ಭಕ್ತಿ ಪರಂಪರೆಯಲ್ಲಿ ಏಕತೆ ಸಾಧ್ಯ: ಡಾ| ಶಿವಪ್ರಕಾಶ್
Team Udayavani, Nov 16, 2017, 10:56 AM IST
ಮಹಾನಗರ: ನಮ್ಮ ದೇಶದಲ್ಲಿರುವ ವಿವಿಧ ಜಾತಿ, ಧರ್ಮ, ಸಂಸ್ಕೃತಿಗಳಲ್ಲಿ ವೈವಿಧ್ಯಗಳಿದೆ. ಆದರೆ ಅದರಲ್ಲಿ ಏಕತೆ ಕಾಣಲು ಸಫಲರಾಗಿಲ್ಲ. ದೇಶದಲ್ಲಿ ಭಕ್ತಿ ಪರಂಪರೆಯಲ್ಲಿ ಮಾತ್ರ ಏಕತೆ ಸಾಧ್ಯವಾಗಿದೆ ಎಂದು ಹೊಸದಿಲ್ಲಿಯ ಜವಾಹರಲಾಲ್ ನೆಹರೂ ವಿವಿಯ ಕಲೆ ಮತ್ತು ಸೌಂದರ್ಯ ವಿಭಾಗದ ಪ್ರೊಫೆಸರ್ ಡಾ| ಎಚ್.ಎಸ್. ಶಿವಪ್ರಕಾಶ್ ಹೇಳಿದರು.
ಮಂಗಳೂರು ವಿವಿ ಕನದಾಸ ಸಂಶೋಧನ ಕೇಂದ್ರದ ಆಶ್ರಯದಲ್ಲಿ ವಿವಿಯ ಒಳಾಂಗಣ ಸಭಾಂಗಣದಲ್ಲಿ ಬುಧವಾರ ಕನಕ ಜಯಂತಿ ಪ್ರಯುಕ್ತ ಕನಕ ತಣ್ತೀಚಿಂತನ ಮತ್ತು ಕನಕಗಂಗೋತ್ರಿ ಕಾರ್ಯಕ್ರಮದ ಭಕ್ತಿ ಪರಂಪರೆಯ ಲೋಕಯಾನ ಮತ್ತು ಕನಕದಾಸರು, ಸಮಕಾಲೀನ ಸಂವಾದ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.
ಈವರೆಗೆ ಭಕ್ತಿ ಪರಂಪರೆಯ ಅಧ್ಯಯನಗಳು ಕೇವಲ ಸಾಹಿತ್ಯದ ಕಡೆಗೆ ಹೆಚ್ಚು ಗಮನ ಹರಿಸಿವೆ. ಆದರೆ ಕಾವ್ಯ, ಸಂಗೀತಕ್ಕೆ ಸೂಕ್ತ ಆದ್ಯತೆ ಸಿಕ್ಕಿಲ್ಲ. ಈ ಬಗ್ಗೆಯೂ ಹೆಚ್ಚಿನ ಅಧ್ಯಯನಗಳು ನಡೆಯಬೇಕಿದೆ. ಭಕ್ತಿ ಪರಂಪರೆಯಲ್ಲಿ ಪುರುಷ ಕೇಂದ್ರಿತ ಮೌಲ್ಯಗಳ ಬದಲು ಸ್ತ್ರೀವಾದ ತಣ್ತೀಗಳಿರುವ ಮೌಲ್ಯಗಳು ಬಿಂಬಿತವಾಗುತ್ತವೆ. ಇದು ಸಾಂಸ್ಕೃತಿಕ ಅನನ್ಯತೆಯೂ ಹೌದು ಎಂದರು.
ಅಲ್ಲಮ ಪ್ರಭು ಅವರು ವಚನದ ಮೂಲಕ ತೋರಿಕೆಯ ಭಕ್ತಿಯನ್ನು ಅಂದೇ ಖಂಡಿಸಿದ್ದರು. ಆದರೆ ಕೆಲವೊಂದು ಭಕ್ತಿ ಪಂಥಗಳು ಅಸಹ್ಯವಾಗಿ ಹುಟ್ಟಿಕೊಳ್ಳುತ್ತಿವೆ. ಭಕ್ತಿ ಎನ್ನುವುದು ಸ್ವತಂತ್ರವಾದ ಅಲೆಯಾಗಿದೆ ಎಂದು ಹೇಳಿದರು.
ಭಾರತೀಯ ಸಂಸ್ಕೃತಿಯ ಭಾಗವಾಗಿರುವ ಭಕ್ತಿ ಪರಂಪರೆಯ ಬಗ್ಗೆ ಇಂದಿನ ಕಾಲಘಟ್ಟದಲ್ಲಿ ಸರಿಯಾದ ರೀತಿಯಲ್ಲಿ ಅರ್ಥಮಾಡಿಕೊಂಡು ಮುನ್ನಡೆಯಬೇಕು. ಈ ನಿಟ್ಟಿನಲ್ಲಿ ಹೆಚ್ಚೆಚ್ಚು ಅಧ್ಯಯನಗಳು ನಡೆಯಬೇಕಿದೆ ಎಂದು ಅವರು ಹೇಳಿದರು.
ಕುಲಪತಿ ಪ್ರೊ| ಕೆ. ಭೈರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ಸಹಿತ ದೇಶದ ಸಂತ ಕವಿಗಳ ಕಾವ್ಯ, ಸಾಹಿತ್ಯದ ಬಗ್ಗೆ ಇಂದಿನ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ನಮ್ಮ ನಾಡಿನ ಸಾಂಸ್ಕೃತಿಕ ಏಕತೆ ಹಾಗೂ ಅನನ್ಯತೆ ಬಗ್ಗೆ ಹೆಚ್ಚು ಅಧ್ಯಯನಗಳ ಮೂಲಕ ಮುನ್ನಡೆಯಬೇಕಿದೆ ಎಂದರು.
ವಿವಿ ಕನಕದಾಸ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ| ಬಿ. ಶಿವರಾಮ ಶೆಟ್ಟಿ ಸ್ವಾಗತಿಸಿದರು. ಸಂಶೋಧನ ವಿದ್ಯಾರ್ಥಿ ಶಿವರಾಜ್ ನಿರೂಪಿಸಿದರು. ಸಂಶೋಧನ ವಿದ್ಯಾರ್ಥಿನಿ ಶ್ರೀದೇವಿ ಕಲ್ಲಡ್ಕ ಕನಕದಾಸರ ಕೀರ್ತನೆಗಳನ್ನು ಹಾಡಿದರು. ಸಭಾ ಕಾರ್ಯಕ್ರಮದ ಬಳಿಕ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನಕ ಗಂಗೋತ್ರಿ ಕೀರ್ತನ ಗಾಯನ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ