ಮೋಟಾರು ಕಾಯ್ದೆಯಡಿ ಅನಗತ್ಯ ಪ್ರಕರಣ ದಾಖಲು
Team Udayavani, Jul 16, 2019, 5:54 AM IST
ಸುಳ್ಯ: ತಾಲೂಕಿನ ಬೆಳ್ಳಾರೆ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ, ಪಂಜ, ಕಲ್ಲುಗುಂಡಿ ಪ್ರದೇಶದಲ್ಲಿ ಆಟೋ ಚಾಲಕರನ್ನು ಅನಗತ್ಯವಾಗಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸು ತ್ತಿರುವುದು ಸಂಘದ ಗಮನಕ್ಕೆ ಬಂದಿದ್ದು, ಅದನ್ನು ಕೈ ಬಿಡುವಂತೆ ಆಗ್ರಹಿಸಿ ಬಿಎಂಎಸ್ ಪ್ರಾಯೋಜಿತ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ವೃತ್ತ ನಿರೀಕ್ಷರಿಗೆ ಮತ್ತು ಪೊಲೀಸ್ ಉಪ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಗಿದೆ.
ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸಂದರ್ಭ ರಿಕ್ಷಾ ಚಾಲಕರ ಮೇಲೆ ಮೋಟಾರು ವಾಹನ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತಿದೆ. ಸಂಚಾರಿ ಹಾಗೂ ಮೋಟಾರು ವಾಹನ ಕಾಯ್ದೆಯನ್ನು ನಿರ್ದಿಷ್ಟವಾಗಿ ಆಟೋ ರಿಕ್ಷಾ ಚಾಲಕರ ಮೇಲೆ ವಿಧಿಸಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ.
ಇದನ್ನು ಸಂಘ ವಿರೋಧಿಸುತ್ತದೆ. ಸಂಚಾರ ಮತ್ತು ಮೋಟಾರು ವಾಹನ ಕಾಯ್ದೆ ಇತರ ವಾಹನಗಳಿಗೆ ಜಾರಿ ಮಾಡದೆ ಆಟೋ ರಿಕ್ಷಾ ಚಾಲಕರ ಮೇಲೆ ಮಾತ್ರ ಜಾರಿ ಮಾಡಿದ್ದು, ಈಗ ಆಗುತ್ತಿರುವ ತೊಂದರೆ ಸರಿಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆ ಆಗ್ರಹಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಕೋಶಾಧಿಕಾರಿ ಗಿರೀಶ್, ಮಾಜಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ, ಸದಸ್ಯರಾದ ಮೋಹನ್ ಚೊಕ್ಕಾಡಿ, ಉದಯ ಕುಮಾರ್ ಮೇನಾಲ, ಪ್ರಕಾಶ್, ವಿನಯ ಕುಮಾರ್, ಹರ್ಷಿತ್, ಮೋಹನ್, ಪ್ರಶಾಂತ್, ನಾರಾಯಣ ಮುಳ್ಯ, ಸಂತೋಷ್, ಜಗದೀಶ್, ಸುಧಾಕರ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು