Harekala Newpadpu ಪದವಿ ಪೂರ್ವ ಕಾಲೇಜು ಮಂಜೂರು: ಪದ್ಮಶ್ರೀ ಅಕ್ಷರ ಸಂತ ಹಾಜಬ್ಬ ಕನಸು ನನಸು
Team Udayavani, Feb 4, 2024, 11:24 PM IST
ಉಳ್ಳಾಲ: ಅಕ್ಷರ ಸಂತ ಎಂದೇ ಪ್ರಸಿದ್ಧಿ ಪಡೆದಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಮನವಿ ಮೇರೆಗೆ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯನ್ನು ಉನ್ನತೀಕರಿಸಿದ ಸರಕಾರಿ ಪದವಿಪೂರ್ವ ಕಾಲೇಜು ಆರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆದೇಶ ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪ.ಪೂ. ಕಾಲೇಜು ಸ್ಥಳೀಯ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.
ರ್ಯಾಪಾಲರ ಆದೇಶದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ)ಯ ಅದೀನ ಕಾರ್ಯದರ್ಶಿ ಪದ್ಮನಿ ಎಸ್. ರಾವ್ ಹೊರಡಿಸಿರುವ ಆದೇಶ ಪತ್ರ ಹಾಜಬ್ಬ ಅವರ ಕೈ ಸೇರಿದೆ.
ಸರಕಾರಿ ಶಾಲೆಯ ಅಭಿವೃದ್ಧಿಗೆ ಹರೇಕಳದಂತಹ ಗ್ರಾಮೀಣ ಪ್ರದೇಶದಲ್ಲಿ ಬಡ ವಿದ್ಯಾರ್ಥಿಗಳ ಅಕ್ಷರದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕಿತ್ತಳೆ ವ್ಯಾಪಾರ ಮಾಡುತ್ತಿದ್ದ ಹಾಜಬ್ಬ ಅವರ ಶ್ರಮಕ್ಕೆ ಹಲವಾರು ಪ್ರಶಸ್ತಿಗಳೊಂದಿಗೆ ದೇಶದ ಅತ್ಯನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದರು. ಪ್ರಥಮಿಕ ಶಾಲೆಯಾಗಿದ್ದ ನ್ಯೂಪಡಿ³ನಲ್ಲಿ ಪ್ರೌಢಶಿಕ್ಷಣ ಆರಂಭಿಸುವಲ್ಲಿ ಯಶಸ್ವಿಯಾಗಿದ್ದ ಹಾಜಬ್ಬ 2013ರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು