ಮಂಗಳೂರಿನಲ್ಲಿ ಅಂಡರ್‌ ವಾಟರ್‌ ಗ್ಯಾರೇಜ್‌


Team Udayavani, Jan 11, 2021, 3:09 AM IST

Untitled-2

ಸಾಂದರ್ಭಿಕ ಚಿತ್ರ

ಮಂಗಳೂರು: ಮೀನುಗಾರಿಕಾ ಬೋಟ್‌ಗಳನ್ನು ದಡಕ್ಕೆ ತರದೇ ನೀರಿನಲ್ಲಿಯೇ ದುರಸ್ತಿ ಮಾಡುವ ಅಂಡರ್‌ ವಾಟರ್‌ ಸರ್ವೀಸ್‌ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆರಂಭವಾಗಿದೆ. ಆ ಮೂಲಕ ಕರಾವಳಿ ಕರ್ನಾಟಕದಲ್ಲಿಯೂ ಪ್ರಥಮ ಬಾರಿಗೆ ನೀರಿನಲ್ಲೇ ಬೋಟ್‌ಗಳನ್ನು ದುರಸ್ತಿಗೊಳಿಸುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಈ ಅಂಡರ್‌ ವಾಟರ್‌ ಗ್ಯಾರೇಜನ್ನು ಮತ್ಸ್ಯೋದ್ಯಮಿ ರಾಜರತ್ನ ಸನಿಲ್‌ ಆರಂಭಿಸಿದ್ದಾರೆ. ಬೋಟ್‌ಗಳನ್ನು ಸಾಮಾನ್ಯವಾಗಿ ನೀರಿನಿಂದ ಮೇಲೆತ್ತಿ ದುರಸ್ತಿ ಮಾಡುವುದು ಈವರೆಗಿನ ಕ್ರಮ. ಬೋಟ್‌ಗಳ ಅಡಿಯಲ್ಲಿ ಲೋಪದೋಷಗಳಿದ್ದರೆ ನೀರಿನಲ್ಲಿ ಮುಳುಗಿ ಅದನ್ನು ಸರಿಪಡಿಸಲು ಸಾಧ್ಯವಾಗುತ್ತಿರಲಿಲ್ಲ. ಇದಕ್ಕೆ ಪರಿಹಾರ ಎಂಬಂತೆ ಇದೀಗ ನೀರಿನ ಒಳಗಿದ್ದುಕೊಂಡೇ ದುರಸ್ತಿ ಮಾಡುವ ತಂತ್ರಜ್ಞಾನ ಹಾಗೂ ಈ ಬಗ್ಗೆ  ತರಬೇತಿ ಪಡೆದ ಸಿಬಂದಿ ಮಂಗಳೂರಿನಲ್ಲಿ ಲಭ್ಯರಿದ್ದಾರೆ.

ಬೋಟ್‌ಗಳ ತಳದಲ್ಲಿರುವ ಲೋಹದ ಪ್ರೊಫೆಲ್ಲರ್‌ಗೆ ಕಪ್ಪೆ ಚಿಪ್ಪುಗಳು ಮುತ್ತಿಕೊಂಡು ಬೋಟ್‌ನ ವೇಗಕ್ಕೆ ತಡೆಯಾಗಿ ಹೆಚ್ಚು ಡೀಸೆಲ್‌ ಖರ್ಚಾಗುವುದು ಅಥವಾ ಬೋಟ್‌ನ ಚಲನೆಗೆ ಅಡ್ಡಿ ಆತಂಕ ಎದುರಾಗುವುದು ಸಾಮಾನ್ಯ. ಇದೀಗ ಸ್ಕೂಬಾ ಡೈವರ್‌ಗಳ ಮಾದರಿಯಲ್ಲಿ ನೀರಿನಲ್ಲಿ ಮುಳುಗಿಕೊಂಡೇ ತಂತ್ರಜ್ಞರು ಈ ಸಮಸ್ಯೆಯನ್ನು ಪರಿಹರಿಸಲಿದ್ದಾರೆ.

ರಾಜರತ್ನ ಸನಿಲ್‌ ಸ್ವತಃ ಈ ತಂತ್ರಜ್ಞಾನದ ತರಬೇತಿ ಪಡೆದಿರುವುದಲ್ಲದೆ, ಮೂವರು ಸಿಬಂದಿಯನ್ನು ತರಬೇತುಗೊಳಿಸಿ ನೇಮಕ ಮಾಡಿದ್ದಾರೆ. ಇನ್ನೂ ನಾಲ್ವರು ತರಬೇತಿ ಪಡೆಯುತ್ತಿದ್ದಾªರೆ. ಉಸಿರಾಟಕ್ಕೆ ಆಕ್ಸಿಜನ್‌ ಸಿಲಿಂಡರ್‌ ಮತ್ತು ದೇಹ ಮುಚ್ಚುವ ಜಾಕೆಟ್‌ ಧರಿಸಿಕೊಂಡು ನೀರಿಗಿಳಿದು ಬೋಟ್‌ ದುರಸ್ತಿ ಮಾಡುತ್ತಾರೆ.

ದೊಡ್ಡ ಬೋಟ್‌ಗಳನ್ನು ನೀರಿನಿಂದ ಮೇಲಕ್ಕೆತ್ತಿ ದುರಸ್ತಿಪಡಿಸಲು 1 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚಾಗುತ್ತದೆ. ಆದ್ದರಿಂದ ಮಾಲಕರು ವರ್ಷಕ್ಕೊಮ್ಮೆ ಅಥವಾ 2 ವರ್ಷಕ್ಕೊಮ್ಮೆ ಈ ರೀತಿಯ ದುರಸ್ತಿ ಮಾಡಿಸುತ್ತಿದ್ದರು. ಇದೀಗ ಅಂಡರ್‌ ವಾಟರ್‌ ಸರ್ವೀಸ್‌ ಲಭ್ಯವಿರುವುದರಿಂದ ಇನ್ನು  ಬೋಟ್‌ಗಳನ್ನು ಮೇಲೆತ್ತಿ ದುರಸ್ತಿ ಮಾಡುವ ಪ್ರಮೇಯ ಬರಲಾರದು ಜತೆಗೆ ಬಹಳಷ್ಟು ಖರ್ಚು ವೆಚ್ಚ ಉಳಿತಾಯ ಆಗಲಿದೆ. ನಿಯಮಿತ ನಿರ್ವಹಣೆಯಿಂದ ಬೋಟ್‌ಗಳನ್ನು ಸುಸ್ಥಿತಿಯಲ್ಲಿಡಬಹುದಾಗಿದೆ. ತಳಭಾಗ ಸಂಪೂರ್ಣ ಸ್ವತ್ಛಗೊಳಿಸಲು 20 ಸಾವಿರದಿಂದ 30 ಸಾವಿರ ರೂ. ಶುಲ್ಕ ಪಡೆಯಲಾಗುತ್ತಿದೆ. ಬಹಳಷ್ಟು ಬೇಡಿಕೆ ಬರುತ್ತಿದ್ದು, ಮಲ್ಪೆ ಮತ್ತು ಇತರ ಬಂದರುಗಳಿಗೂ ಸೇವೆಯನ್ನು ವಿಸ್ತರಿಸಲಾಗುವುದು.– ರಾಜರತ್ನ ಸನಿಲ್‌

ಟಾಪ್ ನ್ಯೂಸ್

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.