸತೀಶ್, ಚಿದಾನಂದ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು