ಉಪ್ಪಿನಂಗಡಿ: ನೀರು ದುರ್ಬಳಕೆ ತಡೆಗೆ ಕಾರ್ಯಾಚರಣೆ


Team Udayavani, Apr 13, 2017, 2:01 PM IST

124upg3.jpg

ಉಪ್ಪಿನಂಗಡಿ: ಗ್ರಾ.ಪಂ.ನ ಕುಡಿಯುವ ನೀರನ್ನು ದುರ್ಬಳಕೆ ಮಾಡು ವವರನ್ನು ಪತ್ತೆ ಹಚ್ಚಲು ಗುರುವಾರದಿಂದ ವಾರ್ಡ್‌ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಗ್ರಾ.ಪಂ.ನ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ತೀರ್ಮಾನಿಸಿದೆ.

ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಕಚೇರಿಯಲ್ಲಿ ಬುಧವಾರ ನಡೆದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ., ಕೆಲವರು ಪಂಚಾಯತ್‌ನ ಕುಡಿಯುವ ನೀರನ್ನು ಕೃಷಿ ಕಾರ್ಯಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಇನ್ನು ಕೆಲವು ಕಡೆ ಕುಡಿಯುವ ನೀರು ಅನಗತ್ಯವಾಗಿ ಪೋಲಾಗುತ್ತಿದೆ. ಬೇಸಗೆಯಲ್ಲಿ ಕುಡಿಯುವ ನೀರಿಗೆ ಕೊರತೆಯಿದ್ದು, ಆದ್ದರಿಂದ ನೀರನ್ನು ನಾಜೂಕಾಗಿ ಬಳಸಬೇಕು. ಅಗತ್ಯ ಕೆಲಸಗಳನ್ನು ಬಿಟ್ಟು ಇನ್ನಿತರ ಕಾರ್ಯಗಳಿಗೆ ಕುಡಿಯುವ ನೀರನ್ನು  ದುರ್ಬಳಕೆಯಾಗಬಾರದು. ಇದನ್ನು ತಡೆಯುವ ನಿಟ್ಟಿನಲ್ಲಿ ಗ್ರಾ.ಪಂ.ನ ಪ್ರತಿ ವಾರ್ಡ್‌ನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು ಕಾರ್ಯಾಚರಣೆ ನಡೆಸಲಿದ್ದಾರೆ. ನೀರು ದುರ್ಬಳಕೆಯಾಗುತ್ತಿರುವುದು ಕಂಡು ಬಂದಲ್ಲಿ. ಅಂಥವರ ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಮತ್ತೆ ಮಳೆಗಾಲ ಪ್ರಾರಂಭವಾಗುವವರೆಗೆ ಕುಡಿಯುವ ನೀರಿನ ಸಂಪರ್ಕ ನೀಡುವು ದಿಲ್ಲ. ನಾಳೆಯಿಂದಲೇ ಈ ಕಾರ್ಯಾಚರಣೆ ಆರಂಭವಾಗಲಿದೆ ಎಂದರು.

ಸಮಿತಿಯ ಕೋಶಾಧಿಕಾರಿ ಉಷಾ ಚಂದ್ರ ಮುಳಿಯ ಮಾತನಾಡಿ, ನೇತ್ರಾವತಿ ನದಿಯಲ್ಲಿ ಬಟ್ಟೆ ಒಗೆಯುವುದು, ವಾಹನಗಳನ್ನು ತೊಳೆಯುವುದು ಕಂಡು ಬರುತ್ತಿದೆ. ಇದರಿಂದಾಗಿ ಕುಡಿಯುವ ನೀರು ಮಲಿನಗೊಳ್ಳುತ್ತಿದೆ ಎಂದು ದೂರಿದರು.
 
ಅಧಿಕಾರಿ, ಸಿಬಂದಿ ತರಾಟೆಗೆ
ಸಭೆಗಳಲ್ಲಿ ನಿರ್ಣಯವಾದರೂ ಆ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶೀಘ್ರ ನಿರ್ಣಯ ಅನುಷ್ಠಾನವಾಗುವಂತೆ ಮಾಡುತ್ತಿಲ್ಲ ಎಂದು ಪಂಚಾಯತ್‌ನ ಅಧಿಕಾರಿಗಳನ್ನು ಪಂಚಾಯತ್‌ ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಈ ಸಂದರ್ಭ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಪಂಚಾಯತ್‌ ರಾಜ್‌ ಕಾಯ್ದೆಯನ್ನು ಉಲ್ಲಂಘಿಸಿದಂತೆ ಸೂಚಿಸಿದರು. 

ಸಮಿತಿ ಸದಸ್ಯ ಮುಹಮ್ಮದ್‌ ಕೆಂಪಿ ಮಾತನಾಡಿ, ಬಸ್‌ ನಿಲ್ದಾಣದ ಬಳಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದರಿಂದ ನದಿಗೆ ಮಲಿನ ನೀರು ಬಿಡುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜ್ಯೂನಿಯರ್‌ ಕಾಲೇಜಿನಿಂದ ಹಿಡಿದು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದವರೆಗೆ ಅಲ್ಲಲ್ಲಿ ಮಲೀನ ನೀರು ನದಿಯನ್ನು ಸೇರುತ್ತಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳ ಬೇಕೆಂಬ ಒತ್ತಾಯ ಕೇಳಿಬಂತು. 

ನದಿ ಮಲಿನಗೊಳಿಸದಂತೆ ಸೂಚಿಸುವ ನಾಮಫಲಕ
ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್‌ ಕೆ. ಮಾತನಾಡಿ, ನದಿ ನೀರನ್ನು ಮಲಿನಗೊಳಿಸುತ್ತಿರುವವ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಫ‌ಲಕವನ್ನು ನದಿ ಬದಿ ಅಲ್ಲಲ್ಲಿ ಅಳವಡಿಸುವಂತೆ ಪಿಡಿಒಗೆ ಸೂಚಿಸಿದರು. ನದಿ ತೀರದ ಬಳಿ ಡೇರೆ ಹಾಕಿಕೊಂಡು ವಾಸವಾಗಿರುವ ಕಾರ್ಮಿಕರಲ್ಲಿಗೆ ತೆರಳಿ ಅವರಿಗೆ ಎಚ್ಚರಿಕೆ ನೀಡಲು ನಿರ್ಣಯ ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.