ಮೂರು ಬಾರಿ ಅನುದಾನ: 74.97 ಲಕ್ಷ ರೂ.ಗೆ ಏರಿದ ವೆಚ್ಚ


Team Udayavani, Aug 10, 2018, 1:55 AM IST

anudana-9-8.jpg

ಸುಳ್ಯ: ಎಂಟು ವರ್ಷಗಳಿಂದ ಪಾಳು ಬಿದ್ದ ಸ್ಥಿತಿಯಲ್ಲಿರುವ ಕುರುಂಜಿಗುಡ್ಡೆ ಒಳಾಂಗಣ ಕ್ರೀಡಾಂಗಣ ತತ್‌ಕ್ಷಣ ದುರಸ್ತಿ ಮಾಡಿ, ಹಸ್ತಾಂತರಿಸುವಂತೆ ಗುತ್ತಿಗೆ ಸಂಸ್ಥೆಗೆ ನ.ಪಂ. ಸೂಚಿಸಿದೆ. ಮೂರನೇ ಹಂತದ ಅನುದಾನದಲ್ಲಿ ಉಳಿದಿರುವ ಕಾಮಗಾರಿಯನ್ನು ವಾರದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದ್ದು, ನ.ಪಂ. ಸಾಮಾನ್ಯ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾಮಗಾರಿ ಮುಗಿದ ಮೇಲೆ ನ.ಪಂ. ವತಿಯಿಂದ ಪರಿಶೀಲನೆ ನಡೆಸಿ, ಗುತ್ತಿಗೆ ಸಂಸ್ಥೆಗೆ ಬಾಕಿ ಮೊತ್ತದ ಪಾವತಿ ಹಾಗೂ ಉದ್ಘಾಟನೆ ಕುರಿತು ಚುನಾಯಿತ ಪ್ರತಿನಿಧಿಗಳ ಸಮ್ಮುಖ ಸಭೆ ನಡೆಸಿ ತೀರ್ಮಾನಿಸಲು ನಿರ್ಧರಿಸಲಾಗಿದೆ ಎಂದು ನ.ಪಂ. ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪೂರ್ಣ ಕಾಮಗಾರಿ
ನಗರದ ಸನಿಹದಲ್ಲಿರುವ ಕುರುಂಜಿ ಗುಡ್ಡೆಯ ಎತ್ತರದ ಪ್ರದೇಶದಲ್ಲಿ ಸಿ.ಎಂ.ಎಸ್‌.ಎಂ.ಟಿ.ಡಿ.ಪಿ. ಯೋಜನೆಯಡಿ 50 ಲಕ್ಷ ರೂ. ಅಂದಾಜಿನ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 2010 ಜೂ. 29ರಂದು ಕರ್ನಾಟಕ ಸರಕಾರದ ಹೊಸದಿಲ್ಲಿ ಪ್ರತಿನಿಧಿ ಆಗಿದ್ದ ಧನಂಜಯ ಕುಮಾರ್‌ ಶಿಲಾನ್ಯಾಸ ನೆರವೇರಿಸಿದ್ದರು. ಆ ಅನುದಾನದಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ ನಿರ್ಮಿತಿ ಕೇಂದ್ರದ ನಿರ್ವಹಣೆ ಅಡಿ ಎರಡು ಬಾರಿ 15.57 ಲಕ್ಷ ರೂ. ಮತ್ತು 9.40 ಲಕ್ಷ ರೂ. ಅನ್ನು ಮಂಜೂರು ಮಾಡಲಾಗಿತ್ತು. ಇದರಿಂದ ಉದ್ದೇಶಿತ ಒಳಾಂಗಣ ಕ್ರೀಡಾಂಗಣದ ವೆಚ್ಚ 50 ಲಕ್ಷದಿಂದ 74.97 ಲಕ್ಷ ರೂ.ಗೆ ಏರಿಕೆ ಕಂಡಿದೆ. ಅದಾಗ್ಯೂ ಕಾಮಗಾರಿ ಪೂರ್ಣವಾಗದೆ ನ.ಪಂ. ಸಭೆಗಳಲ್ಲಿ ಚರ್ಚಾ ವಸ್ತುವಾಗಿತ್ತು.

ಮೂರು ಬಾರಿ ಅನುದಾನ!
ಒಟ್ಟು 50 ಲಕ್ಷ ರೂ. ವೆಚ್ಚದಲ್ಲಿ ಅಂದಾಜುಪಟ್ಟಿ ತಯಾರಿಸಿ ಆರಂಭಗೊಂಡ ಒಳಾಂಗಣ ಕ್ರೀಡಾಂಗಣಕ್ಕೆ ಈ ತನಕ ಮೂರು ಬಾರಿ ಅನುದಾನ ಕಾದಿರಿಸಲಾಯಿತು. ಮೊದಲ ಹಂತದ 50 ಲಕ್ಷ ರೂ. ಕಾಮಗಾರಿ ಪೂರ್ಣಗೊಂಡು ಗುತ್ತಿಗೆ ಸಂಸ್ಥೆಗೆ ಹಣ ಪಾವತಿಸಲಾಗಿದೆ ಅನ್ನುತ್ತಿದೆ ನ.ಪಂ. ಎರಡನೆ ಹಂತದಲ್ಲಿ 2013-14 ನೇ ಸಾಲಿನ ಎಸ್‌.ಎಫ್‌.ಸಿ. ಯೋಜನೆಯಡಿ 15.57 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿ ನೆಲಹಾಸು ಕೆಡಹುವುದು, ಅಂಗಣದ ಸುತ್ತ ಗ್ರಾನೈಟ್‌ ನೆಲಹಾಸು ಅಳವಡಿಸುವುದು, ಮರದ ನೆಲಹಾಸು ನಿರ್ಮಾಣ ಮೊದಲಾದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆ ಅನುದಾನವು ಸಂದಾಯ ಆಗಿದೆ ಅನ್ನುವುದು ನ.ಪಂ.ಮಾಹಿತಿ.

ಮೂರನೆ ಹಂತದಲ್ಲಿ 2016-17 ನೇ ಸಾಲಿನ ಯೋಜನೆಯಡಿ 9.40 ಲ.ರೂ.ವೆಚ್ಚದಲ್ಲಿ ಅಳವಡಿಸಿದ ಎ.ಸಿ. ಶೀಟು ತೆಗೆಯುವುದು, ಹೆಚ್ಚುವರಿ ಜಿ.ಐ. ರಿಪೀಸು ಒದಗಿಸುವುದು, ಗ್ಯಾಲೋಲಿಯಂ ಶೀಟು ಅಳವಡಿಕೆ, ದುರಸ್ತಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಅನುದಾನ ಪಾವತಿಸಲು 9 ಪಾವತಿಸಲು ಬಾಕಿ ಇದೆ ಅನ್ನುತ್ತದೆ ನ.ಪಂ.ನೀಡಿದ ಮಾಹಿತಿ.

ರಸ್ತೆ ಅಯೋಮಯ
ಕಟ್ಟಡದ ಸುತ್ತಲೂ ಪೊದೆಗಳು ಬೆಳೆದಿವೆ. ಕಿಟಕಿ ಗಾಜುಗಳು ಒಡೆದಿವೆ. ಸಿಮೆಂಟ್‌ ಶೀಟುಗಳು ಹಾಳಾಗುತ್ತಿದೆ. ರಸ್ತೆ ನಿರ್ಮಾಣದ ಸ್ಥಳ ಮಳೆ ನೀರು ಹರಿದು ಹೋಗುವ ತೋಡಿನಂತಾಗಿದೆ. ಒಳಭಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೆ ಬಣ್ಣ ಬಳಿದಂತಿದೆ. ಬುಧವಾರದ ತನಕವೂ ಇದೇ ಸ್ಥಿತಿ ಅಲ್ಲಿತ್ತು. ಹಾಗಾಗಿ ಒಳಭಾಗದ ದುರಸ್ತಿಯ ಜತೆಗೆ ಹೊರಭಾಗದಲ್ಲಿ ಹಾಳಾದ ಪರಿಕರಗಳ ಜೋಡಣೆ ಆಗಬೇಕಿದೆ. ಕಾವಲುಗಾರನ ಕಟ್ಟಡ, ಶೌಚಾಲಯ ಸ್ಲ್ಯಾಬ್‌ ಕಾಮಗಾರಿ ಕಡೆ ಗಮನ ಹರಿಸಬೇಕಿದೆ. ಇಲ್ಲದಿದ್ದರೆ ಉದ್ಘಾಟನೆಗಷ್ಟೇ ಸೀಮಿತವಾಗಿ ಬಿಡಬಹುದು ಅನ್ನುತ್ತಾರೆ ಮಾಹಿತಿ ಹಕ್ಕು ಹೋರಾಟಗಾರ ಡಿ.ಎಂ. ಶಾರೀಕ್‌.

ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ!
ಒಳಾಂಗಣ ಕ್ರೀಡಾಂಗಣದ ಪ್ಲಾನ್‌ ಗಮನಿಸಿದರೆ 1.5 ಕೋಟಿ ರೂ. ಮಿಕ್ಕಿದ ಯೋಜನೆಯದು. ಆದರೆ ಆರಂಭದಲ್ಲಿ ಮೀಸಲಿಟ್ಟ ಅನುದಾನ ಅರ್ಧ ಕೋಟಿ. ಹೀಗಾಗಿ ಉದ್ದೇಶಿತ ಕಾಮಗಾರಿ ಕೈಗೆತ್ತಿ ಕೊಳ್ಳಲು ಪೂರ್ವಸಿದ್ಧತೆ ಇಲ್ಲದಿದ್ದ ಕಾರಣ ಬಹು ನಿರೀಕ್ಷಿತ ಯೋಜನೆಗೆ ಹಲವು ಅಡ್ಡಿ ಎದುರಾಯಿತು. ಎಂಟು ವರ್ಷ ಸಂದರೂ ಗುರು ಮುಟ್ಟುವಲ್ಲಿ ವೈಫಲ್ಯ ಕಂಡಿತ್ತು. ಮೀಸಲಿಟ್ಟ ಅನುದಾನಕ್ಕೆ ತಕ್ಕಂತೆ ಯೋಜನೆ ಕೈಗೆತ್ತಿಕೊಂಡಿದ್ದರೆ, ಒಳಾಂಗಣ ಕ್ರೀಡಾಂಗಣ ಸಾರ್ವಜನಿಕರ ಬಳಕೆಗೆ ದೊರೆಯುತಿತ್ತು.

ತ್ವರಿತ ಪೂರ್ಣಕ್ಕೆ ಸೂಚನೆ
ಒಳಾಂಗಣ ಕ್ರೀಡಾಂಗಣದ ಬಾಕಿ ಉಳಿದಿರುವ ಕಾಮಗಾರಿ ಹಾಗೂ ದುರಸ್ತಿ ಕಾರ್ಯ ತತ್‌ ಕ್ಷಣ ಪೂರ್ಣಗೊಳಿಸುವಂತೆ ಗುತ್ತಿಗೆ ಸಂಸ್ಥೆಗೆ ಸೂಚಿಸಲಾಗಿದೆ. ಅಲ್ಲಿ ಕಾಮಗಾರಿ ಆರಂಭಗೊಂಡಿದೆ. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉದ್ಘಾಟನೆ ಕುರಿತು ನಿರ್ಧರಿಸಲಾಗುವುದು. 
– ಚಂದ್ರಕುಮಾರ್‌, ಮುಖ್ಯಾಧಿಕಾರಿ, ನ.ಪಂ., ಸುಳ್ಯ

ಪರಿಶೀಲಿಸುತ್ತೇವೆ
ಮೂರು ಹಂತದಲ್ಲಿ ಇದಕ್ಕೆ ಅನುದಾನ ಬಿಡುಗಡೆ ಆಗಿದೆ. ಮೊದಲ ಹಂತದಲ್ಲಿನ 50 ಲಕ್ಷ ರೂ ಹಾಗೂ ಎರಡನೆ ಹಂತದ 15.57 ಲ.ರೂ.ಪಾವತಿಸಲಾಗಿದೆ. ಕೊನೆ ಹಂತದ 9.40 ಲ.ರೂ. ಅನುದಾನದ ಕಾಮಗಾರಿ ಪರಿಶೀಲನೆ ನಡೆದು ಪಾವತಿಸುವ ಬಗ್ಗೆ ತೀರ್ಮಾನಿಸಲಾಗುತ್ತದೆ.
– ಶಿವಕುಮಾರ್‌, ಎಂಜಿನಿಯರ್‌, ನ.ಪಂ. ಸುಳ್ಯ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.