ದುರಸ್ತಿಯಾಗದ ನೀರಿನ ಪೈಪ್ಲೈನ್
Team Udayavani, Jul 11, 2019, 5:22 AM IST
ಮಹಾನಗರ: ರವಿವಾರ ರಾತ್ರಿ ತುಂಬೆಯಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ಕಣ್ಣೂರಿನಲ್ಲಿ ಸೋರಿಕೆಯಾಗಿದ್ದು, ಇದರ ದುರಸ್ತಿ ಕಾಮಗಾರಿಗೆ ಬುಧವಾರವೂ ಮಳೆ ಅಡ್ಡಿಯಾಗಿದೆ.
ಬುಧವಾರ ಬೆಳಗ್ಗೆಯಿಂದಲೇ ನಿರಂತರವಾಗಿ ಮಳೆಯಾದ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಡ ಚಣೆಯಾಗಿದೆ. ಪೈಪ್ ದುರಸ್ತಿಗಾಗಿ ತೋಡಿರುವ ಗುಂಡಿಯಲ್ಲಿ ನೀರು ತಂಬುತ್ತಿದೆ. ಈ ಹಿನ್ನೆಲೆ ಯಲ್ಲಿ ಬುಧವಾರವೂ ನಗರದ ಹಲವು ಭಾಗಗಳಿಗೆ ನೀರು ಸರಬರಾಜು ಸ್ಥಗಿತವಾಗಿದೆ.
ಎರಡು ದಿನಗಳಿಂದ ಒಡೆದಿರುವ ಪೈಪ್ನ ಒಳಗಿರುವ ನೀರನ್ನು ಪಂಪ್ ಬಳಸಿ ತೆಗೆಯಲಾಯಿತು. ಪ್ರಸ್ತುತ ಮಳೆಯಿಂದಾಗಿ ನೀರಿನ ಒಸರು ಗುಂಡಿಯಲ್ಲಿ ತುಂಬುತ್ತಿದೆ. ಮೂರು ಪಂಪ್ ಬಳಸಿ ನೀರು ತೆರವುಗೊಳಿಸಲಾಗುತ್ತಿದೆ. ಮಳೆ ಕಡಿಮೆಯಾದರೆ ಗುರುವಾರ ಸಂಜೆಯೊಳಗೆ ಕಾಮಗಾರಿ ಪೂರ್ಣ ಗೊಳಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ರವಿವಾರ ರಾತ್ರಿಯಿಂದ ನಗರಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದ್ದು, ಕೆಲವು ಭಾಗಗಳಿಗೆ ಪಾಲಿಕೆಯಲ್ಲಿರುವ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ