ಜಿಲ್ಲೆಯಲ್ಲಿ ಡೆಂಗ್ಯೂ-ಮಲೇರಿಯಾ ಸದ್ಯ ನಿಯಂತ್ರಣದಲ್ಲಿ

ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಶೇ. 35ರಷ್ಟು ಕಡಿಮೆ ಪ್ರಕರಣ

Team Udayavani, Oct 6, 2021, 5:30 AM IST

ಜಿಲ್ಲೆಯಲ್ಲಿ ಡೆಂಗ್ಯೂ-ಮಲೇರಿಯಾ ಸದ್ಯ ನಿಯಂತ್ರಣದಲ್ಲಿ

ಮಹಾನಗರ: ಹವಾಮಾನ ವೈಪರೀತ್ಯದ ಕಾರಣ ಡೆಂಗ್ಯೂ ಮತ್ತು ಮಲೇರಿಯಾ ಹಾವಳಿಯ ಭೀತಿ ಇದ್ದರೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಎರಡೂ ರೋಗ ಸದ್ಯ ನಿಯಂತ್ರಣದಲ್ಲಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕರಾವಳಿಯಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಸರಾಸರಿ ಶೇ.35ರಷ್ಟು ಕಡಿಮೆ ಎಂಬುದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಸ್ಪಷ್ಟವಾಗುತ್ತದೆ.

ದ.ಕ. ಜಿಲ್ಲೆಯಲ್ಲಿ ಈ ವರ್ಷದಲ್ಲಿ ಇದುವರೆಗೆ (ಜನವರಿಯಿಂದ) ಮಲೇ ರಿಯಾ 577 ಪ್ರಕರಣ ಹಾಗೂ ಡೆಂಗ್ಯೂ 193 ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ 317 ಹಾಗೂ ಮಲೇರಿಯಾ ಪ್ರಕರಣಗಳು 23 ಪ್ರಕರಣಗಳು ವರದಿಯಾಗಿವೆ. ಅಧಿಕೃತ ಮಾಹಿತಿ ಪ್ರಕಾರ ಉಭಯ ಜಿಲ್ಲೆಗಳಲ್ಲಿ ಈ ಎರಡೂ ಕಾಯಿಲೆಗಳಿಂದ ಈ ವರ್ಷ ಯಾವುದೇ ಸಾವು ಸಂಭವಿಸಿಲ್ಲ.

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಇತ್ತೀಚೆಗೆ ಶಂಕಿತ ಡೆಂಗ್ಯೂವಿನಿಂದ ಸಾವನ್ನಪ್ಪಿದ್ದಾರೆ ಎಂಬ ವರದಿಯನ್ನು ಆರೋಗ್ಯ ಇಲಾಖೆ ತಳ್ಳಿ ಹಾಕಿದೆ. ಅದು ಡೆಂಗ್ಯೂ ಪ್ರಕರಣ ಅಲ್ಲ; ಆ ವ್ಯಕ್ತಿಯ ಸಾವಿಗೆ ನಿಮೋನಿಯಾ ಕಾರಣ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಪಿಲಿಕುಳದ ಹನುಮಾನ್‌ ಲಂಗೂರ್‌ “ರಾಜು’ ಸಾವು

ಚಿಕುನ್‌ಗುನ್ಯಾ ಇಲ್ಲ
ದ.ಕ. ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಚಿಕುನ್‌ಗುನ್ಯಾ ಕಾಯಿಲೆಯ ಯಾವುದೇ ಪ್ರಕರಣ ವರದಿಯಾಗಿಲ್ಲ. 2015ರಲ್ಲಿ 4 ಪ್ರಕರಣ, 2016ರಲ್ಲಿ ಒಂದು, 2017ರಲ್ಲಿ ಐದು ಪ್ರಕರಣಗಳು ವರದಿಯಾಗಿದ್ದವು. 2018ರಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ. 2919ರಲ್ಲಿ 17 ಚಿಕುನ್‌ಗುನ್ಯಾ ಪ್ರಕರಣಗಳು ವರದಿಯಾಗಿದ್ದವು.

ದ.ಕ. ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ಇಳಿಕೆ ಕಾಣುತ್ತಿವೆ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಡೆಂಗ್ಯೂ ತಡೆಯುವ ನಿಟ್ಟಿನಲ್ಲಿ ಲಾರ್ವಾ ಸಮಿಕ್ಷೆ ಹಾಗೂ ಮಲೇರಿಯಾ ತಡೆಯಲು ಸಕ್ರಿಯ ರಕ್ತ ಲೇಪನ ಅಭಿಯಾನ ನಡೆಸಲಾಗಿದೆ. ಅಧಿಕಾರಿಗಳು ಮನೆ ಮನೆಗೆ, ನಿರ್ಮಾಣ ಹಂತದ ಕಟ್ಟಡ ಪ್ರದೇಶಕ್ಕೆ ಆಗಿಂದಾಗ್ಗೆ ತೆರಳಿ ಸ್ಥಳದಲ್ಲಿಯೇ ಮಲೇರಿಯಾ ರ್ಯಾಪಿಡ್‌ ತಪಾಸಣೆ ನಡೆಸುತ್ತಾರೆ. ಪಾಸಿಟಿವ್‌ ಬಂದರೆ ಯಾವ ಹಂತದಲ್ಲಿ ಎಂದು ತಿಳಿಯಲು ರಕ್ತ ಲೇಪನ ಪರೀಕ್ಷೆ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಕಚೇರಿ ಮೂಲಗಳು ತಿಳಿಸಿವೆ.

ನಿಯಂತ್ರಣದಲ್ಲಿ
ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆಗಳೆರಡೂ ನಿಯಂತ್ರಣದಲ್ಲಿವೆ. ಈ ಕಾಯಿಲೆಗಳು ಮುಂದಿನ ದಿನಗಳಲ್ಲಿ ಬಾರದಂತೆ ತಡೆಯ¸ ೇಕು. ಜನರ ಅಜಾಗ್ರತೆಯಿಂದಲೇ ಇಂತಹ ಕಾಯಿಲೆಗಳು ಬರುವುದಾದ್ದರಿಂದ ಜನರು ಜಾಗೃತರಾಗಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು.
-ಡಾ| ನವೀನ್‌ ಚಂದ್ರ ಕುಲಾಲ್‌, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ, ದ.ಕ. ಜಿಲ್ಲೆ

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.