ಸಿಗದ ಪಡಿತರ ಚೀಟಿ, ವಿಲೇವಾರಿಯಾಗದ 94 ಸಿ ಅರ್ಜಿ: ಗ್ರಾಮಸ್ಥರ ಆಕ್ರೋಶ
Team Udayavani, Aug 3, 2017, 7:10 AM IST
ಬಂಟ್ವಾಳ : ಅರ್ಜಿ ಹಾಕಿ ವರ್ಷಗಳು ಕಳೆದರೂ ಪಡಿತರ ಚೀಟಿ ಸಿಗುತ್ತಿಲ್ಲ, 94ಸಿ ಅರ್ಜಿಗಳು ಕೂಡ ವಿಲೇವಾರಿ ಆಗುತ್ತಿಲ್ಲ. ಇದಕ್ಕೆ ಕಾರಣವೇನು? ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಯಾಕೆ? ಎಂಬಿತ್ಯಾದಿಯಾಗಿ ಪ್ರಶ್ನಿಸಿರುವ ತುಂಬೆ ಗ್ರಾಮಸ್ಥರು ಆಡಳಿತ ವರ್ಗದ ನಿಷ್ಕ್ರಿಯತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮಲ್ಕಟ್ಟೆ ಶ್ರೀ ಶಾರದಾ ಸಭಾಂಗಣದಲ್ಲಿ ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಗ್ರಾಮಸಭೆಯಲ್ಲಿ ಅರ್ಜಿ ವಿಲೇವಾರಿಗೆ ಸತಾಯಿಸುತ್ತಿರುವ ಅಧಿಕಾರಿಗಳ ಬಗ್ಗೆ ಗ್ರಾಮಸ್ಥರು ದೂರಿದರು.
ಸನಿಹದ ಕಳ್ಳಿಗೆ ಗ್ರಾ.ಪಂ. ವ್ಯಾಪ್ತಿಯ 94 ಸಿಗೆ ಸಂಬಂಧಿಸಿದ ಎಲ್ಲ 270 ಅರ್ಜಿವಿಲೇವಾರಿ ಆಗಿವೆ. ಆದರೆ ತುಂಬೆ ಗ್ರಾ.ಪಂ.ವ್ಯಾಪ್ತಿಯ ಯಾವೊಂದು ಅರ್ಜಿಯೂ ವಿಲೇವಾರಿ ಆಗಿಲ್ಲ. ಇದಕ್ಕೆ ಕಾರಣವೇನು ಎಂದು ಗ್ರಾಮಸ್ಥರು ಪ್ರಶ್ನಿಸಿದರು.
ವಶೀಲಿಬಾಜಿ ಬೇಡ
ಗ್ರಾಮ ಸಭೆ ಇರುವುದು ಜನರ ಸಮಸ್ಯೆ ಪರಿಹಾರಕ್ಕಾಗಿ ಜನರು ಅಧಿಕಾರಿಗಳ ಗಮನಕ್ಕೆ ತರುವ ಅಹವಾಲುಗಳಿಗೆ ಪರಿಹಾರ ದೊರೆಯಬೇಕು. ಅಧಿಕಾರಿಗಳು ಇರುವುದು ಜನರ ಸಮಸ್ಯೆ ಪರಿಹಾರಕ್ಕಾಗಿಯೇ ಹೊರತು ಯಾವುದೇ ವಶೀಲಿಬಾಜಿಗಾಗಿ ಅಲ್ಲ. ಜನತೆಯ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಗ್ರಾ.ಪಂ. ಉಪಾಧ್ಯಕ್ಷ ಪ್ರವೀಣ್ ಹೇಳಿದರು.
ಆಹಾರ ನಿರೀಕ್ಷಕರ ಗೈರು
“ಆಹಾರ ಇಲಾಖೆಗೆ ಸಂಬಂಧಪಟ್ಟ ಮಾಹಿತಿ ನೀಡಲು ಗ್ರಾಮಸಭೆಗೆ ಆಹಾರ ಇಲಾಖೆ ನಿರೀಕ್ಷಕರೇ ಬರ
ಬೇಕು. ಗ್ರಾಮಕರಣಿಕರಲ್ಲಿ ದೂರನ್ನು ಹೇಳಿಕೊಂಡರೆ ನಮ್ಮ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ’ ಎಂದು ಗ್ರಾಮಸ್ಥ ರೋರ್ವರು ಅಸಮಾಧಾನ ವ್ಯಕ್ತಪಡಿಸಿ ದರು. ಇದಕ್ಕೆ ಪ್ರತಿಕ್ರಿಯಿಸಿದ ನೋಡಲ್ ಅಧಿಕಾರಿಯವರು “ಆಹಾರ ನಿರೀಕ್ಷಕರು ಜಿಲ್ಲಾಧಿಕಾರಿ ಕಚೇರಿ ಸಭೆಯಲ್ಲಿ ಭಾಗವಹಿಸಿರುವ ಕಾರಣದಿಂದ ಗ್ರಾಮಸಭೆಗೆ ಹಾಜರಾಗಿಲ್ಲ. ಸಮಸ್ಯೆಗಳನ್ನು ಅವರ ಗಮನಕ್ಕೆ ತರಲಾಗುವುದು’ಎಂದರು.
ಸಣ್ಣ ಕೆಲಸ ಮಾಡಿದರೂ ಕೂಡ ಮೆಸ್ಕಾಂ ಸಿಬಂದಿ ಹಣ ಕೇಳುತ್ತಾರೆ ಎಂಬ ಆರೋಪಗಳು ಸಭೆಯಲ್ಲಿ ಕೇಳಿಬಂದವು.
ತಾ.ಪಂ. ಉಪಾಧ್ಯಕ್ಷ ಗಣೇಶ್ ಸುವರ್ಣ, ಪಿಡಿಒ ಚಂದ್ರಾವತಿ ಉಪಸ್ಥಿತರಿದ್ದರು.
ಆಧಾರ್ ಜೋಡಣೆಗೂ ವಸೂಲಿ
ಪಡಿತರ ಚೀಟಿಯೊಂದಿಗೆ ಆಧಾರ್
ಸಂಖ್ಯೆ ಜೋಡಣೆಗೆ ಸೈಬರ್ನಲ್ಲಿ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಾರೆ. ಇದರಿಂದಾಗಿ ಬಡಜನರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಕೇಳಿ ಬಂತು. ಸರಕಾರ ಹಾಗೂ ಸೈಬರ್ ಸಂಸ್ಥೆಗಳು ಒಳ ಒಪ್ಪಂದ ಮಾಡಿಕೊಂಡು ಜನರಿಂದ ಹಣ ಲೂಟಿ ಮಾಡುತ್ತಿವೆ. ಹಣ ನೀಡಿದರೂ ಕೂಡ ಆಧಾರ್ ಸಂಖ್ಯೆ ಸರಿಯಾಗಿ ಲಿಂಕ್ ಆಗದೆ ಯಾರಧ್ದೋ ಸಂಖ್ಯೆ ಇನ್ಯಾರಧ್ದೋ ಖಾತೆಗೆ ಜೋಡಣೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಆಧಾರ್ ಸಂಖ್ಯೆ ಜೋಡಣೆ ದೋಷದಿಂದ ತುಂಬೆ ಗ್ರಾ.ಪಂ. ವ್ಯಾಪ್ತಿಯ ಅನೇಕ ವಿದ್ಯಾರ್ಥಿಗಳು ಆರ್ಟಿಇ ಅವಕಾಶ ವಂಚಿತರಾಗಿದ್ದಾರೆ ಎನ್ನುವ ದೂರು ಕೂಡ ಸಭೆಯಲ್ಲಿ ಕೇಳಿಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ