ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ
Team Udayavani, Jun 8, 2023, 12:28 PM IST
ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ (25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.
ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.
ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ. ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.
ಹಲವು ಸಂಕಷ್ಟಗೊಳಗಾದ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!