ಉಳ್ಳಾಲ,ಸೋಮೇಶ್ವರ ಪರಿಸರ: ಹೆಚ್ಚಿದ ಕಡಲ್ಕೊರೆತ: ಆತಂಕದಲ್ಲಿ ಸಮುದ್ರ ತೀರದ ಜನ
Team Udayavani, Jun 27, 2022, 12:41 AM IST
ಉಳ್ಳಾಲ: ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ ಕಡಲ್ಕೊರೆತ ಹೆಚ್ಚಾಗಿದ್ದು, ಉಳ್ಳಾಲ ಸೀಗ್ರೌಂಡ್ನಲ್ಲಿ 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿದ್ದು, ಬಟ್ಟಪ್ಪಾಡಿಯಲ್ಲಿ ಭೂ ಪ್ರದೇಶ ಸಮುದ್ರ ಪಾಲಾಗುತ್ತಿದೆ.
ಕಡಲ್ಕೊರೆತಕ್ಕೆ ಸಂಬಂಧಿಸಿ ಸೀಗ್ರೌಂಡ್ ಬಳಿಯ ಕಿಲೇರಿಯಾ ನಗರದ ವರೆಗೆ ಶಾಶ್ವತ ಮತ್ತು ತಾತ್ಕಾಲಿಕ ಕಾಮಗಾರಿ ನಡೆದಿದ್ದು ಸೀಗ್ರೌಂಡ್ನ ಸುಮಾರು 500 ಮೀಟರ್ ಕಾಮಗಾರಿ ಬಾಕಿ ಉಳಿದ ಕಾರಣ ಸೀಗ್ರೌಂಡ್ನಲ್ಲಿ ಸಮುದ್ರ ಕೊರೆತ ಹೆಚ್ಚಾಗಿದೆ.
ಮನೆಯ ಕಾಂಪೌಂಡ್ ಗೋಡೆಗಳು ಸಮುದ್ರ ಪಾಲಾಗುತ್ತಿವೆ. ಮನೆಗಳು ಅಪಾಯದಲ್ಲಿವೆ. ಶಾಸಕ ಯು.ಟಿ. ಖಾದರ್ ಸೀಗ್ರೌಂಡ್ಗೆ ಭೇಟಿ ನೀಡಿ ಅಪಾಯದಂಚಿನ ಪ್ರದೇಶಗಳಿಗೆ ತುರ್ತಾಗಿ ಕಲ್ಲು ಹಾಕುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಬಂದರು ಸಚಿವ ಅಂಗಾರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸ್ಥಳೀಯ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ
ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು
ತೊಕ್ಕೊಟ್ಟು: ಬೈಕ್ -ಕಾರು ಢಿಕ್ಕಿ; ಇಬ್ಬರಿಗೆ ಗಾಯ
ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ