ಸಾಕಾರದ ನಿರೀಕ್ಷೆಯಲ್ಲಿ  ಮೇಲ್ದರ್ಜೆ ಬೇಡಿಕೆ


Team Udayavani, Apr 14, 2017, 2:42 PM IST

1304mlr31-lady-goshen-hospi.jpg

ಮಹಾನಗರ: ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲ ಸುಮಾರು 6 ಜಿಲ್ಲೆಗಳ ಬಡ ರೋಗಿಗಳ ಪಾಲಿಗೆ ಆಶಾಕಿರಣವಾದ ಲೇಡಿಗೋಶನ್‌ ಆಸ್ಪತ್ರೆಯನ್ನು 500 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಪೂರಕವಾಗಿ ಇತರ ಸೌಲಭ್ಯಗಳು ನಿರ್ಮಾಣವಾಗುತ್ತಿದ್ದು, ಸರಕಾರ ಒಪ್ಪಿಗೆ ನೀಡಬೇಕಿದೆ. 

ಕಟ್ಟಡ ಸಾಮರ್ಥ್ಯ ಹೆಚ್ಚಳ ಸಹಿತ ವಿವಿಧ ಸೌಲಭ್ಯಗಳನ್ನು ಒದಗಿಸ ಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರ 500 ಹಾಸಿಗೆ ಸಾಮರ್ಥ್ಯಕ್ಕೇರಿಸಿ ಒಪ್ಪಿಗೆ ನೀಡಿದರೆ ನೂರಾರು ಜನರಿಗೆ ಅನುಕೂಲವಾಗಲಿದೆ. ಆಸ್ಪತ್ರೆಯಲ್ಲಿ  ಪ್ರಸ್ತುತ 272 ಹಾಸಿಗೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಂದ  ವಾರ್ಷಿಕ 50 ಸಾವಿರಕ್ಕಿಂತಲೂ ಅಧಿಕ ಹೊರ ರೋಗಿಗಳು, ಸುಮಾರು 15 ಸಾವಿರ ಒಳರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. 

ಸರಕಾರಿ ಆಸ್ಪತ್ರೆಯಾದರೂ ತಜ್ಞ ವೈದ್ಯರು, ಉತ್ತಮ ಸೌಲಭ್ಯ ಇರುವು ದರಿಂದ ಬಡ ವರ್ಗದ ಮಹಿಳೆಯರು ಇಲ್ಲಿಗೆ ಚಿಕಿತ್ಸೆಗೆಂದು ಬರುತ್ತಿದ್ದು, ವಾರ್ಷಿಕ 7 ಸಾವಿರದಷ್ಟು ಹೆರಿಗೆಗಳಾಗುತ್ತಿವೆ. ಆಸ್ಪತ್ರೆಯ ಆವರಣದಲ್ಲೇ  ರೆಡ್‌ಕ್ರಾಸ್‌ ಸಂಸ್ಥೆಯ ಬ್ಲಿಡ್‌ ಬ್ಯಾಂಕ್‌ ಇದೆ. 

ಆಸ್ಪತ್ರೆಗೆ  ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಹಾಸಿಗೆ ಸಾಮರ್ಥ್ಯವನ್ನು ಏರಿಸಬೇಕೆಂಬುದು ನಾಗರಿಕರ ಬೇಡಿಕೆ. ಈಗ ರೋಗಿಗಳ ಸಂಖ್ಯೆ ಜಾಸ್ತಿಯಾ ದಾಗ ಹಾಸಿಗೆಗಳನ್ನು ಹೊಂದಿಸುವುದೇ ದೊಡ್ಡ ಸಮಸ್ಯೆ. ಒಳರೋಗಿ ಸಾಮರ್ಥ್ಯ ವನ್ನು ಕನಿಷ್ಠ 500ಕ್ಕಾದರೂ ಏರಿಸಿದರೆ ಈ ಸಮಸ್ಯೆಗೆ ಕೊಂಚ ಪರಿಹಾರ ಸಿಗಲಿದೆ. ಜತೆಗೆ ಹಲವಾರು ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದೆ.

60 ಹಾಸಿಗೆಗಳ ಎಂಸಿಎಚ್‌ ಬ್ಲಾಕ್‌
ಪ್ರಸ್ತುತ  ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಎನ್‌ಆರ್‌ಎಚ್‌ಎಂ ಯೋಜನೆಯಡಿ ನಿರ್ಮಾಣವಾ ಗುತ್ತಿರುವ 10.46 ಕೋ.ರೂ. ವೆಚ್ಚದ‌ ಎಂಸಿಎಚ್‌ ( ತಾಯಿ ಮತ್ತು ಮಗು ಆರೋಗ್ಯ ) ವಿಭಾಗ   60 ಹಾಸಿಗೆಗಳ ಸಾಮರ್ಥ್ಯವನ್ನು  ಹೊಂದಿದೆ. ಸೆಲ್ಲರ್‌, ನೆಲಮಹಡಿ ಹಾಗೂ 1ನೇ ಮಹಡಿ ಯನ್ನು  ಒಳಗೊಂಡಿದ್ದು  ಒಟ್ಟು 3,989 ಚ.ಮಿ. ವಿಸ್ತೀರ್ಣ ಹೊಂದಿದೆ. ಸೆಲ್ಲರ್‌ನಲ್ಲಿ  ಆಡುಗೆ ಕೋಣೆ , ಔಷಧ ಮಳಿಗೆ ಇರಲಿದ್ದು, 756 ಚದರ ಮೀ. ವಿಸ್ತೀರ್ಣವಿದೆ.  ನೆಲಮಹಡಿ ಹಾಗೂ  ಮೊದಲ ಮಹಡಿಯಲ್ಲಿ  ವಾರ್ಡ್‌, ಒಪಿಡಿ,  ಶಸ್ತ್ರಚಿಕಿತ್ಸಾ ಕೊಠಡಿ,  ಕನ್ಸಲ್ಟೆನ್ಸಿ ವಿಭಾಗಗಳಿರುತ್ತವೆ. ಮುಂದಿನ ವರ್ಷ ಸಾರ್ವಜನಿಕರಿಗೆ ಈ ವಿಭಾಗ ಲಭ್ಯವಾಗುವ ಸಾಧ್ಯತೆಯಿದೆ. ಇದು ಬಳಕೆಗೆ ನಿಲುಕಿದರೆ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳಿಗೆ ಲೇಡಿಗೋಷನ್‌ ಅನ್ನು ಅಶ್ರಯಿಸುವವರು ಕಡಿಮೆಯಾಗಬಹುದು. 

ಹೊಸ ಕಟ್ಟಡ 3 ತಿಂಗಳಲ್ಲಿ ಕಾರ್ಯಾರಂಭ ನಿರೀಕ್ಷೆ 
ಒಎನ್‌ಜಿಸಿ- ಎಂಆರ್‌ಪಿಎಲ್‌ ನೆರವಿ ನೊಂದಿಗೆ 21.70 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ  ಹೊಸ ಕಟ್ಟಡ 3 ತಿಂಗಳೊಳಗೆ ಕಾರ್ಯಾರಂಭ ಮಾಡುವ ನಿರೀಕ್ಷೆ  ಇದೆ. 1.30 ಲಕ್ಷ ಚದರ ಅಡಿ ವಿಸ್ತೀರ್ಣದ 5 ಮಹಡಿಗಳ  ಈ  ಕಟ್ಟಡದಲ್ಲಿ  226 ಹಾಸಿಗೆಗಳು, ಅತ್ಯಾಧುನಿಕ ಸೌಲಭ್ಯಗಳನ್ನು   ಒಳಗೊಂಡಿದೆ. ಸೌಲಭ್ಯ ಹಾಗೂ ಸಲಕರಣೆಗಳ ಅಳವಡಿಕೆಗೆ ರಾಜ್ಯ ಸರಕಾರದಿಂದ  ಈಗಾಗಲೇ 10 ಕೋ.ರೂ. ಬಿಡುಗಡೆಯಾಗಿದೆ. ಇದು ಉದ್ಘಾಟನೆಯಾದ ಬಳಿಕ  ಈಗ ಇರುವ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತಿ ರುವ  ಬಹುತೇಕ ವಿಭಾಗಗಳು ಇಲ್ಲಿಗೆ ವರ್ಗಾವಣೆಯಾಗಲಿವೆ.

500 ಬೆಡ್‌ಗೆ ಸ್ಥಳಾವಕಾಶ ಸಾಧ್ಯ
ಈಗ ಇರುವ  ಹಳೆ ಕಟ್ಟಡದಲ್ಲಿ ಮತ್ತು  ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ  500 ಹಾಸಿಗೆಗಳನ್ನು ಅಳವಡಿಸಲು ಸಾಧ್ಯವಿದೆ. ಹೊಸ ಕಟ್ಟಡದಲ್ಲಿ ಅತ್ಯಾಧುನಿಕ ಸೌಲಭ್ಯಗಳೂ ಲಭ್ಯವಾಗಲಿವೆ. ಅದುದರಿಂದ 500 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು  ಸರಕಾರಕ್ಕೆ  ಹೆಚ್ಚಿನ ಹೊರೆಯಾಗದು. ಈ  ನಿಟ್ಟಿನಲ್ಲಿ  ಸರಕಾರದಿಂದ ಮಂಜೂರಾತಿ ಪಡೆಯುವ ನಿಟ್ಟಿನಲ್ಲಿ ಪೂರಕ ಕ್ರಮಗಳು ಅವಶ್ಯವಿದೆ.  

– ಕೇಶವ ಕುಂದರ್‌ 

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.