ಉಪ್ಪಿನಂಗಡಿ ಹಳೆ ಬಸ್ಸ್ಟಾಂಡ್: 10 ತಿಂಗಳು ಕಳೆದರೂ ನಡೆಯದ ಕಾಮಗಾರಿ
Team Udayavani, Dec 20, 2022, 5:20 AM IST
ಉಪ್ಪಿನಂಗಡಿ: ಇಲ್ಲಿನ ಹಳೆ ಬಸ್ ಸ್ಟಾಂಡ್ನಲ್ಲಿ ಇಂಟರ್ಲಾಕ್ ಕಾಮಗಾರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನಡೆಸಿ 10 ತಿಂಗಳು ಕಳೆದರೂ ಅದು ಇನ್ನೂ ಆರಂಭವಾಗದಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಲಾರಂಭಿಸಿದ್ದಾರೆ.
ಇಲ್ಲಿಗೆ ಶಾಸಕರು 10 ಲಕ್ಷ ರೂ. ಸ್ವಂತ ಅನುದಾನವನ್ನು ಬಿಡುಗಡೆಗೊಳಿಸಿ ಶಿಲಾ ನ್ಯಾಸ ನಡೆಸಿದ್ದರು. ಆದರೆ ಈ ತನಕ ಕೆಲಸ ಆರಂಭಿಸದೇ ನನೆಗುದಿಗೆ ಬಿದ್ದಂತಾಗಿದೆ.
ಈ ಜಾಗವು ಪಟ್ಟಣದ ಬ್ಯಾಂಕ್ ರಸ್ತೆಯಲ್ಲಿ ಎದ್ದು ಕಾಣುತ್ತಿದ್ದು, ಅದು ಗ್ರಾ.ಪಂ.ನ ಗತಕಾಲದ ಬಸ್ ನಿಲ್ದಾಣ ಆಗಿತ್ತು. ಆದರೆ ಅಭಿವೃದ್ಧಿಯತ್ತ ಗ್ರಾಮ ಸಾಗುತ್ತಿದ್ದಾಗ ವಾಹನ ದಟ್ಟಣೆ ಹೆಚ್ಚಿದ ಕಾರಣಕ್ಕೆ ಬೆಳ್ತಂಗಡಿ-ಪುತ್ತೂರು ನಡುವಣ ರಾಜ್ಯ ಹೆದ್ದಾರಿ ಬದಿ ಗ್ರಾ.ಪಂ.ನ 2 ಎಕ್ರೆ ಜಾಗದಲ್ಲಿ ಹೊಸ ಬಸ್ ನಿಲ್ದಾಣ ಮಾಡಲಾಯಿತು. ಬಳಿಕ ಅಲ್ಲಿಗೆ ಸರಕಾರಿ ಹಾಗೂ ಖಾಸಗಿ ಬಸ್ ಸ್ಥಳಾಂತರವಾಯಿತು. ಬಳಿಕ ಹಳೆ ಬಸ್ ನಿಲ್ದಾಣದಲ್ಲಿ ರಿûಾ ಪಾರ್ಕಿಂಗ್ ಹಾಗೂ ಹಿರೇಬಂಡಾಡಿ, ಬಜತ್ತೂರು ಕಡೆಗೆ ತೆರಳುವ ಜೀಪುಗಳು ಪ್ರಯಾಣಿಕರನ್ನು ಒಯ್ಯುವ ಸೇವೆಯೊಂದಿಗೆ ಕಾರ್ಯಾಚರಿಸುತ್ತಿದ್ದು, ಆಸುಪಾಸಿನಲ್ಲಿ ವಾಣಿಜ್ಯ ಕಟ್ಟಡಗಳು ಬೆಳೆದು ನಿಂತಿದೆ.
ಗೆಳೆಯರ ಬಳಗ ಸಂಘಟನೆಯ ಅಧ್ಯಕ್ಷ ಗುಣಾಕರ ಅಗ್ನಾಡಿ ಕಾಮಗಾರಿ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿ ಶಾಸಕರ ಬಳಿ ಎರಡು ಬಾರಿ ನಿಯೋಗ ತೆರಳಿ ವಿಳಂಬದ ಮನವರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಶಾಸಕರ ಗಮನಕ್ಕೆ ತರಲಾಗಿದೆ
ಕಾಮಗಾರಿ ಕೆಲವು ಕಾರಣದಿಂದ ವಿಳಂಬವಾಗಿದೆ. ಈಗಾಗಲೇ ಶಾಸಕರ ಗಮನಕ್ಕೆ ತರಲಾಗಿದೆ. ಶೀಘ್ರವೇ ಕೆಲಸ ಆರಂಭಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಶಾಸಕರು ಸೂಚಿಸಿದ್ದಾರೆ.
-ಉಷಾ ಮುಳಿಯ, ಗ್ರಾ.ಪಂ. ಅಧ್ಯಕ್ಷರು, ಉಪ್ಪಿನಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ