‘ಸ್ಮಾರ್ಟ್ ಸಿಟಿ’ಯೊಳಗೊಂದು ದುರ್ನಾತದ ತೋಡು


Team Udayavani, Apr 8, 2018, 10:49 AM IST

8-April-6.jpg

ಮಹಾನಗರ: ಸ್ಮಾರ್ಟ್‌ಸಿಟಿ ಹೊಂಗನಸಿನಲ್ಲಿರುವ ಮಂಗಳೂರಿನ ಮುಖ್ಯ ಭಾಗದಲ್ಲಿ ಸಾಗುವ ತೋಡು ಕಸ, ಕಡ್ಡಿ, ತ್ಯಾಜ್ಯಗಳ ರಾಶಿಯಿಂದಾಗಿ ವಾಸನೆ ಹಾಗೂ ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುವ ಸ್ಥಿತಿಯಲ್ಲಿದೆ. ಸ್ವಚ್ಛ ಪರಿಸರದ ಬಗ್ಗೆ ಯೋಜನೆ ಕೈಗೊಳ್ಳಬೇಕಾದ ಆಡಳಿತ ವ್ಯವಸ್ಥೆ ಮಾತ್ರ ತೋಡಿನ ಸ್ಥಿತಿಯನ್ನು ಕಂಡೂ ಕಾಣದಂತೆ ವರ್ತಿಸುತ್ತಿದೆ. ಪರಿಣಾಮವಾಗಿ ಮಂಗಳೂರಿನ ಬಹುಮುಖ್ಯ ತೋಡಿನ ಪರಿಸರದಲ್ಲಿ ಗಬ್ಬು ವಾಸನೆ ಬರುತ್ತಿದೆ.

ಕುದ್ರೋಳಿ ಸಮೀಪದಲ್ಲಿ ಹರಿದು ಹೋಗುವ ಅಳಕೆ ತೋಡಿನಲ್ಲಿ ತ್ಯಾಜ್ಯ ತುಂಬಿ ಕೊಳೆತ ವಾಸನೆ ಪರಿಸರದ ಹರಡಿದೆ. ಸಮೀಪ ನೂತನ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣದಿಂದ ಇಲ್ಲಿನ ತೋಡಿನ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ, ಅಳಕೆ ವ್ಯಾಪ್ತಿಯಲ್ಲಿ ಕಸ, ಕಡ್ಡಿ, ತ್ಯಾಜ್ಯಗಳು ತುಂಬಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ಲಾಸ್ಟಿಕ್‌ ರಾಶಿ
ನಗರದ ಮಧ್ಯೆ ಹಾದುಹೋಗುವ ಈ ತೋಡಿಗೆ ನಿತ್ಯ ಪ್ಲಾಸ್ಟಿಕ್‌ ಎಸೆಯುವವರ ಸಂಖ್ಯೆ ಇಲ್ಲಿ ಕಡಿಮೆಯಾಗಿಲ್ಲ. ಕಸ, ಪ್ಲಾಸ್ಟಿಕ್‌ ಎಲ್ಲ ಸೇರಿಕೊಂಡು ನೀರೆಲ್ಲ ಇಲ್ಲಿ ಮಲಿನವಾಗಿದೆ. ತೊರೆಯ ಪಕ್ಕದಲ್ಲಿ ನಡೆದುಕೊಂಡು ಹೋಗಲು ಕೂಡ ಕಷ್ಟವಾಗಿದೆ. ಈ ತೋಡಿನ ಸಮೀಪದಲ್ಲಿಯೇ ಹಲವಾರು ಮನೆಗಳಲ್ಲಿ ಜನರು ವಾಸವಾಗಿದ್ದು, ನಿತ್ಯ ಅವರೆಲ್ಲ ವಾಸನೆಯಿಂದ ಸಂಕಷ್ಟ ಎದುರಿಸಬೇಕಾಗಿದೆ.

ತೋಡಿನ ನೀರು ಕಪ್ಪಾಗಿದ್ದು, ನೋಡುವಾಗಲೇ ವಿಷಮಯ ಸ್ಥಿತಿ ಸ್ಪಷ್ಟವಾಗುತ್ತದೆ. ಈ ಮಧ್ಯೆ ಅಳಕೆಯ ತೋಡಿನ ನೀರು ಕುದ್ರೋಳಿ ದಾಟಿ, ಫಲ್ಗುಣಿ ನದಿಗೆ ಸೇರುತ್ತದೆ. ಮೊದಲೇ ವಾಸನೆಯಿಂದ ಕೂಡಿದ ತೋಡಿನ ನೀರಿನಿಂದಾಗಿ ಫಲ್ಗುಣಿಯ ಕಥೆ ಏನಾಗಬಹುದು ಎಂಬ ಆತಂಕ ಪರಿಸರವಾಸಿಗಳದ್ದು.

ಹಿಂದೆ ಈಜು ಕಲಿಸಿದ ತೋಡು..!
ಕುದ್ರೋಳಿ ವ್ಯಾಪ್ತಿಯ ಈ ತೋಡು ಹಲವು ವರ್ಷದ ಹಿಂದೆ ಮಕ್ಕಳಿಗೆ ಈಜು ಕಲಿಕಾ ಕೇಂದ್ರವೂ ಆಗಿತ್ತಂತೆ! ಅಂದರೆ ಅಷ್ಟು ಪರಿಶುದ್ಧವಾಗಿ ಇಲ್ಲಿ ನೀರಿನ ಹರಿವಿತ್ತು. ಹಲವು ವಿದ್ಯಾರ್ಥಿಗಳು, ಮಕ್ಕಳು ಇದೇ ನೀರಿನಲ್ಲಿ ಈಜಾಟವಾಡುತ್ತಿದ್ದರು ಎಂದು ಸ್ಥಳೀಯ ಹಿರಿಯರೊಬ್ಬರು ನೆನಪು ಮಾಡುತ್ತಾರೆ. ಆದರೆ, ಈಗ ಪರಿಸ್ಥಿತಿ ಇಲ್ಲಿ ಬದಲಾವಣೆಗೊಂಡಿದೆ. ಮನೆ, ಅಂಗಡಿಯ ಕಸ, ತ್ಯಾಜ್ಯ, ಪ್ಲಾಸ್ಟಿಕ್‌ ಸಾಮಗ್ರಿಗಳೆಲ್ಲ ಈ ನೀರಿನಲ್ಲಿ ವಿಲೀನಗೊಂಡಿದೆ.

ಸ್ಮಾರ್ಟ್‌ ಸಿಟಿಯಾಗಲು ಹೊರಟಿರುವ ಮಂಗಳೂರಿಗೆ ಇದು ಭೂಷಣ ಅಲ್ಲ. ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಆಲಯವಾಗುತ್ತಿರುವ ನಗರದಲ್ಲಿ ತೋಡುಗಳ ಸ್ವತ್ಛತೆಗೆ ವಿಶೇಷ ಒತ್ತು ನೀಡದಿದ್ದರೆ, ಸರ್ವರಿಗೂ ಆರೋಗ್ಯ ಎಂಬ ಪರಿಕಲ್ಪನೆ ಪರಿಪೂರ್ಣಗೊಳ್ಳುವುದು ಹೇಗೆ ಎಂಬುದಕ್ಕೆ ಪಾಲಿಕೆ ಉತ್ತರ ನೀಡಬೇಕಾಗಿದೆ.

11 ಕೋ.ರೂ.ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ 
ಡೊಂಗರಕೇರಿ ವಾರ್ಡ್‌ಗೆ ಸಂಬಂಧಪಟ್ಟ ಮಣ್ಣಗುಡ್ಡ ದುರ್ಗಾಮಹಲ್‌ನಿಂದ ಕಾರ್‌ಸ್ಟ್ರೀಟ್‌ವರೆಗೆ 11 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬಹುತೇಕ ಭಾಗದ ರಸ್ತೆ ಕಾಂಕ್ರೀಟ್‌ ಕೆಲಸ ಪೂರ್ಣಗೊಂಡಿದೆ. ಇದೇ ಅನುದಾನದಲ್ಲಿ ಅಳಕೆ ಸೇತುವೆಯೂ ನಿರ್ಮಾಣವಾಗುತ್ತಿದೆ. ರಸ್ತೆ ನಿರ್ಮಾಣಕ್ಕೆ ಯೋಜನೆ ಮಾಡಿದಾಗ ಅಳಕೆ ಸೇತುವೆ ಪಿಲ್ಲರ್‌ ಹಾಕಿ ನಿರ್ಮಿಸಲು ನಕ್ಷೆ ರಚಿಸಲಾಗಿತ್ತು. 10.5 ಮೀ.ಗಿಂತ ಹೆಚ್ಚು ಉದ್ದ ಇದ್ದರೆ ಪಿಲ್ಲರ್‌ ಹಾಕಿಯೇ ನಿರ್ಮಿಸಬೇಕಿದೆ. ಪ್ರಸ್ತುತ ಸೇತುವೆ 13 ಮೀ. ಉದ್ದ ಇದೆ. ಆದ್ದರಿಂದ ಎನ್‌ಐಟಿಕೆ ತಜ್ಞರಿಂದ ಹೊಸ ನಕ್ಷೆ ತಯಾರಿಸಿ ಸರಕಾರದಿಂದ ಅನುಮೋದನೆ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈಗ ಸೇತುವೆ ಕಾಮಗಾರಿ ನಡೆಯುತ್ತಿದೆ. 

ದಿನೇಶ್‌ ಇರಾ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.