ಉಪ್ಪಿನಂಗಡಿ: ಪ್ರವಾಹ ಸ್ಥಿತಿ ಎದುರಿಸಲು ರಕ್ಷಣಾ ತಂಡ ಸನ್ನದ್ಧ


Team Udayavani, Aug 7, 2019, 5:13 AM IST

s-34

ಉಪ್ಪಿನಂಗಡಿ: ಮುಂದಿನ ಎರಡು ದಿನ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಆದರೆ ಈ ಬಗ್ಗೆ ಜನತೆ ಭಯಭೀತರಾಗುವ ಅಗತ್ಯವಿಲ್ಲ. ತುರ್ತು ನೆರವಿಗೆ ಪ್ರವಾಹ ರಕ್ಷಣಾ ತಂಡ ಸನ್ನದ್ಧವಾಗಿದೆ ಎಂದು ಸಹಾಯಕ ಆಯುಕ್ತ ಡಾ| ಎಚ್.ಕೆ. ಕೃಷ್ಣಮೂರ್ತಿ ತಿಳಿಸಿದರು.

ನೇತ್ರಾವತಿ- ಕುಮಾರಧಾರಾ ನದಿಗಳ ಪ್ರವಾಹದ ಸ್ಥಿತಿಗತಿಯನ್ನು ವೀಕ್ಷಿಸಿ, ಪ್ರವಾಹ, ಪ್ರಾಕೃತಿಕ ವಿಕೋಪ ನಡೆದಾಗ ಕಾರ್ಯಾಚರಣೆಗೆ ತಂಡಗಳು ಸಿದ್ಧವಿವೆ. ತಹಶೀಲ್ದಾರ್‌, ತಾ.ಪಂ. ಇಒ ಗ್ರೇಡ್‌ನ‌ ಅಧಿಕಾರಿಗಳನ್ನು ನೆರೆ ಬಾಧಿತ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸ ಲಾಗಿದೆ. ಉಪ್ಪಿನಂಗಡಿಯಲ್ಲಿ ಪ್ರವಾಹ ರಕ್ಷಣಾ ತಂಡವಿದ್ದು, ಗೃಹರಕ್ಷಕ ದಳದ ಇಬ್ಬರು, ಕಂದಾಯ ಇಲಾಖೆಯ ಮೂವರು ಸಹಿತ ಒಟ್ಟು ಐವರು ನುರಿತ ಈಜುಗಾರರನ್ನು ನೇಮಿಸಲಾಗಿದೆ. ಎರಡು ದೋಣಿಗಳೊಂದಿಗೆ ರಕ್ಷಣಾ ಪರಿಕರಗಳನ್ನು ನೀಡಲಾಗಿದೆ ಎಂದರು.

ದ.ಕ.ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಪುತ್ತೂರು ತಹಶೀಲ್ದಾರ್‌ ಅನಂತಶಂಕರ್‌, ತಾ.ಪಂ. ಇಒ, ನೆರೆ ನಿರ್ವಹಣೆ ನೋಡಲ್ ಅಧಿಕಾರಿ ನವೀನ್‌ ಭಂಡಾರಿ, ಉಪ್ಪಿನಂಗಡಿ ಹೋಬಳಿ ಕಂದಾಯ ನಿರೀಕ್ಷಕ ಜಯವಿಕ್ರಮ್‌, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಇಒ ಹರಿಶ್ಚಂದ್ರ, ಗ್ರಾಮ ಸಹಾಯಕ ಯತೀಶ್‌, ಉಪ್ಪಿನಂಗಡಿ ಗ್ರಾ.ಪಂ. ಸಿಬಂದಿ ಮಹಾಲಿಂಗ, ಇಕ್ಬಾಲ್, ಇಸಾಕ್‌ ಉಪಸ್ಥಿತರಿದ್ದರು.

ಕಂಟ್ರೋಲ್ ರೂಮ್‌ ಸಂಪರ್ಕಿಸಲು ಸೂಚನೆ
ಅಧಿಕಾರಿಗಳನ್ನು ಕೇಂದ್ರ ಕಚೇರಿಯಲ್ಲೇ ಮೊಕ್ಕಾಂ ಇರಲು ಹಾಗೂ 24 ಗಂಟೆಯೂ ಮೊಬೈಲ್ ಸಂಪರ್ಕಕ್ಕೆ ಸಿಗುವಂತೆ ಸೂಚಿಸಲಾಗಿದೆ. ಅವಶ್ಯ ಬಿದ್ದಲ್ಲಿ ತತ್‌ಕ್ಷಣವೇ ಗಂಜಿ ಕೇಂದ್ರ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಅಗ್ನಿಶಾಮಕ ದಳವನ್ನೂ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇದು ದಿನದ 24 ಗಂಟೆಯೂ ಕಾರ್ಯಾಚರಿಸಲಿದೆ. ಸಾರ್ವಜನಿಕರು ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08251230349 ಸಂಪರ್ಕಿಸಬಹುದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಅಲರ್ಟ್‌ ಆಗಿದ್ದು, ಜಿಲ್ಲಾಧಿಕಾರಿಯವರು ಪ್ರತಿ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂದು ಡಾ| ಕೃಷ್ಣಮೂರ್ತಿ ತಿಳಿಸಿದರು.

ಹುಡುಗಾಟ ಬೇಡ

ಜಿಲ್ಲೆಯ ಜೀವನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ಯಿಂದಿರಬೇಕು. ನದಿಯ ಬದಿ ಹೋಗಿ ಹುಡುಗಾಟ ಮಾಡುವುದಾಗಲೀ, ಸೆಲ್ಫಿ ತೆಗೆಯುವುದಾಗಲಿ ಮಾಡಬಾರದು ಎಂದು ಡಾ| ಎಚ್.ಕೆ. ಕೃಷ್ಣಮೂರ್ತಿ ಮನವಿ ಮಾಡಿದರು

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.