ಅವೈಜ್ಞಾನಿಕ ಕಾಮಗಾರಿ ಮರಗಳ ಮಾರಣಹೋಮ!


Team Udayavani, May 28, 2018, 5:50 AM IST

maranahoma-27-5.jpg

ಪುತ್ತೂರು: ಮಾಣಿ- ಮೈಸೂರು ಹೆದ್ದಾರಿ ಕಾಮಗಾರಿ, ನಗರಸಭೆ ವ್ಯಾಪ್ತಿಯ ರಸ್ತೆ ವಿಸ್ತರಣೆ, ಗ್ರಾಮಾಂತರ ಭಾಗದ ರಸ್ತೆ ಅಭಿವೃದ್ಧಿ… ಇಂತಹ ಕಾಮಗಾರಿಗಳನ್ನು ಅವೈಜ್ಞಾನಿಕವಾಗಿ ಮಾಡುವುದರಿಂದ ಮರಗಳ ಮಾರಣ ಹೋಮ ಸಂಭವಿಸುವ ಭೀತಿ ಸೃಷ್ಟಿಯಾಗಿದೆ. ಪುತ್ತೂರು- ಸುಳ್ಯ ಸಹಿತ ಜಿಲ್ಲೆಯ ಗ್ರಾಮಾಂತರ ತಾಲೂಕುಗಳ ಹೆದ್ದಾರಿಗಳು ಗುಡ್ಡಗಾಡು ಪ್ರದೇಶ, ಅರಣ್ಯದ ನಡುವೆ ಸಾಗುತ್ತವೆ. ರಸ್ತೆ ವಿಸ್ತರಣೆ ಸಂದರ್ಭ ಕೆಲ ಮರಗಳನ್ನು ತೆರವು ಮಾಡುವುದು ಅನಿವಾರ್ಯ. ನೇರವಾಗಿ ಗುಡ್ಡ ಸವರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಗುಡ್ಡದ ಅಂಚಿನಲ್ಲಿರುವ ಮರಗಳು ಮಳೆ ರಭಸಕ್ಕೆ ರಸ್ತೆಗೆ ಉರುಳಿ ಬೀಳುವಂತಾಗಿವೆ.

ಸವಕಳಿ ತಡೆಗಟ್ಟುವ ದೃಷ್ಟಿಯಿಂದ ಗುಡ್ಡವನ್ನು ಜಾರು ಆಕೃತಿಯಲ್ಲಿ ತುಂಡರಿಸಬೇಕು. ನೇರವಾಗಿ ಗುಡ್ಡವನ್ನು ಸವರುವುದರಿಂದ, ಗುಡ್ಡ ಕುಸಿಯುತ್ತಾ ಬರುತ್ತವೆ. ಅಂಚಿನಲ್ಲಿರುವ ಮರಗಳು ರಸ್ತೆಗೆ ಅಡ್ಡ ಬೀಳುತ್ತವೆ. ಜೀವ ಹಾನಿ, ಆಸ್ತಿ ಹಾನಿ ಸಂಭವಿಸುವ ಅಪಾಯವೂ ಹೆಚ್ಚು. ಮಾಣಿ- ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲಾಗಿದೆ. ಅಲ್ಲಲ್ಲಿ ಗುಡ್ಡಗಳನ್ನು ಸವರುವ ಕೆಲಸವೂ ನಡೆಸಲಾಗಿದೆ. ಬಹುತೇಕ ಗ್ರಾಮಾಂತರ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಎಂಜಿನಿಯರ್‌ ಗಳು ಅವೈಜ್ಞಾನಿಕವಾಗಿ ಗುಡ್ಡ ಸವರಿದ್ದರಿಂದ ಸಮಸ್ಯೆ ಸೃಷ್ಟಿಯಾಗುವ ಭೀತಿ ಎದುರಾಗಿದೆ.

ಸಾಗರ್‌ ಎಫೆಕ್ಟ್ ಭೀತಿ!
ಸಾಗರ್‌ ಚಂಡಮಾರುತದ ಪರಿಣಾಮ ಮಳೆ ಶುರುವಾಗಿದೆ. ಗುಡುಗು- ಮಳೆಯ ಜತೆಗೆ ವಿಪರೀತ ಗಾಳಿ ತಾಂಡವ ಆಡುತ್ತಿದೆ. ಇದರ ಪ್ರಭಾವಕ್ಕೆ ಹಲವು ಮರಗಳು ಧರಾಶಾಹಿ ಆಗುವ ಹಂತಕ್ಕೆ ತಲುಪಿವೆ. ಹಲವು ಮರಗಳು ಆಗಲೇ ರಸ್ತೆಗೆ ಉರುಳಿ ಬಿದ್ದಿವೆ. ಇದನ್ನು ತೆರವು ಮಾಡುವ ಜತೆಗೆ, ಅಪಾಯ ಎದುರಾಗಲಿರುವ ಮರಗಳ ಬಗ್ಗೆಯೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ. ಮಳೆಗಾಲಕ್ಕೆ ಮೊದಲೇ ಈ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ಚುನಾವಣಾ ಗಡಿಬಿಡಿಯಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ.

ಗುಡ್ಡದ ಮಣ್ಣು ರಸ್ತೆಗೆ
ಗ್ರಾಮಾಂತರ ಭಾಗದಲ್ಲಿ ಗುಡ್ಡದ ಮಣ್ಣು ಮಳೆ ನೀರಿನೊಂದಿಗೆ ರಸ್ತೆಗೆ ಬರುತ್ತಿದೆ. ಸಂಪ್ಯದ ಆರ್ಯಾಪು ಹಿ.ಪ್ರಾ. ಶಾಲಾ ಮುಂಭಾಗದ ಹೆದ್ದಾರಿ ತೋಡಿನಂತಾಗಿ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಸವರಿದ್ದು, ರಸ್ತೆ ಬದಿಯಲ್ಲಿ ಮಣ್ಣು ಹಾಕಿದ್ದು, ಇದ್ದರೂ ಬಳಕೆಗೆ ಬಾರದ ಚರಂಡಿ ಎಲ್ಲವೂ ಸಮಸ್ಯೆಗೆ ಕಾರಣ. ಮೊದಲ ಮಳೆಗೆ ಇಷ್ಟು ಸಮಸ್ಯೆ. ಮುಂಗಾರು ಪ್ರವೇಶಿಸುವಾಗ ಹೇಗೋ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿದ್ದ ಮೇಲಷ್ಟೇ…
ಮಾರ್ಚ್‌ – ಎಪ್ರಿಲ್‌ ಹೊತ್ತಿಗೆ ಅಪಾಯಕಾರಿ ಮರಗಳ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸುತ್ತಿದ್ದರೆ, ಇಷ್ಟರಲ್ಲಿ ಸೂಕ್ತ ವ್ಯವಸ್ಥೆ ಆಗಿರುತ್ತಿತ್ತು. ಮಳೆ ಬಂದ ಮೇಲೆ ಕೆಲ ಮರಗಳನ್ನು ಅಪಾಯಕಾರಿ ಎಂದು ಗುರುತಿಸಿ ಹೇಳುತ್ತಿದ್ದಾರೆ. ಇದರಿಂದ ನಾವೇನೂ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮರ ಬಿದ್ದ ಮೇಲಷ್ಟೇ ತೆರವು ಮಾಡುವ ಕೆಲಸ ಮಾಡಬೇಕು. ಇದನ್ನು ಪ್ರಕೃತಿ ವಿಕೋಪದಲ್ಲಿ ಸಂಭವಿಸಿದ ಘಟನೆ ಎಂದಷ್ಟೇ ನಾವು ಪರಿಗಣಿಸುತ್ತೇವೆ.
– ವಿ.ಪಿ. ಕಾರ್ಯಪ್ಪ, ವಲಯ ಅರಣ್ಯಾಧಿಕಾರಿ, ಪುತ್ತೂರು

— ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.